ಹೊಸ ಚಿತ್ರದಲ್ಲಿ ಶಿವಣ್ಣ ಮತ್ತು ಗಣೇಶ್ 
ಸಿನಿಮಾ ಸುದ್ದಿ

ಸೂರಪ್ಪ ಬಾಬು ನಿರ್ಮಾಣದ ಹೊಸ ಸಿನಿಮಾದಲ್ಲಿ ಶಿವಣ್ಣ-ಗಣೇಶ್; ನಿರ್ದೇಶಕ ಕೆ.ಎಸ್ ರವಿಕುಮಾರ್ ಆ್ಯಕ್ಷನ್ ಕಟ್!

ಕನ್ನಡದಲ್ಲಿ ಮತ್ತೊಂದು ಮಲ್ಟಿಸ್ಟಾರ್ ಸಿನಿಮಾ ಸದ್ದಿಲ್ಲದೇ ರೂಪುಗೊಳ್ಳುತ್ತಿದೆ. ಶಿವರಾಜ್ ಕುಮಾರ್ ಮತ್ತು ಗಣೇಶ್  ಕಾಂಬಿನೇಷನ್ ನಲ್ಲಿ ಹೊಸ ಸಿನಿಮಾವೊಂದು ಮೂಡಿಬರುತ್ತಿದೆ. 'ಕೋಟಿಗೊಬ್ಬ 3' ಸಿನಿಮಾ ಬಳಿಕ ಸೂರಪ್ಪ ಬಾಬು ಮತ್ತೆ ಹೊಸ ಸಿನಿಮಾಗಾಗಿ ಕೈ ಹಾಕಿದ್ದಾರೆ.

ಕನ್ನಡದಲ್ಲಿ ಮತ್ತೊಂದು ಮಲ್ಟಿಸ್ಟಾರ್ ಸಿನಿಮಾ ಸದ್ದಿಲ್ಲದೇ ರೂಪುಗೊಳ್ಳುತ್ತಿದೆ. ಶಿವರಾಜ್ ಕುಮಾರ್ ಮತ್ತು ಗಣೇಶ್  ಕಾಂಬಿನೇಷನ್ ನಲ್ಲಿ ಹೊಸ ಸಿನಿಮಾವೊಂದು ಮೂಡಿಬರುತ್ತಿದೆ. 'ಕೋಟಿಗೊಬ್ಬ 3' ಸಿನಿಮಾ ಬಳಿಕ ಸೂರಪ್ಪ ಬಾಬು ಮತ್ತೆ ಹೊಸ ಸಿನಿಮಾಗಾಗಿ ಕೈ ಹಾಕಿದ್ದಾರೆ.

ನಿರ್ಮಾಪಕ ಸೂರಪ್ಪ ಬಾಬು ಹೊಸ ಸಿನಿಮಾದ ಬಗ್ಗೆ ಕೆಲವು ದಿನಗಳಿಂದ ಸುದ್ದಿ ಓಡಾಡುತ್ತಲೇ ಇತ್ತು. ಮಲ್ಟಿಸ್ಟಾರರ್ ಸಿನಿಮಾ ನಿರ್ಮಾಣ ಮಾಡೋಕೆ ಮುಂದಾಗಿದ್ದಾರೆ. ಶಿವಣ್ಣ ಹಾಗೂ ಗಣೇಶ್ ಇಬ್ಬರೂ ಒಪ್ಪಿದ್ದಾರಂತೆ ಅನ್ನೋ ಸುದ್ದಿಯೀಗ ಪಕ್ಕಾ ಆಗಿದೆ.

ತಮಿಳಿನ ಖ್ಯಾತ ನಿರ್ದೇಶಕ ಕೆ ಎಸ್ ರವಿಕುಮಾರ್ ಸ್ಯಾಂಡಲ್‌ವುಡ್‌ಗೆ ಮತ್ತೆ ಎಂಟ್ರಿ ಕೊಟ್ಟಿದ್ದಾರೆ. ಇವರು ಶಿವರಾಜ್‌ಕುಮಾರ್‌ ಹಾಗೂ ಗಣೇಶ್‌ ಜೊತೆಯಾಗಿ ನಟಿಸುತ್ತಿರುವ ಸಿನಿಮಾಗೆ ಆಕ್ಷನ್ ಕಟ್ ಹೇಳುವುದು ಕನ್ಫರ್ಮ್ ಆಗಿದೆ.

ಸೂರಪ್ಪ ಬಾಬು ಈ ಹಿಂದೆ ಕೆಎಸ್ ರವಿಕುಮಾರ್ ಜೊತೆ ಕೋಟಿಗೊಬ್ಬ 2 ಚಿತ್ರದಲ್ಲಿ ಕೆಲಸ ಮಾಡಿದ್ದಾರೆ. ಇದು ಅವರ ಎರಡನೇ  ಪ್ರಾಜೆಕ್ಟ್. ಇದು ಶಿವರಾಜಕುಮಾರ್ ಅವರೊಂದಿಗೆ ನಿರ್ಮಾಪಕರ ಎರಡನೇ ಸಿನಿಮಾ ಇದಾಗಿದೆ, ಆದರೆ ಗಣೇಶ್ ಜೊತೆ ಇದು ಮೊದಲನೆಯ ಸಿನಿಮಾವಾಗಿದೆ.

ಇಬ್ಬರು ಸ್ಟಾರ್‌ಗಳನ್ನು ಒಳಗೊಂಡಿರುವ ಪ್ರಾಜೆಕ್ಟ್  ನಿರ್ಮಾಣ ಮಾಡಲು  ನನಗೆ ಸಂತೋಷವಾಗಿದೆ, ಹಿರಿಯ ನಿರ್ದೇಶಕರು ನಿನಿಮಾ ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾ ಕನ್ನಡದಲ್ಲಿಯೇ ಬರಲಿದೆ ಎಂದು  ಸೂರಪ್ಪ ಬಾಬು ಹೇಳುತ್ತಾರೆ.

ರಾಂಬಾಬು ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಬರುತ್ತಿರುವ ಚಿತ್ರವು ಇನ್ನೂ ಪ್ರಾಥಮಿಕ ಹಂತದಲ್ಲಿದೆ, ಇಬ್ಬರು ನಟರು ತಮ್ಮ ಪ್ರಸ್ತುತ ಕಮಿಟ್‌ಮೆಂಟ್‌ಗಳನ್ನು ಪೂರ್ಣಗೊಳಿಸಿದ ನಂತರ ಜೂನ್‌ನಲ್ಲಿ ಶೂಟಿಂಗ್ ಆರಂಭವಾಗಲಿದೆ.  ಚಿತ್ರದ ಮುಹೂರ್ತದ ದಿನಾಂಕದಂದು ತಾರಾಗಣ ಮತ್ತು ಉಳಿದ ವಿವರಗಳನ್ನು ಬಹಿರಂಗ ಪಡಿಸಲಾಗುವುದು.

ಶಿವರಾಜ್‌ಕುಮಾರ್, ತಮಿಳಿನಲ್ಲಿ ರಜನಿಕಾಂತ್ ಅಭಿನಯದ ಜೈಲರ್ ಮತ್ತು ಧನುಷ್ ಅವರ ಕ್ಯಾಪ್ಟನ್ ಮಿಲ್ಲರ್ ಅವರ ಎರಡು ಯೋಜನೆಗಳ ಹೊರತಾಗಿ, ಶ್ರೀನಿ ಅವರ ಘೋಸ್ಟ್ ಮತ್ತು ಯೋಗರಾಜ್ ಭಟ್ ಅವರ ಕರಟಕ ಧಮನಕದಲ್ಲಿ ಬ್ಯುಸಿಯಾಗಿದ್ದಾರೆ. ಅವರ ಸಾಲಿನಲ್ಲಿ ಅರ್ಜುನ್ ಜನ್ಯ ಅವರ ಸಿನಿಮಾ ಕೂಡ ಇದೆ.

ಇನ್ನೊಂದೆಡೆ ಗಣೇಶ್ ಬಾನದಾರಿಯಲ್ಲಿ ಬಿಡುಗಡೆಗೆ ಕಾಯುತ್ತಿದ್ದಾರೆ. ನಟ ಚೇತನ್ ಕುಮಾರ್ ಜೊತೆ ಕೈಜೋಡಿಸುವ ಬಗ್ಗೆಯೂ ಸುದ್ದಿಯಿದೆ. ಇದು ಇನ್ನೂ ಅಧಿಕೃತವಾಗಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT