ಜಾಹ್ನವಿ ಕಪೂರ್- ಜೂನಿಯರ್ ಎನ್‌ಟಿಆರ್ 
ಸಿನಿಮಾ ಸುದ್ದಿ

ಕೊರಟಾಲ ಶಿವ ನಿರ್ದೇಶನದ ಚಿತ್ರದಲ್ಲಿ ಜೂನಿಯರ್ ಎನ್‌ಟಿಆರ್ ಜೊತೆ ಬಾಲಿವುಡ್ ನಟಿ ಜಾಹ್ನವಿ ಕಪೂರ್

ನಿರ್ದೇಶಕ ಕೊರಟಾಲ ಶಿವ ಅವರ ಮುಂಬರುವ ಪ್ಯಾನ್-ಇಂಡಿಯಾ ಚಿತ್ರದಲ್ಲಿ ನಟಿ ಜಾಹ್ನವಿ ಕಪೂರ್ 'ಆರ್‌ಆರ್‌ಆರ್' ಖ್ಯಾತಿಯ ಜೂನಿಯರ್ ಎನ್‌ಟಿಆರ್ ಜೊತೆಗೆ ಕಾಣಿಸಿಕೊಳ್ಳಲಿದ್ದಾರೆ ಎಂದು ಚಿತ್ರತಂಡ ಸೋಮವಾರ ಘೋಷಿಸಿದ್ದಾರೆ.

ಹೈದರಾಬಾದ್: ನಿರ್ದೇಶಕ ಕೊರಟಾಲ ಶಿವ ಅವರ ಮುಂಬರುವ ಪ್ಯಾನ್-ಇಂಡಿಯಾ ಚಿತ್ರದಲ್ಲಿ ನಟಿ ಜಾಹ್ನವಿ ಕಪೂರ್ 'ಆರ್‌ಆರ್‌ಆರ್' ಖ್ಯಾತಿಯ ಜೂನಿಯರ್ ಎನ್‌ಟಿಆರ್ ಜೊತೆಗೆ ಕಾಣಿಸಿಕೊಳ್ಳಲಿದ್ದಾರೆ ಎಂದು ಚಿತ್ರತಂಡ ಸೋಮವಾರ ಘೋಷಿಸಿದ್ದಾರೆ.

ದಕ್ಷಿಣ ಭಾರತದ ಚಿತ್ರರಂಗದಲ್ಲಿ ಜಾಹ್ನವಿ ಕಪೂರ್ ಅವರು ಇದೇ ಮೊದಲ ಬಾರಿಗೆ ಪದಾರ್ಪಣೆ ಮಾಡುತ್ತಿದ್ದು, ಇನ್ನೂ ಹೆಸರಿಸದ ಈ ಸಿನಿಮಾ 2024ರ ಏಪ್ರಿಲ್ 5 ರಂದು ಬಿಡುಗಡೆಯಾಗಲಿದೆ.

ಪತ್ರಿಕಾ ಪ್ರಕಟಣೆ ಪ್ರಕಾರ, 'ಎನ್‌ಟಿಆರ್ 30' ಸಿನಿಮಾದಲ್ಲಿ 'ನಟಿ ಜಾನ್ವಿ ಕಪೂರ್' ತಮ್ಮ ಪ್ರತಿಭೆಯನ್ನು ದಕ್ಷಿಣ ಭಾರತದ ಸಿನಿಮಾಗಳಲ್ಲಿ ತೋರಿಸಲು ಸಿದ್ಧರಾಗಿದ್ದಾರೆ.

ಇಂದು 26ನೇ ವರ್ಷಕ್ಕೆ ಕಾಲಿಟ್ಟಿರುವ ನಟಿ ತನ್ನ ಅಧಿಕೃತ ಇನ್‌ಸ್ಟಾಗ್ರಾಮ್ ಪುಟದಲ್ಲಿ ಈ ಕುರಿತು ಖಚಿತಪಡಿಸಿದ್ದಾರೆ.

'ಇದು ಅಂತಿಮವಾಗಿ ನಡೆಯುತ್ತಿದೆ. ನನ್ನ ನೆಚ್ಚಿನ ಜೂನಿಯರ್ ಎನ್‌ಟಿಆರ್ ಜೊತೆಗೆ ಪ್ರಯಾಣಿಸಲು ಕಾಯಲು ಇನ್ನು ಸಾಧ್ಯವಿಲ್ಲ' ಎಂದು ಅವರು ಬರೆದಿದ್ದಾರೆ.

ಈ ಚಿತ್ರವು ಜೂನಿಯರ್ ಎನ್‌ಟಿಆರ್ ಅವರ 30ನೇ ಸಿನಿಮಾವಾಗಿದ್ದು, ಇದನ್ನು ಎನ್‌ಟಿಆರ್ ಆರ್ಟ್ಸ್‌ನ ಹರಿಕೃಷ್ಣ ಕೆ ಮತ್ತು ಯುವಸುಧಾ ಆರ್ಟ್ಸ್‌ನ ಸುಧಾಕರ್ ಮಿಕ್ಕಿಲಿನೇನಿ ನಿರ್ಮಿಸಲಿದ್ದಾರೆ.

ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಲಿದ್ದಾರೆ. ಆರ್ ರತ್ನವೇಲು ಛಾಯಾಗ್ರಹಣ, ಸಾಬು ಸಿರಿಲ್ ಕಲಾ ನಿರ್ದೇಶಕ ಮತ್ತು ಶ್ರೀಕರ್ ಪ್ರಸಾದ್ ಸಂಕಲನ ಚಿತ್ರಕ್ಕಿದೆ.

ಮಲಯಾಳಂ ಚಲನಚಿತ್ರ 'ಹೆಲೆನ್'ನ ಅಧಿಕೃತ ಹಿಂದಿ ರೂಪಾಂತರವಾದ 'ಮಿಲಿ' ನಲ್ಲಿ ಜಾಹ್ನವಿ ಕೊನೆಯದಾಗಿ ಕಾಣಿಸಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT