ಅಲ್ಲು ಅರ್ಜುನ್ 
ಸಿನಿಮಾ ಸುದ್ದಿ

ನಟಿಯನ್ನು ಬ್ಲಾಕ್ ಮಾಡಿದ ಅಲ್ಲು ಅರ್ಜುನ್: ಸ್ಕ್ರೀನ್​ಶಾಟ್ ಹಂಚಿಕೊಂಡ 'ವರುಡು' ನಾಯಕಿ ಭಾನುಶ್ರೀ ಮೆಹ್ರಾ!

2010ರಲ್ಲಿ ತೆರೆಗೆ ಬಂದ `ವರುಡು’ ಚಿತ್ರದಲ್ಲಿ ನಟಿ ಭಾನುಶ್ರೀ ಮೆಹ್ರಾ ಅವರು ಅಲ್ಲು ಅರ್ಜುನ್ ಜತೆ ನಟಿಸಿದ್ದರು. ಇದಾದ ನಂತರ ಭಾನುಶ್ರೀ ಕೆಲವು ಚಲನಚಿತ್ರಗಳಲ್ಲಿ ನಟಿಸಿದರು.

ಹೈದರಾಬಾದ್: 2010ರಲ್ಲಿ ತೆರೆಗೆ ಬಂದ `ವರುಡು’ ಚಿತ್ರದಲ್ಲಿ ನಟಿ ಭಾನುಶ್ರೀ ಮೆಹ್ರಾ ಅವರು ಅಲ್ಲು ಅರ್ಜುನ್ ಜತೆ ನಟಿಸಿದ್ದರು. ಇದಾದ ನಂತರ ಭಾನುಶ್ರೀ ಕೆಲವು ಚಲನಚಿತ್ರಗಳಲ್ಲಿ ನಟಿಸಿದರು.

ಆದರೆ ಅಷ್ಟಾಗಿ ಸಿನಿಮಾದಲ್ಲಿ ಯಶಸ್ಸು ಪಡೆದುಕೊಂಡಿಲ್ಲ. ಭಾನುಶ್ರೀ ಕನ್ನಡದಲ್ಲಿ ಕೋಮಲಕುಮಾರ್ ಅಭಿನಯದ `ಡೀಲ್ ರಾಜ’ ಚಿತ್ರದಲ್ಲಿ ನಟಿಸಿದ್ದರು. ಇತ್ತೀಚೆಗೆ ನಟಿ, ಅಲ್ಲು ಅರ್ಜುನ್‌ ವಿಚಾರವಾಗಿ ಸಖತ್‌ ಸುದ್ದಿಯಲ್ಲಿದ್ದಾರೆ. ಅಲ್ಲು ಅರ್ಜುನ್‌ ತಮ್ಮನ್ನು ಬ್ಲಾಕ್‌ ಮಾಡಿದ್ದಾರೆ ಎಂದು ನಟಿ ಬಹಿರಂಗಪಡಿಸಿದ್ದಾರೆ.

ಭಾನುಶ್ರೀ ನಂತರ ತೆಲುಗಿನಲ್ಲೇ ‘ಡಿಂಗ್ ಡಾಂಗ್ ಬೆಲ್’, ‘ಅಲಾ ಎಲಾ’ ರಾಮ್ ಚರಣ್ ಸಿನಿಮಾ ‘ಗೋವಿಂದುಡು ಅಂದರಿವಾಡೆಲೆ’, ‘ರನ್’ ಮತ್ತು ‘ಮಿಸ್ ಇಂಡಿಯಾ’ದಲ್ಲಿ ಕೀರ್ತಿ ಸುರೇಶ್ ಜತೆ ಚಿಕ್ಕ ಪಾತ್ರದಲ್ಲಿ ನಟಿಸಿದರು.

ಮಾರ್ಚ್ 18ರಂದು ಭಾನುಶ್ರೀ ಟ್ವಿಟ್ಟರ್‌ನಲ್ಲಿ ಅಲ್ಲು ಅರ್ಜುನ್ ತನ್ನನ್ನು ಬ್ಲಾಕ್ ಮಾಡಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ನಟಿ ಟ್ವೀಟ್‌ ಸ್ಕ್ರೀನ್‌ಶಾಟ್‌ ಹಂಚಿಕೊಂಡು ನೀವು ಯಾವಾಗಲಾದರೂ ಹಳಿಯಲ್ಲಿ ಸಿಕ್ಕಿಕೊಂಡಿದ್ದೀರಿ ಎಂದು ಭಾಸವಾಗಿದೆಯೆ? ಆದರೆ ಆ ಅನುಭವ ನನಗಾಗಿದೆ. ನಾನು ಅಲ್ಲು ಅರ್ಜುನ್ ಜತೆ ವರುಡು ಚಿತ್ರದಲ್ಲಿ ನಟಿಸಿದ್ದೇನೆ.

ಆದರೂ ಇನ್ನೂ ಯಾವುದೇ ಕೆಲಸ ಮಾಡಲು ಸಾಧ್ಯವಾಗಲಿಲ್ಲ ಎಂಬುದನ್ನು ನೆನಪಿಡಿ. ಕೆಲಸ ಸಿಗುತ್ತಿಲ್ಲ ಎಂದು ನೆನಪು ಮಾಡಿಕೊಂಡಿದ್ದೇನೆ. ಆದರೆ, ನನ್ನ ಕಷ್ಟಗಳಿಂದಲೇ ಖುಷಿಯನ್ನು ಕಂಡುಕೊಳ್ಳಲು ಕಲಿತಿದ್ದೇನೆ. ಅದರಲ್ಲೂ ಅಲ್ಲು ಅರ್ಜುನ್ ಟ್ವಿಟರ್‌ನಲ್ಲಿ ನನ್ನನ್ನು ಬ್ಲಾಕ್ ಮಾಡಿದ್ದ ಮೇಲೆ ಕಲಿತುಕೊಂಡಿದ್ದೇನೆ’ ಎಂದು ಟ್ವೀಟ್ ಮಾಡಿದ್ದಾರೆ. ಭಾನುಶ್ರೀ ಈ ಟ್ವೀಟ್‌ ನಂತರದಲ್ಲಿ ಮತ್ತೊಂದು ಟ್ವೀಟ್ ಅನ್ನು ಹಂಚಿಕೊಂಡಿದ್ದಾರೆ, ತನ್ನ ವೃತ್ತಿಜೀವನದ ಹಿನ್ನಡೆಗೆ ಅಲ್ಲು ಅರ್ಜುನ್‌ ಕಾರಣರಲ್ಲ ಎಂತಲೂ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT