ಕ್ಯಾಪ್ಟನ್ ಮಿಲ್ಲರ್ ನಲ್ಲಿ ಶಿವರಾಜ್ ಕುಮಾರ್ 
ಸಿನಿಮಾ ಸುದ್ದಿ

ಧನುಷ್ ನಟನೆಯ 'ಕ್ಯಾಪ್ಟನ್ ಮಿಲ್ಲರ್' ಚಿತ್ರೀಕರಣದಲ್ಲಿ ಶಿವರಾಜ್‌ಕುಮಾರ್ ಭಾಗಿ

ಇತ್ತೀಚೆಗಷ್ಟೇ ರಜನಿಕಾಂತ್ ಅವರ ಜೈಲರ್ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ ಶಿವರಾಜಕುಮಾರ್, ಈಗ ಧನುಷ್ ನಾಯಕನಾಗಿ ನಟಿಸುತ್ತಿರುವ ಅವರ ಮುಂದಿನ ತಮಿಳು ಚಿತ್ರ ಕ್ಯಾಪ್ಟನ್ ಮಿಲ್ಲರ್ ಸೆಟ್‌ಗೆ ಸೇರಲಿದ್ದಾರೆ.

ಇತ್ತೀಚೆಗಷ್ಟೇ ರಜನಿಕಾಂತ್ ಅವರ ಜೈಲರ್ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ ಶಿವರಾಜಕುಮಾರ್, ಈಗ ಧನುಷ್ ನಾಯಕನಾಗಿ ನಟಿಸುತ್ತಿರುವ ಅವರ ಮುಂದಿನ ತಮಿಳು ಚಿತ್ರ ಕ್ಯಾಪ್ಟನ್ ಮಿಲ್ಲರ್ ಸೆಟ್‌ಗೆ ಸೇರಲಿದ್ದಾರೆ.

ಅರುಣ್ ಮಾಥೇಶ್ವರನ್ ನಿರ್ದೇಶನದಲ್ಲಿ ಸೂಪರ್ ಸ್ಟಾರ್ ಧನುಷ್ ಅವರ ಅಣ್ಣನಾಗಿ ಶಿವರಾಜ್ ಕುಮಾರ್ ನಟಿಸಲಿದ್ದಾರೆ ಎಂದು ವರದಿಯಾಗಿದೆ.  ಕುಟ್ರಾಂ ನಲ್ಲಿ ನಡೆಯುವ ಶೂ ಟಿಂಗ್ ಶೆಡ್ಯೂಲ್ ನಲ್ಲಿ ಶಿವರಾಜ್ ಕುಮಾರ್ ಭಾಗಿಯಾಗಲಿದ್ದಾರೆ. ಇಂದಿನಿಂದ 10 ದಿನಗಳ ಕಾಲ ಶೂಟಿಂಗ್ ನಲ್ಲಿ ಭಾಗವಹಿಸಲಿದ್ದಾರೆ,

ಸ್ವಾತಂತ್ರ್ಯ ಪೂರ್ವದಲ್ಲಿ ನಡೆದ ಕಥೆಯು ಕ್ಯಾಪ್ಟನ್ ಮಿಲ್ಲರ್ ಚಿತ್ರಕತೆಯಾಗಿದೆ, ಕಿಶನ್, ಪ್ರಿಯಾಂಕಾ ಮೋಹನ್, ನಿವೇದಿತಾ ಸತೀಶ್, ಮಲಯಾಳಂ ನಟ ಸುಮೇಶ್ ಮೂರ್ ಮತ್ತು ಜಾನ್ ಕೊಕ್ಕೆನ್ ಸಹ ನಟಿಸಿದ್ದಾರೆ.

ಶ್ರೇಯಸ್ ಕೃಷ್ಣ ಅವರ ಛಾಯಾಗ್ರಹಣದೊಂದಿಗೆ, ಕ್ಯಾಪ್ಟನ್ ಮಿಲ್ಲರ್ ಜಿವಿ ಪ್ರಕಾಶ್ ಕುಮಾರ್ ಅವರ ಸಂಗೀತ ಮತ್ತು ನಾಗೂರನ್ ಅವರ ಸಂಕಲನ ಹೊಂದಿದೆ. ಸತ್ಯ ಜ್ಯೋತಿ ಫಿಲ್ಮ್ಸ್ ಬೆಂಬಲದೊಂದಿಗೆ, ಕ್ಯಾಪ್ಟನ್ ಮಿಲ್ಲರ್ ಪಟ್ಟಾಸ್ ಮತ್ತು ಮಾರನ್ ಪ್ರೊಡಕ್ಷನ್ ಹೌಸ್‌ನೊಂದಿಗೆ ಧನುಷ್ ಅವರ ಮೂರನೇ ಸಹಯೋಗವಾಗಿದೆ.

ಶಿವರಾಜಕುಮಾರ್ ಕನ್ನಡ ಇಂಡಸ್ಟ್ರಿಯ ಅತ್ಯಂತ  ಜನಪ್ರಿಯ ನಟರಲ್ಲೊಬ್ಬರಾಗಿದ್ದಾರೆ. ನಿರ್ದೇಶಕ ಶ್ರೀನಿ ಜೊತೆಗಿನ ಘೋಸ್ಟ್ ಮತ್ತು ಯೋಗರಾಜ್ ಭಟ್ ಅವರ ಕರಟಕ ಧಮನಕ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.  ಸಂಗೀತ ನಿರ್ದೇಶಕ  ಅರ್ಜುನ್ ಜನ್ಯ ಅವರ ಚೊಚ್ಚಲ ನಿರ್ದೇಶನದ ಸಿನಿಮಾದಲ್ಲಿ ಶಿವಣ್ಣ ಅಭಿನಯಿಸುತ್ತಿದ್ದಾರೆ. ಇದರ ಜೊತೆಗೆ ಭೈರತಿ ರಣಗಲ್‌ ನಲ್ಲಿಯೂ ಶಿವಣ್ಣ ಅಭಿನಯಿಸುತ್ತಿದ್ದಾರೆ. ಇದು ಹಲವು ಭಾಷೆಗಳಲ್ಲಿ ತೆರೆ ಕಾಣಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘Parivar together’: ಪಿಂಪ್ರಿ-ಚಿಂಚ್‌ವಾಡ್ ಪಾಲಿಕೆ ಚುನಾವಣೆ; ಶರದ್ ಪವಾರ್ ಜೊತೆ ಮೈತ್ರಿ ಘೋಷಿಸಿದ ಅಜಿತ್ ಪವಾರ್!

'ಎಂತೆಂಥಹ ಚಕ್ರವರ್ತಿಗಳೇ ಮೂಲೆಗುಂಪಾಗಿದ್ದಾರೆ: ಮುಕ್ಕಾಲು ಪ್ರಪಂಚ ಗೆದ್ದ ಅಲೆಕ್ಸಾಂಡರ್ ಶಾಶ್ವತ ಇರಲಿಲ್ಲ, ಸದ್ದಾಂ ಹುಸೇನ್ ಅವಿತುಕೊಂಡ'

ವೈಕುಂಠ ಏಕಾದಶಿ ಯಾವಾಗ: ವ್ರತ ಮಹಿಮೆ ಏನು; ಏಕಾದಶಿಯಂದೇ ವೈಕುಂಠ ದ್ವಾರ ತೆರೆಯುವುದೇಕೆ?

ರೋಹಿಣಿ ನಕ್ಷತ್ರದವರಿಗೆ ಕೃಷ್ಣನಂತೆ ಅನೇಕ ಪತ್ನಿಯರು ಇರ್ತಾರಾ: ಪುನರ್ವಸು ನಕ್ಷತ್ರದಲ್ಲಿ ಜನಿಸಿದರೆ ರಾಮನಂತೆ ವನವಾಸವೇ?

ಚಿತ್ರದುರ್ಗ ಬಸ್ ದುರಂತ: DNA ವರದಿ ಆಧರಿಸಿ ಕುಟುಂಬಗಳಿಗೆ ಮೃತದೇಹ ಹಸ್ತಾಂತರ

SCROLL FOR NEXT