ವೀಕೆಂಡ್ ವಿತ್ ರಮೇಶ್ ಸೀಸನ್ ನ ಪ್ರೋಮೋ ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಮಾರ್ಚ್ 25ರಿಂದ 'ವೀಕೆಂಡ್ ವಿತ್ ರಮೇಶ್ ಸೀಸನ್ 5': ಈ ಬಾರಿ ಸಾಧಕರ ಸೀಟಿನಲ್ಲಿ ಕೂರುವ ಅತಿಥಿಗಳು ಇವರೇ...

ಕರ್ನಾಟಕದ ವಿವಿಧ ಕ್ಷೇತ್ರಗಳ ಸಾಧಕರ ಜೀವನಗಾಥೆಯನ್ನು ತೋರಿಸುವ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ ಕಾರ್ಯಕ್ರಮ 'ವೀಕೆಂಡ್ ವಿತ್ ರಮೇಶ್'. ಈಗಾಗಲೇ 4 ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿ 5ನೇ ಸೀಸನ್ ಗೆ ಕಾಲಿಟ್ಟಿದೆ. ವೀಕ್ಷಕರು ಕಾತರದಿಂದ ಕಾಯುತ್ತಿರುವ ದಿನ ಬಂದೇ ಬಿಟ್ಟಿದೆ.

ಕರ್ನಾಟಕದ ವಿವಿಧ ಕ್ಷೇತ್ರಗಳ ಸಾಧಕರ ಜೀವನಗಾಥೆಯನ್ನು ತೋರಿಸುವ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ ಕಾರ್ಯಕ್ರಮ 'ವೀಕೆಂಡ್ ವಿತ್ ರಮೇಶ್'. ಈಗಾಗಲೇ 4 ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿ 5ನೇ ಸೀಸನ್ ಗೆ ಕಾಲಿಟ್ಟಿದೆ. ಕಳೆದ ಮೂರೂವರೆ ವರ್ಷಗಳಿಂದ ವೀಕ್ಷಕರು ಕಾತರದಿಂದ ಕಾಯುತ್ತಿರುವ ದಿನ ಬಂದೇ ಬಿಟ್ಟಿದೆ.

ಮಾರ್ಚ್ 25ರಿಂದ ಶನಿವಾರ ಮತ್ತು ಭಾನುವಾರ ರಾತ್ರಿ 9 ಗಂಟೆಗೆ ನಟ, ನಿರೂಪಕ, ವಾಗ್ಮಿ ರಮೇಶ್ ಅರವಿಂದ್ ಅವರ ಸಾರಥ್ಯದಲ್ಲಿ ಪ್ರಸಾರ ಕಾಣಲಿದೆ. ಶೋನ ಪ್ರೋಮೋಗಳು ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. 

ಈ ಬಾರಿಯ ಸಾಧಕರ ಸೀಟಿನಲ್ಲಿ ಯಾರ್ಯಾರು ಕೂರಲಿದ್ದಾರೆ?: ವೀಕೆಂಡ್ ವಿತ್ ರಮೇಶ್ ಸೀಸನ್ 5ನ ಕುರಿತು ನಿನ್ನೆ ವಾಹಿನಿಯ ಚೀಫ್ ಕಂಟೆಂಟ್ ಆಫೀಸರ್ ರಾಘವೇಂದ್ರ ಹುಣಸೂರು ಮತ್ತು ನಿರೂಪಕ ನಟ ರಮೇಶ್ ಅರವಿಂದ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಅದರಲ್ಲಿ ಈ ಬಾರಿಯ ಸೀಸನ್ ನಲ್ಲಿ ಬರುವ ಅತಿಥಿಗಳ ಹೆಸರನ್ನು ಬಹಿರಂಗಪಿಸಿದರು. 

ಮೊದಲ ಎಪಿಸೋಡ್ ನಲ್ಲಿ ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ ಕಾಣಿಸಿಕೊಳ್ಳಲಿದ್ದಾರೆ. ಅವರ ಭಾಗದ ಚಿತ್ರೀಕರಣ ಇಂದು ಆರಂಭವಾಗಲಿದೆ ಎಂದು ರಾಘವೇಂದ್ರ ಹುಣಸೂರು ಮಾಹಿತಿ ನೀಡಿದರು. 

ನಟಿ, ಮಾಜಿ ಸಂಸದೆ ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ 

ಎರಡನೇ ಎಪಿಸೋಡ್ ನಲ್ಲಿ ಕನ್ನಡ ಸೇರಿದಂತೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ, ಅದ್ಭುತ ನೃತ್ಯಗಾರ ಪ್ರಭುದೇವ ಸಾಧಕರ ಕುರ್ಚಿಯ ಮೇಲೆ ಕೂರಲಿದ್ದಾರೆ.

ನಟ, ನಿರ್ದೇಶಕ ಪ್ರಭುದೇವ 

ಈ ಸೀಸನ್​ನಲ್ಲಿ ನಟ ಧ್ರುವ ಸರ್ಜಾ, ನಟಿ ರಚಿತಾ ರಾಮ್, ನಟಿ ಮಾಲಾಶ್ರೀ, ಇಶಾ ಫೌಂಡೇಶನ್​ನ ಜಗ್ಗಿ ವಾಸುದೇವ್ , ಖ್ಯಾತ ಹೃದ್ರೋಗ ತಜ್ಞ ಮಂಜುನಾಥ್ ಸೇರಿದಂತೆ ಇನ್ನೂ ಹಲವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸದ್ಗುರು ಜಗ್ಗಿ ವಾಸುದೇವ 

ವಿಶೇಷವೆಂದರೆ ಇನ್ನು 16 ಸಾಧಕರ ಬಳಿಕ ನೂರನೇ ಸಾಧಕರು ಬರಲಿದ್ದು, ಆ ಎಪಿಸೋಡ್​ಗೆ ಬಹಳ ವಿಶೇಷ ಅತಿಥಿಯೊಬ್ಬರು ಸಾಧಕರ ಕುರ್ಚಿ ಏರಲಿದ್ದಾರೆ. ನೂರನೇ ಎಪಿಸೋಡ್​ಗೆ ಬರುವ ಅತಿಥಿ ಆ ಚೇರ್​ಗೆ ನ್ಯಾಯ ಕೊಡಲಿದ್ದಾರೆ ಎಂದರು ನಟ ರಮೇಶ್ ಅರವಿಂದ್.

ಇಲ್ಲಿಯವರೆಗೂ 84 ಸಾಧಕರು ಕುರ್ಚಿಯ ಮೇಲೆ ಕೂತಿದ್ದು 110 ಸಂಚಿಕೆಗಳು ಪ್ರಸಾರವಾಗಿವೆ. ಇನ್ನು 16 ಸಾಧಕರು ಅದ ಬಳಿಕ ಸೆಂಚುರಿ ಬಾರಿಸುತ್ತೇವೆ. ಸಿನಿಮಾದಲ್ಲಿಯೂ ಸೆಂಚುರಿ ಹೊಡಿದಿದ್ದೇನೆ ಎಂದು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT