ತನಿಷಾ ಜೊತೆಗೆ ವರ್ತೂರ್ ಸಂತೋಷ್ 
ಸಿನಿಮಾ ಸುದ್ದಿ

ಮತ್ತೊಂದು ವಿವಾದದಲ್ಲಿ 'ಬಿಗ್ ಬಾಸ್ 10' ಸ್ಪರ್ಧಿ ವರ್ತೂರ್ ಸಂತೋಷ್!

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಬಿಗ್ ಬಾಸ್ 10 ಸೀಸನ್ ನಲ್ಲಿ ಸ್ಪರ್ಧಿಯಾಗಿರುವ ಕೃಷಿಕ ವರ್ತೂರ್ ಸಂತೋಷ್ ಇದೀಗ ಮತ್ತೊಂದು ವಿವಾದದಲ್ಲಿ ಹೆಚ್ಚು ಸುದ್ದಿಯಾಗುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅವರ ಮದುವೆ ಕುರಿತು ಚರ್ಚೆ ನಡೆಯುತ್ತಿದೆ.  

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಬಿಗ್ ಬಾಸ್ 10 ಸೀಸನ್ ನಲ್ಲಿ ಸ್ಪರ್ಧಿಯಾಗಿರುವ ಕೃಷಿಕ ವರ್ತೂರ್ ಸಂತೋಷ್ ಇದೀಗ ಮತ್ತೊಂದು ವಿವಾದದಲ್ಲಿ ಹೆಚ್ಚು ಸುದ್ದಿಯಾಗುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅವರ ಮದುವೆ ಕುರಿತು ಚರ್ಚೆ ನಡೆಯುತ್ತಿದೆ.  

ಅಂದಹಾಗೆ 2020 ರಲ್ಲೇ ವರ್ತೂರು ಸಂತೋಷ್ ಎಸ್‌. ಜಯಶ್ರೀ ಎಂಬುವರನ್ನ ಮದುವೆಯಾಗಿದ್ದಾರೆ ಎನ್ನಲಾಗಿದೆ. ಟ್ರೋಲ್ ಪೇಜ್ ಗಳಲ್ಲಿ ಅವರದ್ದು ಎನ್ನಲಾದ ಮದುವೆ ಫೋಟೋಸ್‌ ಹಾಗೂ ವಿಡಿಯೋ ದಿಢೀರ್ ವೈರಲ್ ಆಗಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ಮದುವೆ ಕುರಿತು  ಅವರು ಎಲ್ಲಿಯೂ ಪ್ರಸ್ತಾಪ ಮಾಡಿರಲಿಲ್ಲ.  

ಬಿಗ್ ಬಾಸ್‌’ ಮನೆಯಲ್ಲಿ ವರ್ತೂರು ಸಂತೋಷ್ ಹಾಗೂ ತನಿಷಾ ಕುಪ್ಪಂಡ ಮಧ್ಯೆ ಸ್ನೇಹ, ಆತ್ಮೀಯತೆ ಬೆಳೆದಿದೆ. ಹೀಗಾಗಿ, ಇಬ್ಬರ ಮಧ್ಯೆ ಪ್ರೀತಿ ಅಂಕುರಿಸಿದೆ ಅಂತಲೇ ಉಳಿದ ಸ್ಪರ್ಧಿಗಳು ರೇಗಿಸುತ್ತಿದ್ದಾರೆ. ಕಿಚ್ಚ ಸುದೀಪ್ ಕೂಡಾ ವಾರದ ಪಂಚಾಯಿತಿಯಲ್ಲಿ ಆಗಾಗ್ಗೆ ರೇಗಿಸುತ್ತಿರುತ್ತಾರೆ. ಹೀಗಿರುವಾಗ ಮದುವೆ ಬಗ್ಗೆ, ವೈರಲ್ ಆಗಿರುವ ಫೋಟೋಗಳು ಹಾಗೂ ವಿಡಿಯೋಗಳ ಬಗ್ಗೆ ವರ್ತೂರು ಸಂತೋಷ್‌ ಅವರೇ ಸ್ಪಷ್ಟನೆ ನೀಡಬೇಕಿದೆ.

ಈ ಹಿಂದೆ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ ಆರೋಪದ ಮೇರೆಗೆ ಈ ಹಿಂದೆ ಅವರು ಆರೆಸ್ಟ್ ಆಗಿ ಒಂದು ವಾರ ನ್ಯಾಯಾಂಗ ಬಂಧನದಲ್ಲಿದ್ದರು. ನಂತರ ಜಾಮೀನು ಪಡೆದು ಹೊರಗೆ ಬಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT