ಸೈರನ್ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ 
ಸಿನಿಮಾ ಸುದ್ದಿ

ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಪುತ್ರ ಚಿತ್ರರಂಗ ಪ್ರವೇಶ: ಸೈರನ್ ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್

ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ ಸೈರನ್ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಲಿದ್ದಾರೆ. ಚಿತ್ರತಂಡ ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್ ಅನ್ನು ಬಿಡುಗಡೆ ಮಾಡಿದ್ದು, ಮೇ 26 ರಂದು ಚಿತ್ರ ಬಿಡುಗಡೆಯಾಗಲಿದೆ ಎಂದು ಘೋಷಿಸಿದ್ದಾರೆ. 

ಹೋರಾಟಗಾರ ಹಾಗೂ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ ಸೈರನ್ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಲಿದ್ದಾರೆ. ಚಿತ್ರತಂಡ ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್ ಅನ್ನು ಬಿಡುಗಡೆ ಮಾಡಿದ್ದು, ಮೇ 26 ರಂದು ಚಿತ್ರ ಬಿಡುಗಡೆಯಾಗಲಿದೆ ಎಂದು ಘೋಷಿಸಿದ್ದಾರೆ. ಚಿತ್ರವನ್ನು ಕೆಆರ್‌ಜಿ ಸ್ಟುಡಿಯೋಸ್ ವಿತರಣೆ ಮಾಡಲಿದೆ. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ರಾಕ್‌ಲೈನ್ ವೆಂಕಟೇಶ್, ಅಶ್ವಿನಿ ಪುನೀತ್ ರಾಜ್‌ಕುಮಾರ್ ಮತ್ತು ಧನಂಜಯ್ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.

ರಾಕ್‌ಲೈನ್ ವೆಂಕಟೇಶ್ ಅವರು ಪ್ರವೀಣ್ ಶೆಟ್ಟಿ ಅವರ ಕನ್ನಡ ಭಾಷೆಗಾಗಿನ ಅವರ ಹೋರಾಟವನ್ನು ನೆನಪಿಸಿಕೊಂಡರು. ಅವರು ಉದಾತ್ತ ಉದ್ದೇಶಕ್ಕಾಗಿ ಹೋರಾಟಗಾರ ಎಂದು ಶ್ಲಾಘಿಸಿದರು. ಪ್ರವೀಣ್ ಅವರನ್ನು ಹೊಸ ಪ್ರತಿಭೆ ಎಂದು ಸ್ವಾಗತಿಸಿದ ವೆಂಕಟೇಶ್, 'ಟ್ರೇಲರ್‌ನಲ್ಲಿ ಅವರು ಹೊಸಬರಂತೆ ಕಾಣುತ್ತಿಲ್ಲ. ಪ್ರವೀರ್ ಅವರಂತಹ ಯುವ ನಟರಿಗೆ ಸ್ಪಷ್ಟ ಮಹತ್ವಾಕಾಂಕ್ಷೆ ಮತ್ತು ತಾಳ್ಮೆ ಮುಖ್ಯ' ಎಂದು ಹೇಳಿದ್ದಾರೆ.

ಕಳೆದ ಎರಡು ದಶಕಗಳಿಂದ ಚಿತ್ರರಂಗದ ಭಾಗವಾಗಿರುವ ರಾಜಾ ವೆಂಕಯ್ಯ ಈ ಚಿತ್ರದ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ನಿಗೂಢ ಕೊಲೆಗೆ ಸಂಬಂಧಿಸಿದಂತೆ ಬುದ್ಧಿವಂತ ತನಿಖಾಧಿಕಾರಿಯಾಗಿ ನಟಿಸಿರುವ ಯುವ ನಟ ಪ್ರವೀರ್ ಅವರ ಅಭಿನಯವನ್ನು ಶ್ಲಾಘಿಸಿದರು.

ಡೆಕ್ಕನ್ ಕೈಂಡ್ ಮೂವಿ ಬ್ಯಾನರ್ ಅಡಿಯಲ್ಲಿ ತಯಾರಾದ ಚಿತ್ರದಲ್ಲಿ ಲಾಸ್ಯ ನಾಯಕಿಯಾಗಿ ನಟಿಸಿದ್ದಾರೆ. ಭಾರದ್ವಾಜ್ ಅವರ ಸಂಗೀತ ಮತ್ತು ನಾಗೇಶ್ ಆಚಾರ್ಯ ಅವರ ಛಾಯಾಗ್ರಹಣವಿದೆ. ಚಿತ್ರವು ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT