ಸುಚಂದ್ರ ದಾಸ್‌ಗುಪ್ತ 
ಸಿನಿಮಾ ಸುದ್ದಿ

ಬೈಕ್ ಟ್ಯಾಕ್ಸಿಯಲ್ಲಿ ತೆರಳುತ್ತಿದ್ದಾಗ ಅಪಘಾತ: 29 ವರ್ಷದ ಉದಯೋನ್ಮುಕ ನಟಿ ಸಾವು!

ಶೂಟಿಂಗ್ ಮುಗಿಸಿ ಬೈಕ್ ಟ್ಯಾಕ್ಸಿ ಮೂಲಕ ಮನೆಗೆ ವಾಪಸ್ಸಾಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ 29 ವರ್ಷದ ಉದಯೋನ್ಮುಕ ನಟಿಯೊಬ್ಬರು ಮೃತಪಟ್ಟಿದ್ದಾರೆ.

ಶೂಟಿಂಗ್ ಮುಗಿಸಿ ಬೈಕ್ ಟ್ಯಾಕ್ಸಿ ಮೂಲಕ ಮನೆಗೆ ವಾಪಸ್ಸಾಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ 29 ವರ್ಷದ ಉದಯೋನ್ಮುಕ ನಟಿಯೊಬ್ಬರು ಮೃತಪಟ್ಟಿದ್ದಾರೆ.

ರಸ್ತೆ ಅಪಘಾತದಲ್ಲಿ ಬಂಗಾಳಿ ಕಿರುತೆರೆ ನಟಿ ಸುಚಂದ್ರ ದಾಸ್‌ಗುಪ್ತ ಮೃತಪಟ್ಟಿದ್ದು ನಟಿಯ ಸಾವಿನಿಂದ ಅವರ ಕುಟುಂಬ ಸದಸ್ಯರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ನಟಿಯ ಸಾವಿನ ಸುದ್ದಿಯಿಂದ ಅವರ ಅಭಿಮಾನಿಗಳು ಕೂಡ ದುಃಖಿತರಾಗಿದ್ದಾರೆ.

ಮನೆಗೆ ವಾಪಸಾಗುತ್ತಿದ್ದಾಗ ಮಾರ್ಗಮಧ್ಯೆ ಸೈಕಲ್ ತುಳಿಯುತ್ತಿದ್ದ ವ್ಯಕ್ತಿಯೊಬ್ಬರು ಅಡ್ಡ ಬಂದಿದ್ದಾರೆ. ಹೀಗಾಗಿ ಬೈಕ್ ಸವಾರ ಏಕಾಏಕಿ ಬ್ರೇಕ್ ಹಾಕಿದ್ದು ಹಿಂದಿನಿಂದ ಬರುತ್ದಿದ್ದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಸುಚಂದ್ರ ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದ ಟ್ರಕ್‌ಗೆ ಆಕೆಯ ಮೇಲೆ ಹರಿದಿದ್ದು ನಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು ವಾಹನಗಳ ಸಂಚಾರಕ್ಕೂ ಕೆಲಕಾಲ ಅಡಚಣೆ ಉಂಟಾಗಿತ್ತು.

ಅಪಘಾತದ ಸುದ್ದಿ ತಿಳಿದ ಕೂಡಲೇ ಬಾರಾನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಪೊಲೀಸರು ಟ್ರಕ್ ಅನ್ನು ವಶಪಡಿಸಿಕೊಂಡಿದ್ದು ಟ್ರಕ್ ಚಾಲಕನನ್ನು ಬಂಧಿಸಿದ್ದಾರೆ. ನಟಿಯ ನಿಧನದಿಂದಾಗಿ ಬೆಂಗಾಲಿ ಚಿತ್ರರಂಗದಲ್ಲಿ ಶೋಕ ಮಡುಗಟ್ಟಿದೆ.

ಸುಚಂದ್ರ ದಾಸಗುಪ್ತ ಯಾರು?
ಸುಚಂದ್ರ ದಾಸ್‌ಗುಪ್ತ ಬಂಗಾಳಿ ಕಿರುತೆರೆಯಲ್ಲಿ ಪ್ರಸಿದ್ಧ ನಟಿಯರಲ್ಲಿ ಒಬ್ಬರು. ಆಕೆ ಅನೇಕ ಪ್ರಸಿದ್ಧ ಬಂಗಾಳಿ ಟಿವಿ ಕಾರ್ಯಕ್ರಮಗಳಲ್ಲಿ ಕೆಲಸ ಮಾಡಿದ್ದಾರೆ. ‘ಗೌರಿ’ ಚಿತ್ರದಲ್ಲಿ ಪೋಷಕ ಪಾತ್ರದಲ್ಲಿ ನಟಿಸಿ ಸಾಕಷ್ಟು ಜನಪ್ರಿಯತೆ ಗಳಿಸಿದ್ದರು. ನಟಿ ಅಪಾರ ಅಭಿಮಾನಿಗಳನ್ನು ಹೊಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT