ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಪ್ರೇಮದ ಬಗೆಗಿನ ಮಹಿಳೆಯ ದೃಷ್ಟಿಕೋನವೇ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ 'ಮೆಲ್ಲಗೆ' ಹಾಡು: ರಾಜ್ ಬಿ ಶೆಟ್ಟಿ

ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಸದ್ಯ ಚಿತ್ರತಂಡ ಸಿನಿಮಾದ 'ಮೆಲ್ಲಗೆ' ಶೀರ್ಷಿಕೆಯ ಹಾಡೊಂದನ್ನು ಬಿಡುಗಡೆ ಮಾಡಿದೆ. ರಾಜ್ ಬಿ ಶೆಟ್ಟಿ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ನಟಿ ರಮ್ಯಾ ಅವರ ನಿರ್ಮಾಣ ಸಂಸ್ಥೆಯಾದ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ರಾಜ್ ಬಿ ಶೆಟ್ಟಿಯವರ ಲೈಟರ್ ಬುದ್ಧ ಫಿಲ್ಮ್ಸ್ ಸಹಯೋಗದೊಂದಿಗೆ ನಿರ್ಮಿಸಲಾಗಿದೆ

ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಸದ್ಯ ಚಿತ್ರತಂಡ ಸಿನಿಮಾದ 'ಮೆಲ್ಲಗೆ' ಶೀರ್ಷಿಕೆಯ ಹಾಡೊಂದನ್ನು ಬಿಡುಗಡೆ ಮಾಡಿದೆ. ರಾಜ್ ಬಿ ಶೆಟ್ಟಿ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ನಟಿ ರಮ್ಯಾ ಅವರ ನಿರ್ಮಾಣ ಸಂಸ್ಥೆಯಾದ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ರಾಜ್ ಬಿ ಶೆಟ್ಟಿಯವರ ಲೈಟರ್ ಬುದ್ಧ ಫಿಲ್ಮ್ಸ್ ಸಹಯೋಗದೊಂದಿಗೆ ನಿರ್ಮಿಸಲಾಗಿದೆ. ಚಿತ್ರವು ನವೆಂಬರ್ 24 ರಂದು ಕೆಆರ್‌ಜಿ ಸ್ಟುಡಿಯೋಸ್ ಅಡಿಯಲ್ಲಿ ಬಿಡುಗಡೆಯಾಗಲಿದೆ. ರಾಜ್ ಬಿ ಶೆಟ್ಟಿಗೆ ಜೋಡಿಯಾಗಿ ಸಿರಿ ರವಿಕುಮಾರ್ ನಟಿಸಿದ್ದಾರೆ.

'ಮೆಲ್ಲಗೆ' ಹಾಡಿನ ಸಾಹಿತ್ಯವನ್ನು ಪೃಥ್ವಿ ಬರೆದಿದ್ದು, ಮಿಧುನ್ ಮುಕುಂದನ್ ಸಂಗೀತ ಸಂಯೋಜನೆ ಇದೆ. ಮಾಧುರಿ ಶೇಷಾದ್ರಿ ತಮ್ಮ ಧ್ವನಿ ನೀಡಿದ್ದಾರೆ. ಇದೊಂದು ಮೆಲೋಡಿ ಟ್ರ್ಯಾಕ್ ಆಗಿದ್ದು, ಪ್ರೇಮದ ಬಗೆಗಿನ ಮಹಿಳೆಯ ದೃಷ್ಟಿಕೋನದ ಬಗ್ಗೆ ಒಂದು ಅನನ್ಯ ಒಳನೋಟವನ್ನು ನೀಡುತ್ತದೆ. ಅದಕ್ಕಾಗಿಯೇ ಅವರು ಪೃಥ್ವಿಯನ್ನು ಗೀತರಚನೆಕಾರರಾಗಿ ಆಯ್ಕೆ ಮಾಡಿದ್ದಾಗಿ ರಾಜ್ ವಿವರಿಸುತ್ತಾರೆ.

 'ನಾನು ಆಕೆಯ ಅನನ್ಯ ದೃಷ್ಟಿಕೋನವನ್ನು ಬಯಸುತ್ತೇನೆ' ಎನ್ನುವ ರಾಜ್, ಮಿಧುನ್ ಮುಕುಂದನ್ ಅವರ ಕೆಲಸದ ಬಗ್ಗೆ ಹೆಚ್ಚು ಮಾತನಾಡುತ್ತಾರೆ. ಸಿರಿ ರವಿಕುಮಾರ್ ಕೂಡ ಈ ಹಾಡಿನ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.

ಚಿತ್ರದಲ್ಲಿ ಬಾಲಾಜಿ ಮನೋಹರ್, ಸೂರ್ಯ ವಸಿಷ್ಟ, ರೇಖಾ ಕೂಡ್ಲಿಗಿ, ತೂಮಿನಾಡು ಮತ್ತು ಸ್ನೇಹಾ ಶರ್ಮಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಪ್ರವೀಣ್ ಶ್ರೀಯಾನ್ ಸಿನಿಮಾಟೋಗ್ರಾಫರ್ ಮತ್ತು ಸಂಕನಲಕಾರರಾಗಿ ಎರಡು ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT