ನಟ ದರ್ಶನ್. 
ಸಿನಿಮಾ ಸುದ್ದಿ

ನಾಯಿ ಕಚ್ಚಿದ ಪ್ರಕರಣ: ನಟ ದರ್ಶನ್ ಗೆ ನೋಟಿಸ್ ಜಾರಿ

ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್​ ಅವರಿಗೆ ಆರ್'ಆರ್ ನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಬೆಂಗಳೂರು: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್​ ಅವರಿಗೆ ಆರ್'ಆರ್ ನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಮೂರು ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್'ನಲ್ಲಿ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ನಾಯಿಯ ಕೇರ್ ಟೇಕರ್ ಹೇಮಂತ್ ಅವರನ್ನು ವಿಚಾರಣೆ ಮಾಡಿರುವ ಪೊಲೀಸರು, ಇದೀಗ ದರ್ಶನ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ದರ್ಶನ್ ಮನೆಯ ನಾಯಿಗಳು ಮಹಿಳೆಯೊಬ್ಬರ ಮೇಲೆ ಎರಗಿ ಕಚ್ಚಿದ ಸಂಬಂಧ ಐಪಿಸಿ 289ರ ಅಡಿ ನಾಯಿ (Dog) ನೋಡಿಕೊಳ್ಳುತ್ತಿದ್ದವನ ಮೇಲೆ ಮತ್ತು ನಟ ದರ್ಶನ್ ವಿರುದ್ಧ ಕೇಸ್ ದಾಖಲಾಗಿತ್ತು.

ದೂರುದಾರ ಅಮಿತಾ ಜಿಂದಾಲ್ ಅವರು, ಕಳೆದ ಅಕ್ಟೋಬರ್ 28 ರಂದು ಕಾರ್ಯಕ್ರಮವೊಂದಕ್ಕೆ ತೆರಳುವ ವೇಳೆ ನಟ ದರ್ಶನ್ ಅವರ ಮನೆಯ ಎದುರಿನ ಖಾಲಿ ಸ್ಥಳದಲ್ಲಿದ್ದ ತಮ್ಮ ಕಾರು ನಿಲ್ಲಿಸಿ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಕಾರು ತೆಗೆಯಲು ಬಂದಾಗ ಮೂರು ನಾಯಿಗಳ ಪೈಕಿ ಎರಡನ್ನು ಕಟ್ಟಲಾಗಿತ್ತು. ಒಂದು ನಾಯಿ ದಾಳಿ ನಡೆಸಿದೆ ಎಂದು ದೂರು ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ