ರಾಮ್ ಗೋಪಾಲ್ ವರ್ಮಾ 
ಸಿನಿಮಾ ಸುದ್ದಿ

37 ವರ್ಷಗಳ ನಂತರ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

ಖ್ಯಾತ ಚಲನಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಗುಂಟೂರಿನ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದಲ್ಲಿ ಬಿ ಟೆಕ್ ಮುಗಿಸಿದ 37 ವರ್ಷಗಳ ನಂತರ ತಮ್ಮ ಎಂಜಿನಿಯರಿಂಗ್ ಪದವಿ ಪ್ರಮಾಣಪತ್ರವನ್ನು ಪಡೆದುಕೊಂಡಿದ್ದಾರೆ.

ವಿಜಯವಾಡ: ಖ್ಯಾತ ಚಲನಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಗುಂಟೂರಿನ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದಲ್ಲಿ ಬಿ ಟೆಕ್ ಮುಗಿಸಿದ 37 ವರ್ಷಗಳ ನಂತರ ತಮ್ಮ ಎಂಜಿನಿಯರಿಂಗ್ ಪದವಿ ಪ್ರಮಾಣಪತ್ರವನ್ನು ಪಡೆದುಕೊಂಡಿದ್ದಾರೆ.

ಜನಪ್ರಿಯ ಚಲನಚಿತ್ರ ನಿರ್ದೇಶಕರಾಗಿರುವ ಆರ್‌ಜಿವಿ, ತಮ್ಮ ಪದವಿ ಪ್ರಮಾಣಪತ್ರದ ಚಿತ್ರವನ್ನು ಮತ್ತು ತಮ್ಮ ಉತ್ಸಾಹವನ್ನೂ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. 

'ನಾನು ಉತ್ತೀರ್ಣರಾದ 37 ವರ್ಷಗಳ ನಂತರ ಇಂದು ನನ್ನ ಬಿ ಟೆಕ್ ಪದವಿಯನ್ನು ಸ್ವೀಕರಿಸಲು ತುಂಬಾ ಥ್ರಿಲ್ ಆಗಿದ್ದೇನೆ. 1985ರಲ್ಲಿ ನಾನು ಸಿವಿಲ್ ಇಂಜಿನಿಯರಿಂಗ್ ಅನ್ನು ಅಭ್ಯಾಸ ಮಾಡಲು ಆಸಕ್ತಿ ಹೊಂದಿಲ್ಲದ ಕಾರಣ ಅದನ್ನು ಎಂದಿಗೂ ತೆಗೆದುಕೊಂಡಿರಲಿಲ್ಲ. ವಿಶ್ವವಿದ್ಯಾನಿಲಯಕ್ಕೆ ಧನ್ಯವಾದಗಳು' ಎಂದು ಅವರು ಟ್ವೀಟ್ ಮಾಡಿದ್ದಾರೆ.

ನಿರ್ದೇಶಕರು 1985ರ  ಜುಲೈನಲ್ಲಿ ನಡೆದ ಬಿ ಟೆಕ್ (ಸಿವಿಲ್ ಇಂಜಿನಿಯರಿಂಗ್) ಪರೀಕ್ಷೆಯಲ್ಲಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದರು.

ಆರ್‌ಜಿವಿ ಅವರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರೊಂದಿಗಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ. 'ಅಶಿಕ್ಷಿತನಾದ ನಾನು ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದ ಉನ್ನತ ಶಿಕ್ಷಣ ಪಡೆದ ಪ್ರಾಧ್ಯಾಪಕರೊಂದಿಗೆ. 'ನಾನು ಗೌರವಾನ್ವಿತ ಉಪಕುಲಪತಿ ಪ್ರೊ. ರಾಜಶೇಖರ್ ಅವರಿಗೆ ನಾನು ಈ ಗೌರವಕ್ಕೆ ಅರ್ಹನಲ್ಲ ಎಂದು ಹೇಳಿದ್ದೇನೆ. ಆದರೆ ಅವರು ನನ್ನನ್ನು ಒತ್ತಾಯಿಸಿದರು' ಎಂದು ಬರೆದಿದ್ದಾರೆ.

'ಪ್ರೊ. ರಾಜಶೇಖರ್ ಅವರೇ.. ನಾನು ಸಾಮಾನ್ಯವಾಗಿ ಗೌರವಕ್ಕೆ ಪಾತ್ರನಾಗಲು ಭಯಪಡುತ್ತೇನೆ. ಆದರೆ, ಈ ಬಾರಿ ಅಂತಹ ಗೌರವಾನ್ವಿತ ಜನರೊಂದಿಗೆ ಗೌರವ ತುಂಬಿದ ಸಂದರ್ಭದಲ್ಲಿ ನಾನು ನಿಜವಾಗಿಯೂ ಗೌರವವನ್ನು ಅನುಭವಿಸುತ್ತೇನೆ' ಎಂದು ಬರೆದಿದ್ದಾರೆ.

60 ವರ್ಷ ವಯಸ್ಸಿನ ಅವರು 1989 ರಲ್ಲಿ ಕ್ರೈಮ್ ಥ್ರಿಲ್ಲರ್ ಶಿವನೊಂದಿಗೆ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT