ರವಿಚಂದ್ರನ್ 
ಸಿನಿಮಾ ಸುದ್ದಿ

ಗುರುರಾಜ್ ಕುಲಕರ್ಣಿ ಮುಂದಿನ ಸಿನಿಮಾದಲ್ಲಿ ರವಿಚಂದ್ರನ್ ನಟನೆ

ಕ್ರೇಜಿ ಸ್ಟಾರ್ ರವಿಚಂದ್ರನ್ ಹೊಸ ಪ್ರಯೋಗಗಳಿಗೆ ಮುಂದಾಗುತ್ತಿದ್ದಾರೆ. ಅನೀಶ್ ಜೊತೆಗೆ ಗೌರಿ ಶಂಕರದಲ್ಲಿ ನಟಿಸುತ್ತಿರುವ ರವಿಚಂದ್ರನ್, ಮತ್ತೊಂದು ಆಸಕ್ತಿದಾಯಕ ಸಿನಿಮಾಗೆ ಒಪ್ಪಿಗೆ ನೀಡಿದ್ದಾರೆ.

ಕ್ರೇಜಿ ಸ್ಟಾರ್ ರವಿಚಂದ್ರನ್ ಹೊಸ ಪ್ರಯೋಗಗಳಿಗೆ ಮುಂದಾಗುತ್ತಿದ್ದಾರೆ. ಅನೀಶ್ ಜೊತೆಗೆ ಗೌರಿ ಶಂಕರದಲ್ಲಿ ನಟಿಸುತ್ತಿರುವ ರವಿಚಂದ್ರನ್, ಮತ್ತೊಂದು ಆಸಕ್ತಿದಾಯಕ ಸಿನಿಮಾಗೆ ಒಪ್ಪಿಗೆ ನೀಡಿದ್ದಾರೆ.

ರವಿಚಂದ್ರನ್ ಅವರ ಮುಂದಿನ ಸಿನಿಮಾ ನಿರ್ದೇಶಕ ಗುರುರಾಜ್ ಕುಲಕರಣಿ (ನಾಡಗೌಡ) ನಿರ್ದೇಶನದ ಕಾನೂನು ಕಥಾಹಂದರದ್ದಾಗಿರಲಿದೆ. ಅಮೃತ್ ಅಪಾರ್ಟ್ಮೆಂಟ್ ನ ನಿರ್ದೇಶಕ, ಆಕ್ಸಿಡೆಂಟ್ ಹಾಗೂ ಲಾಸ್ಟ್ ಬಸ್ ನ  ನಿರ್ಮಾಪಕ ಇದೇ ಮೊದಲ ಬಾರಿಗೆ ಸಿನಿಮಾ ಮಾಡುತ್ತಿದ್ದಾರೆ. 

ಏ.23 ರಂದು ಸಿನಿಮಾ ಅಧಿಕೃತವಾಗಿ ಸೆಟ್ಟೇರಲಿದೆ. ಇದಕ್ಕೂ ಮುನ್ನ ತಂಡದಿಂದ ಚಿತ್ರದ ಶೀರ್ಷಿಕೆ ಘೋಷಣೆಯಾಗಲಿದೆ ಹಾಗೂ ರವಿಚಂದ್ರನ್ ನಿರ್ವಹಿಸುತ್ತಿರುವ ಪಾತ್ರದ ವಿವರಗಳು ಹಾಗೂ ಫಸ್ಟ್ ಲುಕ್ ಬಹಿರಂಗವಾಗಲಿದೆ.

ಕಥೆ ಕೇಳಿದ ಬಳಿಕ ರವಿಚಂದ್ರನ್ ಈ ಸಿನಿಮಾದ  ಕಥೆ ಇಂದಿನ ಪೀಳಿಗೆಯೊಂದಿಗೆ ಕನೆಕ್ಟ್ ಆಗಲು ಅವಕಾಶ ನೀಡುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು ಹಾಗೂ ವಿವಿಧ ಫಾರ್ಮಾಟ್ ಗಳಲ್ಲಿ ಇಂದಿನ ದಿನಗಳ ಕಂಟೆಂಟ್ ಗೆ ಹೊಂದಾಣಿಕೆಯಾಗುತ್ತದೆ ಎಂದು ಹೇಳಿದ್ದಾಗಿ ನಿರ್ದೇಶಕ ಗುರುರಾಜ್ ಹೇಳಿದ್ದಾರೆ. ಈ ಸಿನಿಮಾ ಮೂಲಕ ರವಿಚಂದ್ರನ್ ಅವರಿಗೆ ಹೊಸ ವೀಕ್ಷಕರು ಲಭ್ಯವಾಗಲಿದ್ದಾರೆ ಎನ್ನುತ್ತಾರೆ ಗುರುರಾಜ್.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT