ಸಪ್ತ ಸಾಗರದಾಚೆ ಎಲ್ಲೋ-ಸೈಡ್ ಬಿ ನವೆಂಬರ್ 17 ರಂದು ಬಿಡುಗಡೆಯಾಗಿದ್ದು, ಬಿಡುಗಡೆಯ ನಂತರ, ಚಿತ್ರತಂಡ ಈಗ ಚಿತ್ರದ ಮೂರನೇ ಸಿಂಗಲ್ ಹಾಡು 'ಧರೆ ನೀನಿಡಿದಾಸರೆ' ಅನ್ನು ಬಿಡುಗಡೆ ಮಾಡಿದೆ.
ರಕ್ಷಿತ್ ಶೆಟ್ಟಿ ಸಾಹಿತ್ಯ ಬರೆದಿರುವ ಚರಣ್ರಾಜ್ ಎಂ ಆರ್ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಕೆ ಎಸ್ ಹರಿಶಂಕರ್ ಅವರು ಹಾಡಿದ್ದಾರೆ.
ಚಿತ್ರದ ಟೈಟಲ್ ಟ್ರ್ಯಾಕ್ ಮತ್ತು ಮೊದಲ ಸಿಂಗಲ್, ಒಲವೇ ಒಲವೇ ಹಾಡನ್ನು ಚಿತ್ರ ಬಿಡುಗಡೆಗೂ ಮುನ್ನ ಬಿಡುಗಡೆ ಮಾಡಲಾಗಿತ್ತು.
ಇದನ್ನೂ ಓದಿ: 'ಸಪ್ತ ಸಾಗರದಾಚೆ ಎಲ್ಲೋ' ಪ್ರೇಮಕಥೆ ಎರಡು ಚಿತ್ರಗಳಾಗಿ ವಿಭಜನೆ, ಒಂದು ಹೊಸ ಪರಿಕಲ್ಪನೆ: ನಟ ರಕ್ಷಿತ್ ಶೆಟ್ಟಿ
ಹೇಮಂತ್ ಎಂ. ರಾವ್ ನಿರ್ದೇಶನದ, ಸಪ್ತ ಸಾಗರದಾಚೆ ಎಲ್ಲೋ ಎರಡು ಭಾಗಗಳಲ್ಲಿ ತಯಾರಾಗಿದ್ದು, ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ಮತ್ತು ಚೈತ್ರಾ ಆಚಾರ್ ಅವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಮೊದಲ ಭಾಗವಾದ ಸಪ್ತ ಸಾಗರದಾಚೆ ಎಲ್ಲೋ - ಸೈಡ್ ಎ ಸೆಪ್ಟೆಂಬರ್ 1 ರಂದು ಬಿಡುಗಡೆಯಾಗಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ. ಎರಡನೇ ಭಾಗವಾದ ಸೈಡ್ ಬಿ ಕೂಡ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ.