ಗುರುದೇವ್ ಹೊಯ್ಸಳ ಚಿತ್ರದ ಟ್ರೈಲರ್ 
ಸಿನಿಮಾ ಸುದ್ದಿ

ಡಾಲಿ ಧನಂಜಯ ಅಭಿನಯದ 'ಗುರುದೇವ್ ಹೊಯ್ಸಳ' ಚಿತ್ರದ ಟ್ರೈಲರ್ ಬಿಡುಗಡೆ

ಡಾಲಿ ಧನಂಜಯ ನಟನೆಯ ಬಹು ನಿರೀಕ್ಷಿತ ಗುರುದೇವ್‌ ಹೊಯ್ಸಳ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ರಗಡ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಧನಂಜಯ್ ಮಿಂಚಿದ್ದಾರೆ. 

ಬೆಂಗಳೂರು: ಡಾಲಿ ಧನಂಜಯ ನಟನೆಯ ಬಹು ನಿರೀಕ್ಷಿತ ಗುರುದೇವ್‌ ಹೊಯ್ಸಳ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ರಗಡ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಧನಂಜಯ್ ಮಿಂಚಿದ್ದಾರೆ. 

ಡಾಲಿ ಧನಂಜಯ್ ನಟನೆಯ 25ನೇ ಸಿನಿಮಾ ಹೊಯ್ಸಳ ಟ್ರೈಲರ್ ಇಂದು ಬಿಡುಗಡೆಯಾಗಿದ್ದು, ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟ ಸುದೀಪ್ ಹಾಗೂ ಇತರೆ ಗಣ್ಯರು ಟ್ರೈಲರ್ ಬಿಡುಗಡೆ ಮಾಡಿದರು. ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್​ನಲ್ಲಿ ಟ್ರೈಲರ್ ವೀಕ್ಷಣೆಗೆ ಲಭ್ಯವಿದೆ. 

ಹೊಯ್ಸಳನಿಗೆ ಜೋಡಿಯಾಗಿ ಅಮೃತಾ ಅಯ್ಯಂಗಾರ್ ಕಾಣಿಸಿಕೊಂಡಿದ್ದು, ಅಚ್ಯುತ್ ಕುಮಾರ್, ನವೀನ್ ಶಂಕರ್, ಅವಿನಾಶ್, ಪ್ರತಾಪ್ ನಾರಾಯಣ್, ರಾಜೇಶ್ ನಟರಂಗ, ನಾಗಭೂಷಣ್ ಹಾಗೂ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.  ಈ ಮೊದಲೇ ಬಿಡುಗಡೆ ಆಗಿದ್ದ ಪೋಸ್ಟರ್, ಟೀಸರ್​ಗಳಿಂದ ಇದೊಂದು ಪೊಲೀಸ್ ಅಧಿಕಾರಿಯ ಕತೆ ಎಂಬುದು ಪ್ರೇಕ್ಷಕರಿಗೆ ತಿಳಿದಿತ್ತು. 2:22 ನಿಮಿಷದ ಟ್ರೈಲರ್ ಇದಾಗಿದ್ದು, ಟ್ರೈಲರ್​ನಲ್ಲಿ ಡಾಲಿ ಧನಂಜಯ್ ಅಬ್ಬರಿಸಿದ್ದಾರೆ. 

ಟ್ರೈಲರ್​ನಲ್ಲಿ ಡಾಲಿ ಹೇಳುವ ಖಡಕ್ ಸಂಭಾಷಣೆಗಳು ಅವರ ಅವರ ಪಾತ್ರ ಎಷ್ಟು ರಗಡ್ ಆಗಿದೆ ಎಂಬುದನ್ನು ಅಂದಾಜಿಸಬಹುದಾಗಿದೆ.  ಇದೊಂದು ಸಾಮಾನ್ಯ ಪೊಲೀಸ್-ವಿಲನ್ ಕತೆ ಮಾತ್ರವೇ ಅಲ್ಲದೆ, ಭಾಷೆ-ನೆಲದ ವಿಷಯವನ್ನೂ ಸಿನಿಮಾ ಒಳಗೊಂಡಿರುವ ಕಥೆಯಾಗಿದೆ. ಟೀಸರ್​ನಲ್ಲಿದ್ದ ಕನ್ನಡ ಧ್ವಜ, ಸಂಗೊಳ್ಳಿ ರಾಯಣ್ಣ ಪ್ರತಿಮೆಗಳು ಟ್ರೈಲರ್​ನಲ್ಲಿಯೂ ಇವೆ. ಟ್ರೈಲರ್​ನಲ್ಲಿ ನಾಯಕ ಹಾಗೂ ವಿಲನ್​ಗಳ ಹೊರತಾಗಿ ಬೇರೆ ಪಾತ್ರಗಳಿಗೆ ಪ್ರಾಮುಖ್ಯತೆ ಕಡಿಮೆ. ಅದರಲ್ಲಿಯೂ ನಾಯಕಿ ಅಮೃತಾ ಅಯ್ಯಂಗಾರ್ ಕೆಲವೇ ಕ್ಷಣಗಳಲ್ಲಿ ಬಂದು ಮರೆಯಾಗುತ್ತಾರೆ.

ಕೆ.ಆರ್.ಜಿ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ಯೋಗಿ. ಜಿ. ರಾಜ್ ಹಾಗೂ ಕಾರ್ತಿಕ್ ಗೌಡ ನಿರ್ಮಿಸಿರುವ ‘ಗುರುದೇವ್ ಹೊಯ್ಸಳ’ ಸಿನಿಮಾ ಇದೇ ಮಾರ್ಚ್ 30ರಂದು ವಿಶ್ವದಾದ್ಯಂತ ಕನ್ನಡ ಭಾಷೆಯಲ್ಲಿಯೇ ಬಿಡುಗಡೆಯಾಗಲಿದೆ. ಅಜನೀಶ್ ಲೋಕನಾಥ್ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!