ಸಿನಿಮಾ ಸುದ್ದಿ

ಹೊಯ್ಸಳ ಟ್ರೇಲರ್ ಬಿಡುಗಡೆ ಮಾಡಿದ ಕಿಚ್ಚ ಸುದೀಪ್

Vishwanath S

ನಟ ಧನಂಜಯ್ ಅಭಿನಯದ ಗುರುದೇವ್ ಹೊಯ್ಸಳ ಬಿಡುಗಡೆಯ ಸನಿಹದಲ್ಲಿದ್ದು ಚಿತ್ರತಂಡ ಚಿತ್ರದ ಟ್ರೇಲರ್ ಅನ್ನು ಅದ್ಧೂರಿ ಸಮಾರಂಭದಲ್ಲಿ ಅನಾವರಣಗೊಳಿಸಿದ್ದಾರೆ. ಈ ಸಮಾರಂಭಕ್ಕೆ ನಿರ್ದೇಶಕ ಸಂತೋಷ್ ಆನಂದ್ರಾಮ್ ಅವರೊಂದಿಗೆ ಕಿಚ್ಚ ಸುದೀಪ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಧನಂಜಯ್ ಉತ್ತರ ಕರ್ನಾಟಕದಲ್ಲಿ ಪೋಲೀಸ್ ಆಗಿ ಕಾಣಿಸಿಕೊಂಡಿರುವ ಚಿತ್ರದಲ್ಲಿ ಅವರು ಆಂಗ್ರಿ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಉತ್ತರ ಕರ್ನಾಟಕದ ಆಡುಭಾಷೆಯಲ್ಲಿ ಧನಂಜಯ್ ಕಡಕ್ ಡೈಲಾಗ್‌ಗಳನ್ನು ಹೊಡೆದಿದ್ದು ಅಜನೀಶ್ ಲೋಕನಾಥ್ ಅವರ ಸಂಗೀತ ಚಿತ್ರದ ಹೈಲೈಟ್ ಆಗಿದೆ.

ಕೆಆರ್‌ಜಿ ಸ್ಟುಡಿಯೋಸ್ ನಿರ್ಮಿಸಿರುವ ಈ ಚಿತ್ರವು ಅಮೃತ ಅಯ್ಯಂಗಾರ್, ನವೀನ್ ಶಂಕರ್, ಪ್ರತಾಪ್ ನಾರಾಯಣ್, ಅಚ್ಯುತ್ ಕುಮಾರ್ ಮತ್ತು ಅವಿನಾಶ್ ಸೇರಿದಂತೆ ದೊಡ್ಡ ತಾರಾಂಗಣ ಇದೆ.

SCROLL FOR NEXT