ಶ್ರೇಯಸ್ ಮಂಜು 
ಸಿನಿಮಾ ಸುದ್ದಿ

ಕಾಲೇಜು ಲವ್ ಸ್ಟೋರಿ ಆಧಾರಿತ ಸಿನಿಮಾಗೆ ಶ್ರೇಯಸ್ ಮಂಜು ನಾಯಕ!

ಕಮರ್ಷಿಯಲ್ ಎಂಟರ್‌ಟೈನರ್, ಪಡ್ಡೆಹುಲಿಯೊಂದಿಗೆ ಪಾದಾರ್ಪಣೆ ಮಾಡಿದ ನಟ ಶ್ರೇಯಸ್ ಮಂಜು ನಂತರ ರಾಣಾ ದೊಂದಿಗೆ ಔಟ್-ಅಂಡ್-ಔಟ್ ಆಕ್ಷನ್ ಚಿತ್ರವನ್ನು ಮಾಡಿದ್ದರು.

ಕಮರ್ಷಿಯಲ್ ಎಂಟರ್‌ಟೈನರ್, ಪಡ್ಡೆಹುಲಿಯೊಂದಿಗೆ ಪಾದಾರ್ಪಣೆ ಮಾಡಿದ ನಟ ಶ್ರೇಯಸ್ ಮಂಜು ನಂತರ ರಾಣಾ ದೊಂದಿಗೆ ಔಟ್-ಅಂಡ್-ಔಟ್ ಆಕ್ಷನ್ ಚಿತ್ರವನ್ನು ಮಾಡಿದ್ದರು. ಇದೀಗ ಶ್ರೇಯಸ್ ಮಂಜು ಹಲವು ಪ್ರಯೋಗಗಳನ್ನು ಮಾಡುತ್ತಿದ್ದು ಕಾಲೇಜು ಲವ್ ಸ್ಟೋರಿಯಲ್ಲಿ ಅಭಿನಯಿಸುತ್ತಿದ್ದಾರೆ.

ಶ್ರೇಯಸ್ ಮಂಜು ತಮ್ಮ ಮುಂದಿನ ವಿಷ್ಣು ಪ್ರಿಯಾ ಬಿಡುಗಡೆಗಾಗಿ ಕಾಯುತ್ತಿದ್ದು ಇದೊಂದು ಪ್ರೇಮಕಥೆ ಎಂದು ಬಿಂಬಿಸಲಾಗಿದೆ. ಇದೀಗ ಕಾಲೇಜು ಪ್ರೇಮಕಥೆಯಲ್ಲಿ ಅವರು ನಟಿಸಲು ಸಿದ್ಧರಾಗಿದ್ದು ಆ ಚಿತ್ರಕ್ಕೆ ಇತ್ತೀಚೆಗೆ ಸಹಿ ಹಾಕಿದ್ದಾರೆ.

ಈ ಹಿಂದೆ ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ ಚಿತ್ರದಲ್ಲಿ ನಿರ್ದೇಶಕ ಸಂತೋಷ್ ಆನಂದ್‌ರಾಮ್‌ಗೆ ಸಹಾಯಕರಾಗಿ ಕೆಲಸ ಮಾಡಿದ್ದ ಮಧು ಗೌಡ ಗಂಗೂರ್ ಅವರು ಈ ಚಿತ್ರದ ಮೂಲಕ ತಮ್ಮ ಚೊಚ್ಚಲ ಪ್ರವೇಶವನ್ನು ಗುರುತಿಸಿದ್ದಾರೆ. ನಿರ್ಮಾಪಕರು ನಾಲ್ಕು ನಾಯಕಿಯರನ್ನು ಶಾರ್ಟ್‌ಲಿಸ್ಟ್ ಮಾಡಿದ್ದು ಶೀಘ್ರದಲ್ಲೇ ನಾಯಕಿಯನ್ನು ಅಂತಿಮಗೊಳಿಸಲಿದ್ದಾರೆ. ಇನ್ನುಳಿದ ಪಾತ್ರವರ್ಗವನ್ನು ಕೂಡ ಚಿತ್ರತಂಡ ಅಂತಿಮಗೊಳಿಸಲಿದೆ.

ಏನ್ಷಿಯಂಟ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಆರ್ ಸಂತೋಷ್ ಕುಮಾರ್ ಅವರು ನಿರ್ಮಿಸಿರುವ ಚಿತ್ರಕ್ಕೆ ಅರ್ಜುನ್ ಜನ್ಯ ಅವರ ಸಂಗೀತ ಮತ್ತು ಗಗನ್ ಗೌಡ ಅವರ ಛಾಯಾಗ್ರಹಣವಿದೆ. ಚಿತ್ರವು ಏಪ್ರಿಲ್ ತಿಂಗಳಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ. ಇನ್ನು ಬೆಂಗಳೂರು, ಚಿಕ್ಕಮಗಳೂರು, ಕೊಡಗು ಮತ್ತು ಕೇರಳದ ಇತರ ಸ್ಥಳಗಳಲ್ಲಿ ಚಿತ್ರೀಕರಣ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT