ಮಾಯಾನಗರಿ ಚಿತ್ರದಲ್ಲಿ ನಟ ಅನೀಶ್ 
ಸಿನಿಮಾ ಸುದ್ದಿ

ನಿರ್ದೇಶಕನಾಗುವ ಕನಸು ಹೊತ್ತ ಯುವ ಪ್ರತಿಭೆ ಪಾತ್ರದಲ್ಲಿ ಅನೀಶ್, ಸೆನ್ಸಾರ್ ಪಾಸಾದ 'ಮಾಯಾನಗರಿ'

ನಟ ಅನೀಶ್ ನಟನೆಯ, ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿರುವ ಶಂಕರ್ ಆರಾಧ್ಯ ನಿರ್ದೇಶನದ 'ಮಾಯಾನಗರಿ' ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿತ್ರದ ಬಿಡುಗಡೆಗೆ ಚಿತ್ರತಂಡ ಕುತೂಹಲದಿಂದ ಎದುರುನೋಡುತ್ತಿದೆ. ಈ ಚಿತ್ರವು ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣಪತ್ರವನ್ನು ಪಡೆದುಕೊಂಡಿದೆ.

ನಟ ಅನೀಶ್ ನಟನೆಯ, ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿರುವ ಶಂಕರ್ ಆರಾಧ್ಯ ನಿರ್ದೇಶನದ 'ಮಾಯಾನಗರಿ' ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿತ್ರದ ಬಿಡುಗಡೆಗೆ ಚಿತ್ರತಂಡ ಕುತೂಹಲದಿಂದ ಎದುರುನೋಡುತ್ತಿದೆ. ಈ ಚಿತ್ರವು ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣಪತ್ರವನ್ನು ಪಡೆದುಕೊಂಡಿದೆ.

ಚಿತ್ರದ ಸ್ಟಿಲ್

ಸಿನಿಮಾ ನಿರ್ದೇಶನದ ಕನಸನ್ನು ಹೊತ್ತು ಬರುವ ಯುವ ಪ್ರತಿಭೆಯ ಪಾತ್ರದಲ್ಲಿ ಅನೀಶ್ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಕಾಮಿಡಿ, ಲವ್, ಆ್ಯಕ್ಷನ್ ಮತ್ತು ಸೆಂಟಿಮೆಂಟ್ ಕಥಾಹಂದರವಿರುವ ಈ ಚಿತ್ರಕ್ಕೆ ಆರಾಧ್ಯ ಅವರು ನಿರ್ದೇಶನದ ಜೊತೆಗೆ ಚಿತ್ರದ ಕಥೆ ಮತ್ತು ಚಿತ್ರಕಥೆಯನ್ನು ತಾವೇ ಬರೆದಿದ್ದಾರೆ.

ಸ್ಯಾಂಡಲ್ ವುಡ್ ಪಿಕ್ಚರ್ಸ್ ಮತ್ತು ಶ್ವೇತಾ ಶಂಕರ್ ನಿರ್ಮಾಣದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆಯಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ವಿಕ್ರಮ್ ಮೋರ್ ಅವರು ಚಿತ್ರಕ್ಕೆ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ ಮತ್ತು ಶ್ರೀನಿವಾಸ್ ಅವರ ಛಾಯಾಗ್ರಹಣ ಇದೆ.

ಈ ಚಿತ್ರದಲ್ಲಿ ಅನೀಶ್ ಜೊತೆಗೆ ಶ್ರಾವ್ಯ ರಾವ್ ಮತ್ತು ತೇಜು ಜೋಡಿಯಾಗಿ ನಟಿಸಿದ್ದಾರೆ. ಇವರೊಂದಿಗೆ, ಶರತ್ ಲೋಹಿತಾಶ್ವ, ಅವಿನಾಶ್ ಮತ್ತು ಸುಚೇಂದ್ರ ಪ್ರಸಾದ್ ಮುಂತಾದ ಅನುಭವಿ ನಟರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT