ಚೈತ್ರಾ ಜೆ ಆಚಾರ್ 
ಸಿನಿಮಾ ಸುದ್ದಿ

ಲಿಖಿತ್ ಕುಮಾರ್ ನಿರ್ದೇಶನದ ಪ್ರಯೋಗಾತ್ಮಕ ಥ್ರಿಲ್ಲರ್‌ನಲ್ಲಿ ಮಾಹಿರ್ ಮೊಹಿಯುದ್ದೀನ್- ಚೈತ್ರಾ ಜೆ ಆಚಾರ್ 

ನಿರ್ದೇಶಕ ಲಿಖಿತ್ ಕುಮಾರ್ ಪ್ರಯೋಗಾತ್ಮಕ ಥ್ರಿಲ್ಲರ್‌ನೊಂದಿಗೆ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಲು ಸಿದ್ಧರಾಗಿದ್ದಾರೆ. ಚಿತ್ರದಲ್ಲಿ ಹೊಸ ಮುಖ ಮಾಹಿರ್ ಮೊಹಿಯುದ್ದೀನ್ ನಟಿಸಿದ್ದು, ಚೈತ್ರಾ ಜೆ ಆಚಾರ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಹರಿಣಿ ಸುಂದರರಾಜನ್ ಅವರು ವಿಶೇಷ ಹಾಡೊಂದನ್ನು ಹಾಡಿದ್ದಾರೆ.

ನಿರ್ದೇಶಕ ಲಿಖಿತ್ ಕುಮಾರ್ ಪ್ರಯೋಗಾತ್ಮಕ ಥ್ರಿಲ್ಲರ್‌ನೊಂದಿಗೆ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಲು ಸಿದ್ಧರಾಗಿದ್ದಾರೆ. ಚಿತ್ರದಲ್ಲಿ ಹೊಸ ಮುಖ ಮಾಹಿರ್ ಮೊಹಿಯುದ್ದೀನ್ ನಟಿಸಿದ್ದು, ಚೈತ್ರಾ ಜೆ ಆಚಾರ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಹರಿಣಿ ಸುಂದರರಾಜನ್ ಅವರು ವಿಶೇಷ ಹಾಡೊಂದನ್ನು ಹಾಡಿದ್ದಾರೆ.

ಹರಿಣಿ ಸುಂದರರಾಜನ್

ಶೂಟಿಂಗ್ ಕಂಪ್ಲೀಟ್ ಮಾಡಿರುವ ಲಿಕಿತ್ ತಮ್ಮ ಸಿನಿಮಾ ಹೇಗೆ ಯೂನಿಕ್ ಆಗಿರುತ್ತದೆ ಎಂಬುದನ್ನು ವಿವರಿಸುತ್ತಾರೆ. 'ಮಾಹಿರ್ ಮೊಹಿಯುದ್ದೀನ್ ನಿರ್ವಹಿಸಿರುವ ನಾಯಕನ ಪಾತ್ರ ಸಿದ್ಧಾರ್ಥ್, ಶೇ ತೊಂಬತ್ತರಷ್ಟು ಪರದೆಯ ಸಮಯವನ್ನು ಪಡೆಯುತ್ತದೆ ಮತ್ತು ಆತನೊಂದಿಗೆ ಐದು ಪಾತ್ರಗಳು ಪರದೆಯ ಮೇಲೆ ಕನಿಷ್ಠ ಉಪಸ್ಥಿತಿಯನ್ನು ಪಡೆಯುತ್ತವೆ ಮತ್ತು ತಮ್ಮ ಧ್ವನಿಯ ಮೂಲಕ ತಮ್ಮ ಪಾತ್ರಗಳನ್ನು ಮತ್ತಷ್ಟು ಪ್ರತಿನಿಧಿಸುತ್ತವೆ' ಎನ್ನುತ್ತಾರೆ.

ಕಥೆಯು ಸಿದ್ಧಾರ್ಥ್ ಸುತ್ತ ಸುತ್ತುತ್ತದೆ. ಆತ ಹೇಗೆ ಎದುರಾಗುವ ಜೀವನದ ಸವಾಲುಗಳನ್ನು ಎದುರಿಸುತ್ತಾನೆ ಮತ್ತು ಅವ್ಯವಸ್ಥೆಯ ಒಗಟುಗಳಿಂದ ಹೇಗೇ ಪಾರಾಗುತ್ತಾನೆ ಎಂಬುದಾಗಿರುತ್ತದೆ. ಚಿತ್ರವು ಸಮಸ್ಯೆಗಳಿಂದ ತುಂಬಿದ ಆತನ ಪ್ರಯಾಣ ಮತ್ತು ಉಳಿವಿಗಾಗಿ ಆತನ ಹೋರಾಟವನ್ನು ತೋರಿಸುತ್ತದೆ. ರಂಗಭೂಮಿ ಕಲಾವಿದ ಮಾಹಿರ್ ಮೊಹಿಯುದ್ದೀನ್ ಈ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಇದರಲ್ಲಿ ಶ್ರೀನಿವಾಸ್ ಪ್ರಭು, ಮಾಸ್ಟರ್ ಅನುರಾಗ್ ಮತ್ತು ಶಶಿಕಲಾ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಲಕ್ಷ್ಯ ಆರ್ಟ್ ಬ್ಯಾನರ್ ಅಡಿಯಲ್ಲಿ ಟಿ ಶಿವಕುಮಾರ್ ನಿರ್ಮಾಣದ ಈ ಚಿತ್ರಕ್ಕೆ ಶಂಕರ್ ರಾಮನ್ ಮತ್ತು ರಘು ನಿಡುವಳ್ಳಿ ಸಂಭಾಷಣೆ, ಮಿಧುನ್ ಮುಕುಂದನ್ ಸಂಗೀತ ಮತ್ತು ಗೌತಮ್ ಕೃಷ್ಣ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!