ಸಂಜನಾ ಆನಂದ್ 
ಸಿನಿಮಾ ಸುದ್ದಿ

ಗ್ಯಾಂಗ್‌ಸ್ಟರ್ ಆಗಿ ಕಾಣಿಸಿಕೊಳ್ಳಲಿರುವ ವಿಕ್ರಮ್ ರವಿಚಂದ್ರನ್ ಸಿನಿಮಾದಲ್ಲಿ ನಟಿ ಸಂಜನಾ ಆನಂದ್ ನಾಯಕಿ? 

ವಿಕ್ರಮ್ ರವಿಚಂದ್ರನ್ ಅವರು ಕಾರ್ತಿಕ್ ರಾಜನ್ ನಿರ್ದೇಶನದ ಎರಡನೇ ಚಿತ್ರದಲ್ಲಿ ಗ್ಯಾಂಗ್‌ಸ್ಟರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈಗಾಗಲೇ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ಶೂಟಿಂಗ್ ನಡೆಯುತ್ತಿದ್ದು, ಚಿತ್ರದ ನಾಯಕಿ ಯಾರೆಂಬ ಸುತ್ತ ಸಾಕಷ್ಟು ಸುದ್ದಿಯಾಗಿದೆ. 

ವಿಕ್ರಮ್ ರವಿಚಂದ್ರನ್ ಅವರು ಕಾರ್ತಿಕ್ ರಾಜನ್ ನಿರ್ದೇಶನದ ಎರಡನೇ ಚಿತ್ರದಲ್ಲಿ ಗ್ಯಾಂಗ್‌ಸ್ಟರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈಗಾಗಲೇ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ಶೂಟಿಂಗ್ ನಡೆಯುತ್ತಿದ್ದು, ಚಿತ್ರದ ನಾಯಕಿ ಯಾರೆಂಬ ಸುತ್ತ ಸಾಕಷ್ಟು ಸುದ್ದಿಯಾಗಿದೆ. ಸಂಜನಾ ಆನಂದ್ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಲಾಗಿದೆ ಎಂಬ ಊಹಾಪೋಹಗಳು ಹರಡಿವೆ.

ದುನಿಯಾ ವಿಜಯ್ ನಿರ್ದೇಶಿಸಿ ನಟಿಸಿದ್ದ ಸಲಗ ಸಿನಿಮಾ ಖ್ಯಾತಿಯ ಸಂಜನಾ, ವಿರಾಟ್ ಅಭಿನಯದ ದಿನಕರ್ ತೂಗುದೀಪ ಅವರ 'ರಾಯಲ್' ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವಿಕ್ರಮ್ ಅವರ ಮುಂದಿನ ಸಿನಿಮಾದ ಭಾಗವಾಗಿ ಸಂಜನಾ ಆಯ್ಕೆಯಾಗಿರುವ ಬಗ್ಗೆ ಅಧಿಕೃತ ಪ್ರಕಟಣೆ ಶೀಘ್ರದಲ್ಲೇ ಹೊರಬೀಳುವ ನಿರೀಕ್ಷೆಯಿದೆ.

ರಕ್ಷಾ ಮತ್ತು ವಿಜಯ್ ಕುಮಾರ್ ನಿರ್ಮಿಸಿದ ಈ ಚಿತ್ರವು ವಿಕ್ರಮ್ ರವಿಚಂದ್ರನ್ ಅವರು ಹೊಸದಾಗಿ ಮರುಪ್ರಾರಂಭಿಸಿದ ಈಶ್ವರಿ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಲಿದೆ. ಸಿನಿಮಾ ಎಕ್ಸ್‌ಪ್ರೆಸ್‌ ಜೊತೆಗಿನ ಹಿಂದಿನ ಮಾತುಕತೆಯಲ್ಲಿ, ಸ್ಕ್ರಿಪ್ಟ್ ಕಚ್ಚಾ ಕಥೆಯನ್ನು ಹೊಂದಿರುತ್ತದೆ ಎಂದು ವಿಕ್ರಮ್ ಉಲ್ಲೇಖಿಸಿದ್ದಾರೆ.

ಸಂಜನಾ ಆನಂದ್, ವಿಕ್ರಮ್ ರವಿಚಂದ್ರನ್

ಈ ಹಿಂದೆ ತಮಿಳಿನ ನಿರ್ದೇಶಕ ವಿಜಯ್ ಚಂದರ್ ಅವರೊಂದಿಗೆ ಕೆಲಸ ಮಾಡಿದ ಕಾರ್ತಿಕ್ ರಾಜನ್, ನಾಗಾರ್ಜುನ ಮತ್ತು ಸಮಂತಾ ಅಭಿನಯದ ತೆಲುಗು ಚಿತ್ರ ರಾಜು ಗಾರಿ ಗಾದಿ 2 ಸಿನಿಮಾದ ಕಥೆ ಬರೆದಿದ್ದಾರೆ. ತಮಿಳಿನ ವೆಬ್ ಸೀರೀಸ್ ನಿಶಾಗೆ ಕೆಲಸ ಮಾಡಿದ ಕಾರ್ತಿಕ್, ಕನ್ನಡದ ಹೆಡ್ ಬುಷ್ ಸಿನಿಮಾದಲ್ಲಿಯೂ ಸಹ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದಾರೆ. ಈ ಎಲ್ಲಾ ಅನುಭವಗಳನ್ನು ಸೇರಿಸಿ ಕನ್ನಡದಲ್ಲಿ ಗ್ಯಾಂಗ್‌ಸ್ಟರ್ ಸಿನಿಮಾ ನಿರ್ದೇಶಿಸಲು ಮುಂದಾಗಿದ್ದಾರೆ ಕಾರ್ತಿಕ್.

ಚಿತ್ರದ ಚಿತ್ರೀಕರಣ ಬೆಂಗಳೂರು ಮತ್ತು ಶಿವಮೊಗ್ಗದಲ್ಲಿ ನಡೆಯಲಿದೆ. ಯುವರಾಜ್ ಸಂಗೀತ, ಪಿಕೆ ಅವರ ಸಂಕಲನ ಚಿತ್ರಕ್ಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT