ಶ್ರೇಯಸ್ ಮಂಜು 
ಸಿನಿಮಾ ಸುದ್ದಿ

ಕಾಲೇಜು ಲವ್ ಸ್ಟೋರಿ ಆಧಾರಿತ ಸಿನಿಮಾಗೆ ಶ್ರೇಯಸ್ ಮಂಜು ನಾಯಕ!

ಕಮರ್ಷಿಯಲ್ ಎಂಟರ್‌ಟೈನರ್, ಪಡ್ಡೆಹುಲಿಯೊಂದಿಗೆ ಪಾದಾರ್ಪಣೆ ಮಾಡಿದ ನಟ ಶ್ರೇಯಸ್ ಮಂಜು ನಂತರ ರಾಣಾ ದೊಂದಿಗೆ ಔಟ್-ಅಂಡ್-ಔಟ್ ಆಕ್ಷನ್ ಚಿತ್ರವನ್ನು ಮಾಡಿದ್ದರು.

ಕಮರ್ಷಿಯಲ್ ಎಂಟರ್‌ಟೈನರ್, ಪಡ್ಡೆಹುಲಿಯೊಂದಿಗೆ ಪಾದಾರ್ಪಣೆ ಮಾಡಿದ ನಟ ಶ್ರೇಯಸ್ ಮಂಜು ನಂತರ ರಾಣಾ ದೊಂದಿಗೆ ಔಟ್-ಅಂಡ್-ಔಟ್ ಆಕ್ಷನ್ ಚಿತ್ರವನ್ನು ಮಾಡಿದ್ದರು. ಇದೀಗ ಶ್ರೇಯಸ್ ಮಂಜು ಹಲವು ಪ್ರಯೋಗಗಳನ್ನು ಮಾಡುತ್ತಿದ್ದು ಕಾಲೇಜು ಲವ್ ಸ್ಟೋರಿಯಲ್ಲಿ ಅಭಿನಯಿಸುತ್ತಿದ್ದಾರೆ.

ಶ್ರೇಯಸ್ ಮಂಜು ತಮ್ಮ ಮುಂದಿನ ವಿಷ್ಣು ಪ್ರಿಯಾ ಬಿಡುಗಡೆಗಾಗಿ ಕಾಯುತ್ತಿದ್ದು ಇದೊಂದು ಪ್ರೇಮಕಥೆ ಎಂದು ಬಿಂಬಿಸಲಾಗಿದೆ. ಇದೀಗ ಕಾಲೇಜು ಪ್ರೇಮಕಥೆಯಲ್ಲಿ ಅವರು ನಟಿಸಲು ಸಿದ್ಧರಾಗಿದ್ದು ಆ ಚಿತ್ರಕ್ಕೆ ಇತ್ತೀಚೆಗೆ ಸಹಿ ಹಾಕಿದ್ದಾರೆ.

ಈ ಹಿಂದೆ ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ ಚಿತ್ರದಲ್ಲಿ ನಿರ್ದೇಶಕ ಸಂತೋಷ್ ಆನಂದ್‌ರಾಮ್‌ಗೆ ಸಹಾಯಕರಾಗಿ ಕೆಲಸ ಮಾಡಿದ್ದ ಮಧು ಗೌಡ ಗಂಗೂರ್ ಅವರು ಈ ಚಿತ್ರದ ಮೂಲಕ ತಮ್ಮ ಚೊಚ್ಚಲ ಪ್ರವೇಶವನ್ನು ಗುರುತಿಸಿದ್ದಾರೆ. ನಿರ್ಮಾಪಕರು ನಾಲ್ಕು ನಾಯಕಿಯರನ್ನು ಶಾರ್ಟ್‌ಲಿಸ್ಟ್ ಮಾಡಿದ್ದು ಶೀಘ್ರದಲ್ಲೇ ನಾಯಕಿಯನ್ನು ಅಂತಿಮಗೊಳಿಸಲಿದ್ದಾರೆ. ಇನ್ನುಳಿದ ಪಾತ್ರವರ್ಗವನ್ನು ಕೂಡ ಚಿತ್ರತಂಡ ಅಂತಿಮಗೊಳಿಸಲಿದೆ.

ಏನ್ಷಿಯಂಟ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಆರ್ ಸಂತೋಷ್ ಕುಮಾರ್ ಅವರು ನಿರ್ಮಿಸಿರುವ ಚಿತ್ರಕ್ಕೆ ಅರ್ಜುನ್ ಜನ್ಯ ಅವರ ಸಂಗೀತ ಮತ್ತು ಗಗನ್ ಗೌಡ ಅವರ ಛಾಯಾಗ್ರಹಣವಿದೆ. ಚಿತ್ರವು ಏಪ್ರಿಲ್ ತಿಂಗಳಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ. ಇನ್ನು ಬೆಂಗಳೂರು, ಚಿಕ್ಕಮಗಳೂರು, ಕೊಡಗು ಮತ್ತು ಕೇರಳದ ಇತರ ಸ್ಥಳಗಳಲ್ಲಿ ಚಿತ್ರೀಕರಣ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT