ಚೈತನ್ಯ 
ಸಿನಿಮಾ ಸುದ್ದಿ

ತೆಲುಗು ಚಿತ್ರರಂಗದ ಖ್ಯಾತ ಕೋರಿಯೊಗ್ರಾಫರ್ ಚೈತನ್ಯ ಆತ್ಮಹತ್ಯೆಗೆ ಶರಣು

ತೆಲುಗು ಚಿತ್ರರಂಗದ ಖ್ಯಾತ ಕೋರಿಯೊಗ್ರಾಫರ್ ಚೈತನ್ಯ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ.

ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ಕೋರಿಯೊಗ್ರಾಫರ್ ಚೈತನ್ಯ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ.

ನೇಣು ಬಿಗಿದುಕೊಂಡು ಚೈತನ್ಯ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ವರದಿಗಳು ತಿಳಿಸಿವೆ. ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿರುವ ಚೈತನ್ಯ ಅವರು ಸಾವಿಗೆ ಸಾಲಬಾಧೆಯೇ ಕಾರಣವೆಂದು ಹೇಳಿಕೊಂಡಿದ್ದಾರಂದು ವರದಿಗಳು ತಿಳಿಸಿವೆ.

ಅವರಿಗೆ 30 ವರ್ಷ ವಯಸ್ಸಾಗಿತ್ತು. ನೆಲ್ಲೂರಿನಲ್ಲಿ ತಮ್ಮ ಮನೆಯಲ್ಲಿ ಭಾನುವಾರ ಚೈತನ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.

‘ನನ್ನ ತಂದೆ ತಾಯಿ ಹಾಗೂ ಸಹೋದರಿ ಚೆನ್ನಾಗಿ ನೋಡಿಕೊಂಡರು. ಆದರೆ, ನಾನು ಅನಿವಾರ್ಯ ಕಾರಣಗಳಿಂದಾಗಿ ಸಾಲ ಮಾಡಿಕೊಂಡೆ. ಅದನ್ನು ತೀರಿಸಲು ಕಷ್ಟವಾಯಿತು. ಹಾಗಾಗಿ ಆತ್ಮಹತ್ಯೆಯ ನಿರ್ಧಾರಕ್ಕೆ ಬಂದಿದ್ದೇನೆ. ನೆಲ್ಲೂರಿನಲ್ಲಿ ಇಂದು ನನ್ನ ಕೊನೆಯ ದಿನ’ ಎಂದು ಚೈತನ್ಯ ವಿಡಿಯೋದಲ್ಲಿ ಹೇಳಿಕೊಂಡಿರುವುದು ಕಂಡು ಬಂದಿದೆ.

ತೆಲುಗಿನ ಜನಪ್ರಿಯ ಡ್ಯಾನ್ಸ್ ಶೋ ‘ಡಿ’ ಮೂಲಕ ಸಾಕಷ್ಟು ಪ್ರಸಿದ್ಧಿ ಪಡೆದಿದ್ದ ಚೈತನ್ಯ ಅವರು, ಪ್ರಭುದೇವ ಸೇರಿದಂತೆ ಹಲವರೊಂದಿಗೆ ಕೆಲಸ ಮಾಡಿದ್ದಾರೆ. ಅಲ್ಲದೇ, ಅನೇಕ ರಿಯಾಲಿಟಿ ಶೋನಲ್ಲಿ ತೀರ್ಪುಗಾರರಾಗಿಯೂ ಕೆಲಸ ಮಾಡಿದ್ದಾರೆ. ಚೈತನ್ಯ ಸಾವಿಗೆ ಹಲವರು ಕಂಬನಿ ಮಿಡಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT