ನಟಿ ಶರ್ಮಿಳಾ ಮಾಂಡ್ರೆ - ಸಿಲ ನೋಡಿಗಳಿಲ್ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ತಮಿಳಿನ 'ಸಿಲ ನೋಡಿಗಳಿಲ್' ಚಿತ್ರದ ಮೂಲಕ ನಿರ್ಮಾಣಕ್ಕೆ ಮುಂದಾದ ನಟಿ ಶರ್ಮಿಳಾ ಮಾಂಡ್ರೆ!

ಸಜಿನಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ನಟಿ ಶರ್ಮಿಳಾ ಮಾಂಡ್ರೆ ಅವರು ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಇತ್ತೀಚೆಗಷ್ಟೇ ಗಾಳಿಪಟ 2 ಚಿತ್ರದಲ್ಲಿ ಕಾಣಿಸಿಕೊಂಡಿದ್ದ ನಟಿ ಇದೀಗ ತಮಿಳಿನ 'ಸಿಲ ನೋಡಿಗಳಿಲ್' ಸಿನಿಮಾ ಮೂಲಕ ಕ್ರಿಯೇಟಿವ್ ನಿರ್ಮಾಪಕರಾಗಿ ಹೊಸ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. 

ಸಜಿನಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ನಟಿ ಶರ್ಮಿಳಾ ಮಾಂಡ್ರೆ ಅವರು ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿ ಕನ್ನಡ ಚಿತ್ರರಂಗದಲ್ಲಿ ಶಾಶ್ವತವಾದ ಪ್ರಭಾವ ಬೀರಿದ್ದಾರೆ. ಇತ್ತೀಚೆಗಷ್ಟೇ ಗಾಳಿಪಟ 2 ಚಿತ್ರದಲ್ಲಿ ಕಾಣಿಸಿಕೊಂಡಿದ್ದ ನಟಿ ಇದೀಗ ತಮಿಳಿನ 'ಸಿಲ ನೋಡಿಗಳಿಲ್' ಸಿನಿಮಾ ಮೂಲಕ ಕ್ರಿಯೇಟಿವ್ ನಿರ್ಮಾಪಕರಾಗಿ ಹೊಸ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಪುನ್ನಗೈ ಪೂ ಗೀತಾ ಈ ಚಿತ್ರವನ್ನು ನಿರ್ಮಿಸಿದ್ದಾರೆ. ವಿನಯ್ ಭಾರದ್ವಾಜ್ ನಿರ್ದೇಶನದ ಈ ಚಿತ್ರವು ನವೆಂಬರ್ 24 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

'ಮುಂದಿನ ನಿಲ್ದಾಣ' ಚಿತ್ರದ ನಿರ್ದೇಶಕ ವಿನಯ್ ಭಾರದ್ವಾಜ್ ಅವರು ಇದೇ ಮೊದಲ ಬಾರಿಗೆ ತಮಿಳು ಸಿನಿಮಾದ ನಿರ್ದೇಶನ ಮಾಡುತ್ತಿದ್ದು, ನಟಿ ಶರ್ಮಿಳಾ ಮಾಂಡ್ರೆ ಅವರನ್ನು ತಮಗೆ ಪರಿಚಯಿಸಿದ ನಿರ್ದೇಶಕ ಮತ್ತು ನಟ ಪವನ್ ಕುಮಾರ್ ಅವರಿಗೆ ಸಲ್ಲುತ್ತದೆ ಎನ್ನುತ್ತಾರೆ. ನಟಿ ಈ ಚಿತ್ರದ ಸೃಜನಶೀಲ ನಿರ್ಮಾಪಕಿಯಾಗಿದ್ದಾರೆ.

ಶರ್ಮಿಳಾ ಮಾಂಡ್ರೆ, ವಿನಯ್ ಭಾರದ್ವಾಜ್

ಚಿತ್ರದ ಕಥಾವಸ್ತುವು ಲಂಡನ್‌ನಲ್ಲಿ ವಾಸವಿರುವ ಗಂಡ-ಹೆಂಡತಿ ನಡುವೆ ಮತ್ತೊಬ್ಬ ಯುವತಿಯ ಆಗಮನವಾಗುತ್ತದೆ. ಅಲ್ಲೊಂದು ಕೊಲೆ ಕೂಡ ಆಗುತ್ತದೆ. ಈ ಕೊಲೆ ಮಾಡಿದ್ದು ಯಾರು? ಎಂಬ ಕುತೂಹಲಕಾರಿ ಅಂಶಗಳನ್ನು ಒಳಗೊಂಡಿದೆ. ‘ಸಿಲ್ ನೋಡಿಗಳಿಲ್’ ಎಂದರೆ ಕೆಲವೇ ಕ್ಷಣಗಳಲ್ಲಿ ಎಂದು ಅರ್ಥ.

ಮೀಡಿಯಾ ಒನ್ ಗ್ಲೋಬಲ್ ಎಂಟರ್‌ಟೈನ್‌ಮೆಂಟ್ ಮತ್ತು ಎಸ್ಕ್ವೈರ್ ಪ್ರೊಡಕ್ಷನ್ಸ್ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ನಟರಾದ ರಿಚರ್ಡ್ ರಿಷಿ, ಪುನ್ನಗೈ ಪೂ ಗೀತಾ ಮತ್ತು ಯಶಿಕಾ ಆನಂದ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಸಿಲ ನೋಡಿಗಳಿಲ್ ಚಿತ್ರಕ್ಕೆ ಅಭಿಮನ್ಯು ಸದಾನಂದನ್ ಅವರ ಛಾಯಾಗ್ರಹಣ, ರೋಹಿತ್ ಕುಲಕರ್ಣಿ ಅವರ ಹಿನ್ನೆಲೆ ಸಂಗೀತವಿದೆ. ಮಸಾಲ ಕಾಫಿ, ಜೋರ್ನ್ ಸುರ್ರಾವ್, ದರ್ಶನ ಕೆಟಿ, ಸ್ಟಾಕಾಟೊ ಮತ್ತು ರೋಹಿತ್ ಮಟ್ಟ್ ಅವರ ಐದು ಹಾಡುಗಳಿವೆ. ಚಿತ್ರವು ಆರಂಭದಲ್ಲಿ ತಮಿಳಿನಲ್ಲಿ ಬಿಡುಗಡೆಯಾಗಲಿದ್ದು, ನಂತರ ಕನ್ನಡದಲ್ಲಿ ತೆರೆಕಾಣಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT