ಘೋಸ್ಟ್ ಸಿನಿಮಾ ಪೋಸ್ಟರ್ 
ಸಿನಿಮಾ ಸುದ್ದಿ

ಎರಡು ಪಾರ್ಟ್ ಗಳಲ್ಲಿ ಬರಲಿದೆ ಶಿವರಾಜಕುಮಾರ್ ಅಭಿನಯದ 'ಘೋಸ್ಟ್'!

ಆರ್ ಜೆ ಶ್ರೀನಿ ನಿರ್ದೇಶನದಲ್ಲಿ ಶಿವರಾಜಕುಮಾರ್ ಅಭಿನಯಿಸುತ್ತಿರುವ ‘ಘೋಸ್ಟ್’ ಚಿತ್ರದ ಚಿತ್ರೀಕರಣ ಮುಕ್ತಾಯದ ಹಂತಕ್ಕೆ ಬಂದಿದೆ. ವಿಶೇಷವೆಂದರೆ, ಕಥೆ ಒಂದೇ ಚಿತ್ರಕ್ಕೆ ಮುಗಿಯುವುದಿಲ್ಲ.

ಆರ್ ಜೆ ಶ್ರೀನಿ ನಿರ್ದೇಶನದಲ್ಲಿ ಶಿವರಾಜಕುಮಾರ್ ಅಭಿನಯಿಸುತ್ತಿರುವ ‘ಘೋಸ್ಟ್’ ಚಿತ್ರದ ಚಿತ್ರೀಕರಣ ಮುಕ್ತಾಯದ ಹಂತಕ್ಕೆ ಬಂದಿದೆ. ವಿಶೇಷವೆಂದರೆ, ಕಥೆ ಒಂದೇ ಚಿತ್ರಕ್ಕೆ ಮುಗಿಯುವುದಿಲ್ಲ. ಎರಡನೆಯ ಭಾಗದಲ್ಲೂ ಮುಂದುವರಿಯಲಿದೆ. ಶಿವರಾಜಕುಮಾರ್, ಅನುಪಮ್ ಖೇರ್, ಮಲಯಾಳಂ ನಟ ಜಯರಾಮ್ ತಾರಾಗಣದಲ್ಲಿದ್ದಾರೆ.

ನಿರ್ದೇಶಕ ಶ್ರೀನಿ ಈಗಾಗಲೇ ಮುಂದಿನ ಭಾಗಕ್ಕಾಗಿ ಕೆಲಸ ಮಾಡುತ್ತಿದ್ದಾರೆ.  ಬೃಹತ್ ತಾರಾಬಳಗವು ದೊಡ್ಡ ಮಟ್ಟದಲ್ಲಿ ಒಟ್ಟಾಗಿ ಬರುವಂತೆ ನೋಡಿಕೊಳ್ಳುವ ಕೆಲಸಗಳು ನಡೆಯುತ್ತಿವೆ ಎಂದು ನಿರ್ಮಾಪಕ ಸಂದೇಶ್ ನಾಗರಾಜ್ ಹೇಳಿದ್ದಾರೆ.

ಚಿತ್ರವು ಫ್ರಾಂಚೈಸ್ ಆಗುವ ಸಾಮರ್ಥ್ಯ ಹೊಂದಿದೆ ಎಂದು ನಿರ್ದೇಶಕ ಶ್ರೀನಿ ಹೇಳಿದ್ದಾರೆ.  ಇದೀಗ ನನ್ನ ಗಮನವು ಘೋಸ್ಟ್ ಮೊದಲ ಭಾಗವನ್ನು ಪೂರ್ಣಗೊಳಿಸುವುದರ ಮೇಲಿದೆ. ನಾನು ಇದನ್ನು ಮಾಡಿದ ನಂತರ, ನಾನು ಮುಂದಿನ ಸ್ಕ್ರಿಪ್ಟ್  ಪೂರ್ಣಗೊಳಿಸುತ್ತೇನೆ. ಹಿಂದೆಂದೂ ನೋಡಿರದ ಪಾತ್ರದಲ್ಲಿ ಶಿವರಾಜ್‌ಕುಮಾರ್ ಕಾಣಿಸಿಕೊಂಡಿದ್ದಾರೆ ಎಂದು ವಿವರಿಸಿದ್ದಾರೆ.

ಘೋಸ್ಟ್ ಸಿನಿಮಾದಲ್ಲಿ ಪ್ರಶಾಂತ್ ನಾರಾಯಣ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ, ಮತ್ತೊಂದು ಪ್ರಮುಖ ಪಾತ್ರಕ್ಕಾಗಿ ನಿರ್ದೇಶಕರು ತಮಿಳು ನಟ ವಿಜಯ್ ಸೇತುಪತಿ ಅವರನ್ನು ಸಂಪರ್ಕಿಸುತ್ತಾರೆ ಎಂಬ ಮಾಹಿತಿಯೂ ಕೇಳಿ ಬಂದಿದೆ.  ವಿಜಯ್ ಸೇತುಪತಿಯನ್ನು ಮಹತ್ವದ ಪಾತ್ರಕ್ಕಾಗಿ ಕರೆತರಲು ನಾವು ಉತ್ಸುಕರಾಗಿದ್ದೇವೆ ಮತ್ತು ಕೆಲವು ಸಮಯದಿಂದ ಚರ್ಚೆಗಳು ನಡೆಯುತ್ತಿವೆ, ಆದರೆ ಅಧಿಕೃತ ಮಾಹಿತಿ  ಬರಬೇಕಿದೆ ಎಂದು ಶ್ರೀನಿ ಹೇಳಿದ್ದಾರೆ.

ಘೋಸ್ಟ್ ಸಿನಿಮಾದಲ್ಲಿ ಶಿವರಾಜಕುಮಾರ್‌ಗೆ  ನಾಯಕಿ ಇಲ್ಲ, ಆದರೆ, ಚಿತ್ರದಲ್ಲಿ ಅರ್ಚನಾ ಜೋಯಿಸ್ ಪತ್ರಕರ್ತೆಯಾಗಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಅವರ ಸಂಗೀತ ಮತ್ತು ಮಹೇಂದ್ರ ಸಿಂಹ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT