ಭೈರತಿ ರಣಗಲ್ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ಶಿವರಾಜ್ ಕುಮಾರ್ ಬೈರತಿ ರಣಗಲ್ ಚಿತ್ರಕ್ಕೆ 'ರವಿ ಬಸ್ರೂರು' ಸಂಗೀತ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರ ಮುಂದಿನ ಬಹು ನಿರೀಕ್ಷಿತ 'ಬೈರತಿ ರಣಗಲ್' ಚಿತ್ರಕ್ಕೆ ಕೆಜಿಎಫ್ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಸಂಗೀತ ನೀಡಲಿದ್ದಾರೆ.

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರ ಮುಂದಿನ ಬಹು ನಿರೀಕ್ಷಿತ 'ಬೈರತಿ ರಣಗಲ್' ಚಿತ್ರಕ್ಕೆ ಕೆಜಿಎಫ್ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಸಂಗೀತ ನೀಡಲಿದ್ದಾರೆ.

ಇತ್ತೀಚೆಗಷ್ಟೇ ಬೈರತಿ ರಣಗಲ್ ಚಿತ್ರತಂಡ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿತ್ತು. ಈ ಬೆನ್ನಲ್ಲೇ ಸಿನಿಮಾ ಬಗ್ಗೆ ಚಿತ್ರತಂಡ ಮತ್ತೊಂದು ಅಪ್‌ಡೇಟ್ ಹಂಚಿಕೊಂಡಿದ್ದು, ಚಿತ್ರ ತಂಡಕ್ಕೆ ಸಂಗೀತ ನಿರ್ದೇಶಕ ರವಿ ಬಸ್ರೂರು ಆಗಮನದ ಕುರಿತು ಚಿತ್ರ ತಂಡ ಮಾಹಿತಿ ನೀಡಿದೆ.

2017ರಲ್ಲಿ ಶ್ರೀಮುರಳಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ‘ಮಫ್ತಿ’ (Mufti) ಸಿನಿಮಾದಲ್ಲಿ ಶಿವಣ್ಣ ನಿರ್ವಹಿಸಿದ್ದ `ಭೈರತಿ ರಣಗಲ್’ ಪಾತ್ರ ಸೂಪರ್ ಹಿಟ್ ಆಗಿತ್ತು. ಆ ಸಿನಿಮಾಕ್ಕೆ ಗೆಲ್ಲುವ ಶಕ್ತಿ ತಂದುಕೊಟ್ಟಿದ್ದೇ ಶಿವಣ್ಣನ ಪಾತ್ರ. ಈಗ ಅದೇ ಪಾತ್ರವನ್ನು ಪ್ರಧಾನವಾಗಿರಿಸಿಕೊಂಡು ಸಿನಿಮಾ ತೆರೆಗೆ ಬರುತ್ತಿದ್ದು, ಪಾತ್ರದ ಹೆಸರಾದ `ಭೈರತಿ ರಣಗಲ್’ ಅನ್ನು ಈ ಸಿನಿಮಾಕ್ಕೂ ಇಡಲಾಗಿದೆ. ಭೈರತಿ ರಣಗಲ್ 'ಮಫ್ತಿ' ಚಿತ್ರದ ಪ್ರೀಕ್ವೆಲ್ ಆಗಿದ್ದು, ಚಿತ್ರವನ್ನು ನರ್ತನ್ ನಿರ್ದೇಶನ ಮಾಡಲಿದ್ದಾರೆ.

ಇದೀಗ ಚಿತ್ರದ ನೂತನ ಅಪ್ಡೇಟ್ ನೀಡಲಾಗಿದ್ದು, ಚಿತ್ರಕ್ಕೆ `ಕೆಜಿಎಫ್ 2′ (KGF 2) ಖ್ಯಾತಿಯ ರವಿ ಬಸ್ರೂರು (Ravi Basrur) ಸಂಗೀತ ನಿರ್ದೇಶನ ಮಾಡಲಿದ್ದಾರೆ ಎಂಬುದನ್ನು ಚಿತ್ರತಂಡ ಘೋಷಿಸಿದೆ. ಈ ಕುರಿತು ಪೋಸ್ಟರ್ ಒಂದನ್ನು ಬಿಡುಗಡೆ ಮಾಡುವ ಮೂಲಕ ರವಿ ಬಸ್ರೂರು ಅವರನ್ನು ತಂಡಕ್ಕೆ ಸ್ವಾಗತಿಸಿದೆ. ಈ ಹಿಂದೆ ಇದೇ ತಂಡದ ಜೊತೆ ಕೈ ಜೋಡಿಸಿ `ಮಫ್ತಿ’ಗೂ ಸಂಗೀತ ನಿರ್ದೇಶನ ಮಾಡಿ ಗೆದ್ದಿದ್ದ ರವಿ ಬಸ್ರೂರು ಈಗ `ಭೈರತಿ ರಣಗಲ್’ ಸಿನಿಮಾಗೂ ಕೆಲಸ ನಿರ್ವಹಿಸಲಿದ್ದಾರೆ. ಈ ಮೂಲಕ ಹಿಟ್ ಕಾಂಬಿನೇಷನ್ ಮತ್ತೆ ಒಂದಾದಂತಾಗಿದೆ.

ಶಿವರಾಜ್ ಕುಮಾರ್ ಅವರ ಹೋಂ ಬ್ಯಾನರ್ ಗೀತಾ ಪಿಕ್ಚರ್ಸ್‌ಗೆ ಇದು ಎರಡನೇ ಸಿನಿಮಾ ಆಗಿದ್ದು, ಮೊದಲ ಸಿನಿಮಾ `ವೇದ’ ಮೂಲಕ ಹಿಟ್ ನೀಡಿರುವ ನಿರ್ಮಾಪಕಿ ಗೀತಾ `ಭೈರತಿ ರಣಗಲ್’ ಪ್ಯಾನ್ ಇಂಡಿಯಾ ಸಿನಿಮಾಗೂ ಸಾಥ್ ನೀಡುತ್ತಿದ್ದಾರೆ. ಸದ್ಯದಲ್ಲಿಯೇ ಈ ಸಿನಿಮಾದ ಚಿತ್ರೀಕರಣ ಆರಂಭವಾಗಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT