ಅರ್ಧಂಬರ್ದ ಪ್ರೇಮಕಥೆ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ದಿವ್ಯಾ ಉರುಡುಗ- ಅರವಿಂದ್ ಕೆಪಿ ನಟನೆಯ 'ಅರ್ಧಂಬರ್ದ ಪ್ರೇಮಕಥೆ' ಬಿಡುಗಡೆಗೆ ಸಿದ್ಧ

ಅರವಿಂದ್ ಕೌಶಿಕ್ ನಿರ್ದೇಶನದ ದಿವ್ಯಾ ಉರುಡುಗ ನಟಿಸಿರುವ ಮುಂಬರುವ ಚಿತ್ರ 'ಅರ್ಧಂಬರ್ದ ಪ್ರೇಮಕಥೆ' ಮೂಲಕ ಬೈಕರ್-ನಟ ಅರವಿಂದ್ ಕೆಪಿ ಅವರು ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಈ ಚಿತ್ರ ಡಿಸೆಂಬರ್ 1 ರಂದು ರಾಜ್ಯದಾದ್ಯಂತ ತೆರೆಗೆ ಬರಲು ಸಿದ್ಧವಾಗಿದೆ.

ಅರವಿಂದ್ ಕೌಶಿಕ್ ನಿರ್ದೇಶನದ ದಿವ್ಯಾ ಉರುಡುಗ ನಟಿಸಿರುವ ಮುಂಬರುವ ಚಿತ್ರ 'ಅರ್ಧಂಬರ್ದ ಪ್ರೇಮಕಥೆ' ಮೂಲಕ ಬೈಕರ್-ನಟ ಅರವಿಂದ್ ಕೆಪಿ ಅವರು ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಈ ಚಿತ್ರ ಡಿಸೆಂಬರ್ 1 ರಂದು ರಾಜ್ಯದಾದ್ಯಂತ ತೆರೆಗೆ ಬರಲು ಸಿದ್ಧವಾಗಿದೆ.

ತುಘಲಕ್, ನಮ್ ಏರಿಯಾಲಿ ಒಂದಿನ ಮತ್ತು ಹುಲಿರಾಯ ಸಿನಿಮಾಗಳ ನಿರ್ದೇಶನಕ್ಕೆ ಹೆಸರಾದ ಅರವಿಂದ್ ಕೌಶಿಕ್, ಆಫ್-ಸ್ಕ್ರೀನ್ ಜೋಡಿ ಮತ್ತು ಮಾಜಿ ಬಿಗ್ ಬಾಸ್ ಸ್ಪರ್ಧಿಗಳನ್ನು ಅರ್ಧಂಬರ್ಧ ಪ್ರೇಮಕಥೆಯಲ್ಲಿ ಒಟ್ಟುಗೂಡಿಸಿದ್ದಾರೆ.

ಅರವಿಂದ್ ಕೆಪಿ ಮತ್ತು ದಿವ್ಯಾ ಉರುಡುಗ ಅವರು ಚಿತ್ರ ಬಿಡುಗಡೆ ದಿನಾಂಕವನ್ನು ಸೂಚಿಸುವ  ಕಾರ್ಡ್ ಅನ್ನು ಬಹಿರಂಗಪಡಿಸುವ ಮೊದಲು ದೇವಸ್ಥಾನದಲ್ಲಿ ಆಶೀರ್ವಾದ ಪಡೆಯುತ್ತಿರುವ ವಿಡಿಯೋ ಹಂಚಿಕೊಂಡಿದ್ದಾರೆ. 

ಚಿತ್ರವನ್ನು ಬಾಕ್ಸ್‌ಸೀಟ್ ಮೀಡಿಯಾ, ಆರ್‌ಎಸಿ ವಿಶುಲ್ಸ್ ಮತ್ತು ಲೈಟ್‌ಹೌಸ್ ಮೀಡಿಯಾ ಜಂಟಿಯಾಗಿ ನಿರ್ಮಿಸಿವೆ. ದಿವ್ಯಾ ಮತ್ತು ಅರವಿಂದ್ ಜೊತೆಗೆ ಅರ್ಧಂಬರ್ಧ ಪ್ರೇಮಕಥೆ ಸಿನಿಮಾದಲ್ಲಿ ರ‍್ಯಾಪರ್‌ಗಳಾದ ಅಲೋಕ್, ಶ್ರೇಯಾ ಬಾಬು, ವೆಂಕಟೇಶ ಶಾಸ್ತ್ರಿ, ಪ್ರದೀಪ್ ರೋಷನ್, ಸೂರಜ್ ಹೂಗಾರ್ ಮತ್ತು ಸುಜಿತ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿದ್ದಾರೆ. 

ಹಿರಿಯ ನಟ ದ್ವಾರಕೀಶ್ ಅವರ ಪುತ್ರ ಅಭಿಲಾಷ್ ಕೂಡ ಸುದೀರ್ಘ ವಿರಾಮದ ನಂತರ ಮಹತ್ವದ ಪಾತ್ರವನ್ನು ನಿರ್ವಹಿಸಿದ್ದಾರೆ. ಸೂರ್ಯ ಛಾಯಾಗ್ರಹಣದ ಹೊಣೆ ಹೊತ್ತಿದ್ದು, ಅರವಿಂದ್ ಅವರೇ ಚಿತ್ರಕ್ಕೆ ಹಾಡುಗಳನ್ನು ಸಂಯೋಜಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT