ಸುಗತ್ ಸತ್ಪತಿ ಅವರಿಗೆ ಸೂಪರ್ ಬೈಕ್ ಉಡುಗೊರೆ 
ಸಿನಿಮಾ ಸುದ್ದಿ

ನೇಪಾಳ ಪ್ರವಾಸ ಆಯೋಜಿಸಿದ ಸಹ ಸವಾರನಿಗೆ 12 ಲಕ್ಷ ರೂ. ಬೈಕ್ ಗಿಫ್ಟ್ ನೀಡಿದ ನಟ ಅಜಿತ್

ಬೈಕ್ ನಲ್ಲಿ ನೇಪಾಳ ಪ್ರವಾಸಕ್ಕೆ ತೆರಳಿದ್ದ ತಮಿಳು ಸೂಪರ್‌ಸ್ಟಾರ್ ಅಜಿತ್ ಕುಮಾರ್ ಅವರು ತಮ್ಮ ಸಹ ಸವಾರನಿಗೆ 12 ಲಕ್ಷ ರೂಪಾಯಿ ದುಬಾರಿ ಬಿಎಂಡಬ್ಲ್ಯು ಸೂಪರ್ ಬೈಕ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.

ಮುಂಬೈ: ಬೈಕ್ ನಲ್ಲಿ ನೇಪಾಳ ಪ್ರವಾಸಕ್ಕೆ ತೆರಳಿದ್ದ ತಮಿಳು ಸೂಪರ್‌ಸ್ಟಾರ್ ಅಜಿತ್ ಕುಮಾರ್ ಅವರು ತಮ್ಮ ಸಹ ಸವಾರನಿಗೆ 12 ಲಕ್ಷ ರೂಪಾಯಿ ದುಬಾರಿ ಬಿಎಂಡಬ್ಲ್ಯು ಸೂಪರ್ ಬೈಕ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.

ಅಜಿತ್ ತನ್ನ ಸಹ ಸವಾರ ಸುಗತ್ ಸತ್ಪತಿ ಅವರಿಗೆ ಸೂಪರ್ ಬೈಕ್ ಉಡುಗೊರೆಯಾಗಿ ನೀಡಿದ್ದು, ಇಬ್ಬರೂ 2022 ರಲ್ಲಿ ಸಿಕ್ಕಿಂಗೆ ಬೈಕ್ ಪ್ರವಾಸ ಕೈಗೊಂಡಿದ್ದರು. ನಂತರ ಹಲವು ಬಾರಿ ಜೊತೆಯಾಗಿ ಬೈಕ್ ಪ್ರವಾಸ ಕೈಗೊಂಡಿದ್ದರು. ಸತ್ಪತಿ ಅವರು ಅಜಿತ್ ಅವರಿಗಾಗಿ ಎರಡು ಬಾರಿ ಬೈಕ್ ಪ್ರವಾಸವನ್ನು ಆಯೋಜಿಸಿದ್ದರು.

ಇತ್ತೀಚೆಗಷ್ಟೇ ನೇಪಾಳ ಪ್ರವಾಸ ಆಯೋಜಿಸಿದ್ದ ಸತ್ಪತಿ ಅವರಿಗೆ ನಟ ಅಜಿತ್ ಅವರು ಬಿಎಂಡಬ್ಲ್ಯು ಸೂಪರ್ ಬೈಕ್ ಉಡುಗೊರೆಯಾಗಿ ನೀಡಿದ್ದಾರೆ.

Bikedekho.com ಪ್ರಕಾರ, ಸೂಪರ್ ಬೈಕ್‌ನ ಆನ್ ರೋಡ್ ಬೆಲೆ ರೂ. 12.95 ಲಕ್ಷ. ರೂಪಾಯಿ.

ನಟ ಅಜಿತ್ ಅವರ ಸರ್ಪ್ರೈಸ್ ಗಿಫ್ಟ್ ಗೆ ಪ್ರತಿಕ್ರಿಯಿಸಿರುವ ಸತ್ಪತಿ ಅವರು, "ಯಾವುದೂ ಪೂರ್ವನಿರ್ಧರಿತವಾಗಿರುವುದಿಲ್ಲ. ನಮ್ಮ ಹಿಂದಿನ ಅಡೆತಡೆಗಳು ಹೊಸ ಆರಂಭಕ್ಕೆ ಕಾರಣವಾಬಹುದು" ಎಂದು ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.

ಬಿಎಂಡಬ್ಲ್ಯು ಸೂಪರ್ ಬೈಕ್ ಜಗತ್ತನ್ನು ಅನ್ವೇಷಿಸಲು ನನಗೆ ನೆರವಾಗಲಿದೆ. ಇದು ಪ್ರೀತಿಯ ಅಣ್ಣನಿಂದ(ಅಜಿತ್ ಕುಮಾರ್) ಸಿಕ್ಕ ಉಡುಗೊರೆ. ಏನನ್ನೂ ಅಪೇಕ್ಷಿಸದ ಹಾಗೂ ಒಳ್ಳೆದನ್ನೇ ಬಯಸುವ ಗುಣ ಅವರದ್ದು. ಅಂತಹ ದೊಡ್ಡ ಸ್ಟಾರ್ ನಟನೊಂದಿಗೆ ಸಂಪರ್ಕ ಹೊಂದಿರುವುದು ನನ್ನ ಅದೃಷ್ಟ ಎಂದು ಸತ್ಪತಿ ಹೇಳಿದ್ದಾರೆ.

"ಅವರು ನನಗೆ ಹೆಚ್ಚು ಒಳ್ಳೆಯದನ್ನು ಬಯಸುವ ಮತ್ತು ಪ್ರತಿಯಾಗಿ ಏನನ್ನೂ ನಿರೀಕ್ಷಿಸದ ಹಿರಿಯ ಸಹೋದರನಂತೆ ಭಾವಿಸಿದರು. ನೀವು ಗ್ರೇಟ್, ಅಣ್ಣಾ" ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT