ರೀಷ್ಮಾ ನಾಣಯ್ಯ 
ಸಿನಿಮಾ ಸುದ್ದಿ

ಪ್ರೇಮ್ ನಿರ್ದೇಶಿಸಿ, ಧ್ರುವ ಸರ್ಜಾ ನಟಿಸಿರುವ 'ಕೆಡಿ' ಸಿನಿಮಾಗೆ ಏಕ್ ಲವ್ ಯಾ ಖ್ಯಾತಿಯ ರೀಷ್ಮಾ ನಾಣಯ್ಯ?

ಏಕ್ ಲವ್ ಯಾ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ನಟಿ ರೀಷ್ಮಾ ನಾಣಯ್ಯ ಅವರು ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಪ್ರೇಮ್ ಅವರ ಮುಂಬರುವ ಬಹುಭಾಷಾ ಚಿತ್ರ 'ಕೆಡಿ - ದಿ ಡೆವಿಲ್' ನಲ್ಲಿ ಕೂಡ ನಟಿಸಲಿದ್ದಾರೆ ಎನ್ನಲಾಗಿದೆ.  ಕೆಡಿ ಸಿನಿಮಾದಲ್ಲಿ ಧ್ರುವ ಸರ್ಜಾ ನಾಯಕನಾಗಿ ನಟಿಸಿದ್ದಾರೆ.

ಏಕ್ ಲವ್ ಯಾ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಮತ್ತು ನಂತರ ರಾಣಾದಲ್ಲಿ ಕೆಲಸ ಮಾಡಿದ ರೀಷ್ಮಾ ನಾಣಯ್ಯ, ಗಣೇಶ್-ಪ್ರೀತಂ ಗುಬ್ಬಿ ಅವರ ಮುಂಬರುವ ಚಿತ್ರ 'ಬಾನದಾರಿಯಲ್ಲಿ' ಸಿನಿಮಾದಲ್ಲೂ ನಟಿಸಿದ್ದಾರೆ. ಈ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಉಪೇಂದ್ರ ಅವರ ನಿರ್ದೇಶನದ 'UI' ನಲ್ಲಿ ಸಹ ಕಾಣಿಸಿಕೊಳ್ಳಲಿದ್ದಾರೆ. ಈ ನಡುವೆ ಪ್ರೇಮ್ ಅವರ ಮುಂಬರುವ ಬಹುಭಾಷಾ ಚಿತ್ರ 'ಕೆಡಿ - ದಿ ಡೆವಿಲ್' ನಲ್ಲಿ ಕೂಡ ನಟಿಸಲಿದ್ದಾರೆ ಎನ್ನಲಾಗಿದೆ.  ಕೆಡಿ ಸಿನಿಮಾದಲ್ಲಿ ಧ್ರುವ ಸರ್ಜಾ ನಾಯಕನಾಗಿ ನಟಿಸಿದ್ದಾರೆ.

ಮೂಲಗಳ ಪ್ರಕಾರ, ಪ್ರೊಡಕ್ಷನ್ ಹೌಸ್ ಮತ್ತು ನಿರ್ದೇಶಕ ಪ್ರೇಮ್ ಅವರು ಚಿತ್ರಕ್ಕಾಗಿ ಕನ್ನಡದ ನಟಿಯನ್ನೇ ಆಯ್ಕೆ ಮಾಡುವ ಇಂಗಿತ ಹೊಂದಿದ್ದರು ಮತ್ತು ಅವರು ಈ ಹಿಂದೆ ಏಕ್ ಲವ್ ಯಾ ಚಿತ್ರದಲ್ಲಿ ನಿರ್ದೇಶಕರೊಂದಿಗೆ ಕೆಲಸ ಮಾಡಿದ್ದ ರೀಷ್ಮಾ ನಾಣಯ್ಯ ಅವರನ್ನೇ ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ.

ಧ್ರುವ ಸರ್ಜಾ ಮತ್ತು ರೀಷ್ಮಾ ಅವರಲ್ಲದೆ, ಚಿತ್ರದಲ್ಲಿ ರವಿಚಂದ್ರನ್, ಸಂಜಯ್ ದತ್ ಮತ್ತು ಶಿಲ್ಪಾ ಶೆಟ್ಟಿ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

1968 ಮತ್ತು 1978ರ ನಡುವೆ ನಡೆದಿರುವ ನೈಜ ಘಟನೆಯನ್ನು ಆಧರಿಸಿದ ಕೆಡಿಯನ್ನು ಅದ್ದೂರಿಯಾಗಿ ಲಾಂಚ್ ಮಾಡಲಾಗಿದೆ. ದೊಡ್ಡ ಬಜೆಟ್ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ಬೆಂಬಲಿಸುತ್ತದೆ. ಚಿತ್ರತಂಡ ಆ ಕಾಲದ ಬೆಂಗಳೂರಿನ ಸೆಟ್‌ಗಳನ್ನು ಮರುಸೃಷ್ಟಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT