ಬೃಂದಾ ಆಚಾರ್ಯ 
ಸಿನಿಮಾ ಸುದ್ದಿ

'ಕೌಸಲ್ಯ ಸುಪ್ರಜಾ ರಾಮ' ಚಿತ್ರದಲ್ಲಿ ಬೃಂದಾ ಆಚಾರ್ಯ ನಟನೆ

ನಿರ್ದೇಶಕ ಶಶಾಂಕ್ ಅವರ ಮುಂದಿನ ಚಿತ್ರದಲ್ಲಿ ಕೃಷ್ಣ ನಾಯಕ ನಟನಾಗಿದ್ದರೆ, ನಾಯಕ ನಟಿ ಪಾತ್ರದಲ್ಲಿ ಬೃಂದಾ ಆಚಾರ್ಯ ಬಣ್ಣ ಹಚ್ಚಲಿದ್ದಾರೆ. 

ನಿರ್ದೇಶಕ ಶಶಾಂಕ್ ಅವರ ಮುಂದಿನ ಚಿತ್ರದಲ್ಲಿ ಕೃಷ್ಣ ನಾಯಕ ನಟನಾಗಿದ್ದರೆ, ನಾಯಕ ನಟಿ ಪಾತ್ರದಲ್ಲಿ ಬೃಂದಾ ಆಚಾರ್ಯ ಬಣ್ಣ ಹಚ್ಚಲಿದ್ದಾರೆ. 

ಪ್ರೇಮಮ್ ಪೂಜ್ಯಮ್, ಜ್ಯೂಲಿಯೆಟ್-2 ನಲ್ಲಿ ನಟಿಸಿದ್ದ ನಟಿ, ಈಗ ಕೃಷ್ಣ ಹಾಗೂ ಶಶಾಂಕ್ ಅವರೊಂದಿಗೆ ಮೊದಲ ಬಾರಿಗೆ ಸಿನಿಮಾದ ಯೋಜನೆಯೊಂದಕ್ಕೆ ಜೊತೆಯಾಗಿದ್ದಾರೆ. ಕೌಟುಂಬಿಕ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ತಾಯಿ-ಮಗನ ಸೆಂಟಿಮೆಂಟ್ ಇರಲಿದೆ.

ನಟಿ ಬೃಂದಾದ ಪಾತ್ರದ ಬಗ್ಗೆ ವಿವರ ಹಂಚಿಕೊಂಡಿರುವ ಶಶಾಂಕ್, ನಟಿ ಶಿವಾನಿ ಎಂಬ ಇಂಜಿನಿಯರಿಂಗ್ ವಿದ್ಯಾರ್ಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ನಟಿ ಸಾಂಪ್ರದಾಯಿಕ ಹಾಗೂ ಆಧುನಿಕ ದೃಷ್ಟಿಕೋನದ ನಡುವೆ ಸಮತೋಲನ ಕಾಯ್ದುಕೊಳ್ಳುವ ಪಾತ್ರದಲ್ಲಿ ನಟಿಸುತ್ತಿದ್ದಾರೆ ಅವರ ಪಾತ್ರ ಇಂದಿನ ಪೀಳಿಗೆಯನ್ನು ಪ್ರತಿನಿಧಿಸುತ್ತದೆ ಎಂದು ಹೇಳಿರುವ ನಿರ್ದೇಶಕ ಶಶಾಂಕ್, ಬೃಂದಾ ಅವರನ್ನು ಪ್ರತಿಭಾವಂತ ನಟಿ ಎಂದು ಹೇಳಿದ್ದಾರೆ. 

ಸಿನಿಮಾಗೆ ಆಫರ್ ಸಿಕ್ಕಿದ್ದು ಹೇಗೆ ಎಂಬ ಬಗ್ಗೆ ಮಾಹಿತಿ ನೀಡಿರುವ ಬೃಂದಾ, ಮತ್ತೊಂದು ಸಿನಿಮಾ ಶೂಟಿಂಗ್ ವೇಳೆಯಲ್ಲಿ ನಿರ್ದೇಶಕರು ನನ್ನನ್ನು ನೋಡಿದ್ದರು. ನಾನೂ ಅವರ ಸಿನಿಮಾಗಳ ಅಭಿಮಾನಿಯಾಗಿದ್ದೆ, ಮೊಗ್ಗಿನ ಮನಸು ನನ್ನ ಅಚ್ಚುಮೆಚ್ಚಿನ ಚಿತ್ರ. ಅವರೊಂದಿಗೆ ಕೆಲಸ ಮಾಡಲು ನಾನೂ ಆಸಕ್ತಳಾಗಿದ್ದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT