ಮೀನಾ ಸಾಗರ್ 
ಸಿನಿಮಾ ಸುದ್ದಿ

ನಟ ಧನುಷ್ ಜೊತೆ ಮದುವೆ ವದಂತಿ: ಮೌನ ಮುರಿದು ಖಾರವಾಗಿ ಪ್ರತಿಕ್ರಿಯಿಸಿದ ನಟಿ ಮೀನಾ!

ನಟ ಧನುಷ್ ಮತ್ತು ನಟಿ ಮೀನಾ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಕಳೆದ ಕೆಲವು ದಿನಗಳಿಂದ ಹರಡಿತ್ತು. 

ನಟ ಧನುಷ್ ಮತ್ತು ನಟಿ ಮೀನಾ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಕಳೆದ ಕೆಲವು ದಿನಗಳಿಂದ ಹರಡಿತ್ತು. 

ಇಬ್ಬರೂ ಎರಡನೇ ಬಾರಿಗೆ ಮದುವೆಯಾಗಲಿದ್ದು ಮೀನಾಗಾಗಿ ಐಶ್ವರ್ಯಾ ರಜನಿಕಾಂತ್ ಜೊತೆ ಧನುಷ್ ದಾಂಪತ್ಯ ಜೀವನ ಮುರಿದುಕೊಳ್ಳಲಿದ್ದಾರಾ ಎಂಬ ಪ್ರಶ್ನೆಗಳು ಎದ್ದಿದ್ದವು. ಆದರೆ, ಈ ಬಗ್ಗೆ ನಟ ಧನುಷ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ನಟಿ ಮೀನಾ ಎರಡನೇ ಮದುವೆಯ ಸುದ್ದಿಗೆ ಪ್ರತಿಕ್ರಿಯಿಸಿದ್ದಾರೆ.

ದಕ್ಷಿಣ ಭಾರತದಲ್ಲಿ ನಟಿ ಮೀನಾ ಸಹ ಖ್ಯಾತರಾಗಿದ್ದಾರೆ. ಇನ್ನು ಮೀನಾ ಕುಟುಂಬಸ್ಥರು ಅವರಿಗೆ ಮತ್ತೆ ಮದುವೆ ಮಾಡಲು ಮುಂದಾಗಿದ್ದಾರೆ ಎಂಬ ಸುದ್ದಿ ಈ ಹಿಂದೆಯೂ ಹಬ್ಬಿತ್ತು. ಇದರಿಂದ ಅವರ ಮಗಳು ನೈನಿಕಾಗೆ ಉತ್ತಮ ಭವಿಷ್ಯ ಸಿಗುತ್ತದೆ ಎಂದು ಹೇಳಲಾಗುತ್ತಿತ್ತು.

13 ವರ್ಷಗಳ ಹಿಂದೆ ಮೀನಾ ವಿದ್ಯಾಸಾಗರ ಎಂಬುವರನ್ನು ವಿವಾಹವಾಗಿದ್ದರು. ಆದರೆ ವಿದ್ಯಾಸಾಗರ ಶ್ವಾಸಕೋಶದ ಸೋಂಕಿನಿಂದ ಕಳೆದ ವರ್ಷ ಮೃತಪಟ್ಟಿದ್ದರು. ದಂಪತಿಗೆ ನೈನಿಕಾ ಎಂಬ ಮಗಳಿದ್ದಾಳೆ. ಪತಿ ತೀರಿಕೊಂಡ ಕೂಡಲೇ ಮೀನಾಳ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬರತೊಡಗಿತು. ಈ ನಡುವೆ ಧನುಷ್ ಐಶ್ವರ್ಯಾ ರಜನಿಕಾಂತ್ ಅವರಿಗೆ ವಿಚ್ಛೇದನ ನೀಡಿದ ಪ್ರಕರಣವೂ ಮುನ್ನೆಲೆಗೆ ಬಂದಿತ್ತು. ಇನ್ನು ಕೆಲ ವರದಿಗಳ ಪ್ರಕಾರ, ಈ ವರ್ಷ ಜೂನ್-ಜುಲೈನಲ್ಲಿ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾದರೆ ಇಬ್ಬರಿಗೂ ಇದು ಎರಡನೇ ಮದುವೆ. ಧನುಷ್ ಅದಾಗಲೇ ಇಬ್ಬರು ಹೆಣ್ಣು ಮಕ್ಕಳ ತಂದೆಯಾಗಿದ್ದಾರೆ.

ಇದೀಗ ಈ ವಿಚಾರವಾಗಿ ನಟಿ ಮೀನಾ ಮೌನ ಮುರಿದಿದ್ದಾರೆ. ಸಂದರ್ಶನವೊಂದರಲ್ಲಿ ಅವರು, 'ತನ್ನ ಗಂಡನ ಅಗಲಿಕೆಯ ದುಃಖವನ್ನು ಇನ್ನೂ ಮರೆಯಲು ಸಾಧ್ಯವಾಗಿಲ್ಲ. ಇಂದಿಗೂ ಅವರು ಇಲ್ಲ ಎಂದು ನಂಬುವುದಿಲ್ಲ. ಇದರೊಂದಿಗೆ ಈ ವದಂತಿ ಎಲ್ಲಿಂದ ಬಂತು ಎಂದು ನನಗೆ ತಿಳಿದಿಲ್ಲ. 'ಸದ್ಯ ತನ್ನ ವೃತ್ತಿ ಮತ್ತು ನಟನೆಯತ್ತ ಗಮನ ಹರಿಸುತ್ತಿದ್ದೇನೆ. ಒಳ್ಳೆಯ ಚಿತ್ರಗಳು ಮತ್ತು ಕಥೆಗಾಗಿ ಹುಡುಕುತ್ತಿದ್ದೇನೆ. ಮಗಳಿಗೆ ಒಳ್ಳೆಯ ಭವಿಷ್ಯವನ್ನು ಕೊಡಬೇಕೆಂದು ಬಯಸುತ್ತೇನೆ. ಮಗಳೇ ನನ್ನ ಜೀವನದ ಪ್ರಮುಖ ಭಾಗವೆಂದು ಪರಿಗಣಿಸಿರುವುದಾಗಿ ಹೇಳಿದ್ದಾರೆ.

ದಕ್ಷಿಣ ನಟಿ ಮೀನಾ ಅವರ ಪುತ್ರಿ ನೈನಿಕಾ ಸಹ ಬಾಲ ಕಲಾವಿದೆಯಾಗಿ ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. 2016ರಲ್ಲಿ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ನೈನಿಕಾ ತೇರಿ ಎಂಬ ಚಿತ್ರದಲ್ಲಿ ನಟಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Modi ma*****ch**: ರಾಹುಲ್ ಗಾಂಧಿ Voter Adhikar Yatra ವೇದಿಕೆಯಲ್ಲಿ ಅಶ್ಲೀಲ ನಿಂದನೆ, BJP ಕೆಂಡಾಮಂಡಲ!

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

SCROLL FOR NEXT