ನಿತ್ಯಾನಂದ 
ಸಿನಿಮಾ ಸುದ್ದಿ

ನನ್ನ ಇಬ್ರು ಹೆಣ್ಣು ಮಕ್ಕಳು ಗಂಡಂದಿರಿಗೆ ಡಿವೋರ್ಸ್ ಕೊಟ್ಟು ನಿತ್ಯಾನಂದನ ಜೊತೆಗಿದ್ದಾರೆ: ಹಿರಿಯ ನಟನ ಅಳಲು

ದಕ್ಷಿಣ ಭಾರತದ ಹಿರಿಯ ನಟ ಅಶೋಕ್ ಕುಮಾರ್ ಅವರು ನಿತ್ಯಾನಂದ ಸ್ವಾಮಿ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ನನ್ನ ಇಬ್ಬರೂ ಮಕ್ಕಳು ನಿತ್ಯಾನಂದ ಸ್ವಾಮಿ ಜೊತೆ ಇರೋದಾಗಿ ಅಸಲಿ ವಿಚಾರವನ್ನ ಮಾಧ್ಯಮದ ಮುಂದೆ ಬಿಚ್ಚಿಟ್ಟಿದ್ದಾರೆ.

ದಕ್ಷಿಣ ಭಾರತದ ಹಿರಿಯ ನಟ ಅಶೋಕ್ ಕುಮಾರ್ ಅವರು ನಿತ್ಯಾನಂದ ಸ್ವಾಮಿ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ನನ್ನ ಇಬ್ಬರೂ ಮಕ್ಕಳು ನಿತ್ಯಾನಂದ ಸ್ವಾಮಿ ಜೊತೆ ಇರೋದಾಗಿ ಅಸಲಿ ವಿಚಾರವನ್ನ ಮಾಧ್ಯಮದ ಮುಂದೆ ಬಿಚ್ಚಿಟ್ಟಿದ್ದಾರೆ.

ಪುಟ್ಟಣ್ಣ ಕಣಗಾಲ್ ಅವರ ಆಪ್ತ ಅಶೋಕ್ ಕುಮಾರ್ ಅವರು ತೆಲುಗಿನ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ನಟ, ಪೋಷಕನಟ, ವಿಲನ್ ಆಗಿ ಜೀವತುಂಬಿದ್ದಾರೆ. ಅವಕಾಶ, ಸಕ್ಸಸ್ ಸಿಗದೇ ಇರೋ ಕಾರಣ ಚಿತ್ರರಂಗದಿಂದ ದೂರ ಸರಿದ್ದರು. ಇದೀಗ ಅಶೋಕ್ ಅವರು, ತಮ್ಮ ವೈಯಕ್ತಿಕ ಬದುಕಿನ ಬಗ್ಗೆ ಮಾತನಾಡಿದ್ದಾರೆ.

85 ವರ್ಷ ವಯಸ್ಸಿನ ಅಶೋಕ್ ಕುಮಾರ್, ವಧು ನೋಡದೇ ಮದುವೆಯಾಗಿದ್ರಂತೆ. ಆಕೆ ಇಷ್ಟವಿಲ್ಲದೇ ಕುಟುಂಬದವರ ಮಾತಿಗೆ ಕಟ್ಟುಬಿದ್ದು ಮದುವೆಯಾದೆ. ನಮಗೆ ಮೂರು ಜನ ಹೆಣ್ಣು ಮಕ್ಕಳು, ಅವರು ಇಷ್ಟಪಟ್ಟರ ಜೊತೆ ಮದುವೆ ಮಾಡಿಸಿಕೊಟ್ಟೆ, ನನ್ನ ಮೊದಲನೇ ಮಗಳು ಅಮೆರಿಕಾದಲ್ಲಿ ಇದ್ದಾಳೆ.

ಅವಳು ಆಗಾಗ ನಿತ್ಯಾನಂದ ಸ್ವಾಮಿ ಆಶ್ರಮಕ್ಕೆ ಪ್ರವಚನ ಕೇಳಲು ಹೋಗುತ್ತಿದ್ದಳು. ಅಕ್ಕನನ್ನು ನೋಡಲು ನನ್ನ 2ನೇ ಮಗಳು ರಂಜಿತಾ ಹೋಗಲು ಆರಂಭಿಸಿದ್ದಳು. ನಿತ್ಯಾನಂದ ಸ್ವಾಮಿ ಜೊತೆ ನನ್ನ ಮಗಳು ರಂಜಿತಾ ಇದ್ದಾಳೆ ಅಂತಾ ಜನ ಹೇಳ್ತಾರೆ. ರಂಜಿತಾ- ನಿತ್ಯಾನಂದು ನಡುವಿನ ರಿಲೇಷನ್‌ಶಿಪ್ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ಆ ಫೋಟೋಗಳನ್ನ ನೋಡಿದರೆ ಏನೋ ಹೇಳಬೇಕೋ ಗೊತ್ತಾಗುತ್ತಿಲ್ಲ.

ನನ್ನ ಇಬ್ಬರು ಮಕ್ಕಳು ಗಂಡಂದಿರಿಗೆ ಡಿವೋರ್ಸ್ ನೀಡಿ, ನಿತ್ಯಾನಂದ ಸ್ವಾಮಿ ಆಶ್ರಮ ಸೇರಿದ್ದಾರೆ. ಇವತ್ತಿಗೂ ಅವರು ಅಲ್ಲೇ ಇದ್ದಾರೆ ಎಂದು ನಟ ಅಶೋಕ್ ಕುಮಾರ್ ಕಣ್ಣೀರಿಟ್ಟಿದ್ದಾರೆ. ಇಂದಿಗೂ ನನ್ನ ಇಬ್ಬರೂ ಮಕ್ಕಳು ಕರೆ ಮಾಡಲಿಲ್ಲ. ನಮ್ಮ 3ನೇ ಮಗಳು ನನ್ನನ್ನೂ ನೋಡಿಕೊಳ್ತಿದ್ದಾರೆ. ಇಬ್ಬರು ಮಕ್ಕಳು ನೆನಪಿನಲ್ಲೇ ನನ್ನ ಪತ್ನಿ ಪ್ರಾಣ ಬಿಟ್ಟರು ಎಂದು ಭಾವುಕರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT