ನಟ ಶರತ್ ಬಾಬು 
ಸಿನಿಮಾ ಸುದ್ದಿ

ಹಿರಿಯ ನಟ ಶರತ್ ಬಾಬು ಆರೋಗ್ಯದಲ್ಲಿ ಚೇತರಿಕೆ; ನಿಧನದ ವದಂತಿ ನಂಬಬೇಡಿ: ಕುಟುಂಬಸ್ಥರ ಮನವಿ

ಕನ್ನಡದ ಅಮೃತ ವರ್ಷಿಣಿ, ನಮ್ಮ ಯಜಮಾನ್ರು, ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿರುವ ಬಹುಭಾಷಾ ನಟ ಶರತ್ ಬಾಬು ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂಬುದಾಗಿ ವರದಿಯಾಗಿತ್ತು. ಆದರೆ ಇಂತಹ ವದಂತಿಗಳನ್ನು ನಂಬದಂತೆ ಅವರ ಕುಟುಂಬಸ್ಥರು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಹೈದ್ರಾಬಾದ್: ಕನ್ನಡದ ಅಮೃತ ವರ್ಷಿಣಿ, ನಮ್ಮ ಯಜಮಾನ್ರು, ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿರುವ ಬಹುಭಾಷಾ ನಟ ಶರತ್ ಬಾಬು ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂಬುದಾಗಿ ವರದಿಯಾಗಿತ್ತು. ಆದರೆ ಇಂತಹ ವದಂತಿಗಳನ್ನು ನಂಬದಂತೆ ಅವರ ಕುಟುಂಬಸ್ಥರು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಪ್ರಸ್ತುತ ಅವರು ವೈದ್ಯಕೀಯ ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದು. ಶೀಘ್ರದಲ್ಲಿಯೇ ಗುಣಮುಖರಾಗಲಿದ್ದಾರೆ ಎಂದು ಶರತ್ ಬಾಬು ಅವರ ಸಹೋದರಿ ಹೇಳಿದ್ದಾರೆ. ಶರತ್ ಬಾಬು ಅವರ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರುತ್ತಿರುವ ವದಂತಿಗಳನ್ನು ನಂಬಬೇಡಿ ಎಂದು ಅವರು ಹೇಳಿದ್ದಾರೆ.

ಇತ್ತೀಚಿಗೆ ನಟ ಶರತ್ ಬಾಬು ದಿಢೀರ್ ಅಸ್ವಸ್ಥರಾಗಿದ್ದ ಹಿನ್ನೆಲೆ ಅವರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ನಟನ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಅವರನ್ನು ಬೆಂಗಳೂರಿನಿಂದ ಹೈದರಾಬಾದ್​ನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಶರತ್ ಬಾಬು 1951ರ ಜುಲೈ 31ರಂದು ಶ್ರೀಕಾಕುಳಂ ಜಿಲ್ಲೆಯ ಅಮುದಲಾದಲ್ಲಿ ಜನಿಸಿದರು. ತೆಲುಗಿನ ರಾಮರಾಜ್ಯಂ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಅವರು ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಇನ್ನು ಕನ್ನಡದಲ್ಲಿ ಸುಮಾರು 20ಕ್ಕಿಂತ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT