ನಟ ಶರತ್ ಬಾಬು 
ಸಿನಿಮಾ ಸುದ್ದಿ

ಹಿರಿಯ ನಟ ಶರತ್ ಬಾಬು ಆರೋಗ್ಯದಲ್ಲಿ ಚೇತರಿಕೆ; ನಿಧನದ ವದಂತಿ ನಂಬಬೇಡಿ: ಕುಟುಂಬಸ್ಥರ ಮನವಿ

ಕನ್ನಡದ ಅಮೃತ ವರ್ಷಿಣಿ, ನಮ್ಮ ಯಜಮಾನ್ರು, ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿರುವ ಬಹುಭಾಷಾ ನಟ ಶರತ್ ಬಾಬು ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂಬುದಾಗಿ ವರದಿಯಾಗಿತ್ತು. ಆದರೆ ಇಂತಹ ವದಂತಿಗಳನ್ನು ನಂಬದಂತೆ ಅವರ ಕುಟುಂಬಸ್ಥರು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಹೈದ್ರಾಬಾದ್: ಕನ್ನಡದ ಅಮೃತ ವರ್ಷಿಣಿ, ನಮ್ಮ ಯಜಮಾನ್ರು, ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿರುವ ಬಹುಭಾಷಾ ನಟ ಶರತ್ ಬಾಬು ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂಬುದಾಗಿ ವರದಿಯಾಗಿತ್ತು. ಆದರೆ ಇಂತಹ ವದಂತಿಗಳನ್ನು ನಂಬದಂತೆ ಅವರ ಕುಟುಂಬಸ್ಥರು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಪ್ರಸ್ತುತ ಅವರು ವೈದ್ಯಕೀಯ ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದು. ಶೀಘ್ರದಲ್ಲಿಯೇ ಗುಣಮುಖರಾಗಲಿದ್ದಾರೆ ಎಂದು ಶರತ್ ಬಾಬು ಅವರ ಸಹೋದರಿ ಹೇಳಿದ್ದಾರೆ. ಶರತ್ ಬಾಬು ಅವರ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರುತ್ತಿರುವ ವದಂತಿಗಳನ್ನು ನಂಬಬೇಡಿ ಎಂದು ಅವರು ಹೇಳಿದ್ದಾರೆ.

ಇತ್ತೀಚಿಗೆ ನಟ ಶರತ್ ಬಾಬು ದಿಢೀರ್ ಅಸ್ವಸ್ಥರಾಗಿದ್ದ ಹಿನ್ನೆಲೆ ಅವರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ನಟನ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಅವರನ್ನು ಬೆಂಗಳೂರಿನಿಂದ ಹೈದರಾಬಾದ್​ನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಶರತ್ ಬಾಬು 1951ರ ಜುಲೈ 31ರಂದು ಶ್ರೀಕಾಕುಳಂ ಜಿಲ್ಲೆಯ ಅಮುದಲಾದಲ್ಲಿ ಜನಿಸಿದರು. ತೆಲುಗಿನ ರಾಮರಾಜ್ಯಂ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಅವರು ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಇನ್ನು ಕನ್ನಡದಲ್ಲಿ ಸುಮಾರು 20ಕ್ಕಿಂತ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

SCROLL FOR NEXT