ರಾಯಲ್ ಮೆಕ್ ಸಿನಿಮಾದಲ್ಲಿ ನಟ ಧನುಷ್ 
ಸಿನಿಮಾ ಸುದ್ದಿ

ಧನುಷ್-ಶ್ರಾವ್ಯಾ ರಾವ್ ನಟನೆಯ ರಾಯಲ್ ಮೆಕ್ ಸಿನಿಮಾ ಬಿಡುಗಡೆಗೆ ಸಿದ್ಧ

ವೃತ್ತಿಯಲ್ಲಿ ಮೆಕ್ಯಾನಿಕಲ್ ಎಂಜಿನಿಯರ್ ಆಗಿರುವ ಧನುಷ್, ಸಿನಿಮಾ ನಿರ್ಮಾಣಕ್ಕೂ ಮುಂದಾಗಿದ್ದಾರೆ. ಇದೀಗ ರಾಯಲ್ ಮೆಕ್ ಎನ್ನುವ ಸಿನಿಮಾದ ಮೂಲಕ ತಮ್ಮ ನಟನೆಗೆ ಇಳಿದಿದ್ದಾರೆ. ಸ್ಕ್ರಿಪ್ಟ್ ಬರೆಯುವುದಷ್ಟೇ ಅಲ್ಲದೆ ಪ್ರಮುಖ ಪಾತ್ರದಲ್ಲೂ ನಟಿಸಿದ್ದಾರೆ. 

ವೃತ್ತಿಯಲ್ಲಿ ಮೆಕ್ಯಾನಿಕಲ್ ಎಂಜಿನಿಯರ್ ಆಗಿರುವ ಧನುಷ್, ಸಿನಿಮಾ ನಿರ್ಮಾಣಕ್ಕೂ ಮುಂದಾಗಿದ್ದಾರೆ. ಇದೀಗ ರಾಯಲ್ ಮೆಕ್ ಎನ್ನುವ ಸಿನಿಮಾದ ಮೂಲಕ ನಟನೆಗೆ ಇಳಿದಿದ್ದಾರೆ. ಸ್ಕ್ರಿಪ್ಟ್ ಬರೆಯುವುದಷ್ಟೇ ಅಲ್ಲದೆ ಪ್ರಮುಖ ಪಾತ್ರದಲ್ಲೂ ನಟಿಸಿದ್ದಾರೆ. ಸಾಂಕ್ರಾಮಿಕ ರೋಗದ ಸಮಯದಲ್ಲಿ ಅವರು ಎದುರಿಸಿದ ನೈಜ ಘಟನೆಯನ್ನು ಆಧರಿಸಿ ಚಿತ್ರವನ್ನು ತಯಾರಿಸಲಾಗಿದೆ. 

ಚಿತ್ರವು ಎಂಜಿನಿಯರ್ ಒಬ್ಬನ ಕಥೆಯನ್ನು ಹೇಳುತ್ತದೆ. ಅವರು ಕೆಲವು ಸಂದರ್ಭಗಳಲ್ಲಿ ಫುಡ್ ಡೆಲಿವರಿ ಬಾಯ್ ಆಗಿಯೂ ಕೆಲಸ ಮಾಡುತ್ತಾರೆ. ಐಎಎಸ್ ಅಧಿಕಾರಿಯಾಗುವ ತಮ್ಮ ಕನಸನ್ನು ನನಸು ಮಾಡಲು ಸಾಧ್ಯವಾಗುತ್ತದೆಯಾ?. ಈ ಪ್ರಯಾಣದಲ್ಲಿ ಅವರು ಎದುರಿಸುವ ಸವಾಲುಗಳ ಕುರಿತು ಚಿತ್ರ ಹೇಳುತ್ತದೆ.

ಈ ಕುರಿತು ಮಾತನಾಡುವ ಧನುಷ್, 'ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ನಾನು ಮನೆಯಿಂದಲೇ ಕೆಲಸ ಮಾಡುತ್ತಿದ್ದೆ. ಆಗ ನನ್ನ ಲ್ಯಾಪ್‌ಟಾಪ್ ಅನ್ನು ಸರಿಪಡಿಸಬೇಕಾಗಿತ್ತು. ಸಹಾಯಕ್ಕಾಗಿ ಹಾರ್ಡ್‌ವೇರ್ ತಂತ್ರಜ್ಞರನ್ನು ಸಂಪರ್ಕಿಸಿದಾಗ, ಅವರು ಬೆಳಿಗ್ಗೆ ಫುಡ್ ಡೆಲಿವರಿ ಕೆಲಸದಲ್ಲಿ ನಿರತರಾಗಿದ್ದರಿಂದ ರಾತ್ರಿ 10 ಗಂಟೆಯ ನಂತರ ರಿಪೇರಿ ಕೆಲಸದಲ್ಲಿ ತೊಡಗಬಹುದು ಎಂದು ಹೇಳಿದರು. ಇದು, ತಮ್ಮ ಶೈಕ್ಷಣಿಕ ಅರ್ಹತೆಯ ಹೊರತಾಗಿಯೂ ಯುವಕರು ಎದುರಿಸುತ್ತಿರುವ ಸವಾಲುಗಳ ಕುರಿತು ಯೋಚಿಸುವಂತೆ ಮಾಡಿತು. ಈ ವ್ಯಕ್ತಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಮತ್ತು ಮಧ್ಯಮ ವರ್ಗದ ಕುಟುಂಬಕ್ಕೆ ಸೇರಿದ ಯುವಕನೊಬ್ಬ ತನ್ನ IAS ಅಧಿಕಾರಿಯಾಗುವ ಕನಸನ್ನು ನನಸು ಮಾಡಿಕೊಳ್ಳಲು ಮುಂದಾಗುವ ಸ್ಕ್ರಿಪ್ಟ್ ಬರೆಯಲು ನನಗೆ ಸ್ಫೂರ್ತಿ ನೀಡಿತು' ಎನ್ನುತ್ತಾರೆ.

ಧನುಷ್ ಅಭಿನಯದ ರಾಯಲ್ ಮೆಕ್ ಚಿತ್ರ ನವೆಂಬರ್ 10 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರವನ್ನು ಶಬರಿ ಫಿಲ್ಮ್ಸ್ ನಿರ್ಮಾಣ ಮಾಡಿದ್ದು, ಜೆಎಚ್ಎಂ ನಾಗಭೂಷಣ್ ಮತ್ತು ಡಾ. ಜಯದೇವ ಹಾಸನ್ ಅವರ ಸಹ-ನಿರ್ದೇಶನ ಚಿತ್ರಕ್ಕಿದೆ. 

ಸಾತ್ವಿಕಾ ರಾವ್ ಅಲಿಯಾಸ್ ಶ್ರಾವ್ಯಾ ರಾವ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇವರೊಂದಿಗೆ, ರಾಘವೇಂದ್ರ ರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇನ್ನುಳಿದಂತೆ, ಕುರಿ ಪ್ರತಾಪ್, ರಮೇಶ್ ಭಟ್, ವಿನಯ್ ಪ್ರಸಾದ್, ರೇಖಾ ದಾಸ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ಪವನ್ ಮತ್ತು ಗೌತಮಿ ಜಯರಾಂ ಸೇರಿದಂತೆ ಇತರರು ತಾರಾಗಣದಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT