ಲೀಲಾವತಿ ಮನೆಗೆ ದರ್ಶನ್ ಭೇಟಿ 
ಸಿನಿಮಾ ಸುದ್ದಿ

 ಹಿರಿಯ ನಟಿ ಲೀಲಾವತಿ ಮನೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ ದರ್ಶನ್

ಹಿರಿಯ ನಟಿ ಲೀಲಾವತಿ ಬಹುದಿನಗಳಿಂದ ಹಾಸಿಗೆ ಹಿಡಿದಿದ್ದಾರೆ ಹೀಗಾಗಿ ಭಾನುವಾರ (ನವೆಂಬರ್ 26 ರಂದು) ಚಾಲೆಂಜಿಂಗ್ ಸ್ಟಾರ್ ದರ್ಶನ್ ಲೀಲಾವತಿ ಅವರ ಮನೆಗೆ ಭೇಟಿ ನೀಡಿ ಹಿರಿಯ ನಟಿ ಆರೋಗ್ಯ ವಿಚಾರಿಸಿದ್ದಾರೆ.

ಬೆಂಗಳೂರು: ಹಿರಿಯ ನಟಿ ಲೀಲಾವತಿ ಬಹುದಿನಗಳಿಂದ ಹಾಸಿಗೆ ಹಿಡಿದಿದ್ದಾರೆ ಹೀಗಾಗಿ ಭಾನುವಾರ (ನವೆಂಬರ್ 26 ರಂದು) ಚಾಲೆಂಜಿಂಗ್ ಸ್ಟಾರ್ ದರ್ಶನ್ ಲೀಲಾವತಿ ಅವರ ಮನೆಗೆ ಭೇಟಿ ನೀಡಿ ಹಿರಿಯ ನಟಿ ಆರೋಗ್ಯ ವಿಚಾರಿಸಿದ್ದಾರೆ.

ಕಳೆದ ಹತ್ತು ದಿನಗಳಿಂದ ಹಾಸಿಗೆ ಹಿಡಿದಿರುವ ಲೀಲಾವತಿ, ಆಹಾರವನ್ನೂ ಸೇವಿಸುತ್ತಿಲ್ಲ. ಇತ್ತ ಅಮ್ಮನನ್ನು ಚಿಕ್ಕ ಮಗುವಿನಂತೆ ಆರೈಕೆ ಮಾಡುತ್ತಿದ್ದಾರೆ ಪುತ್ರ ವಿನೋದ್‌ ರಾಜ್.‌ ಹೀಗಿರುವಾಗಲೇ ಇದೇ ಹಿರಿಯ ನಟಿಯನ್ನು ನಟ ದರ್ಶನ್‌ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಲೀಲಾವತಿ ಅವರ ತೋಟದ ಮನೆಗೆ ಆಗಮಿಸಿದ ದರ್ಶನ್‌ ಮತ್ತು ಅವರ ಸಂಗಡಿಗರು, ವಿನೋದ್‌ ರಾಜ್‌ ಅವರನ್ನು ಭೇಟಿಯಾಗಿದ್ದಾರೆ. ಅದಾದ ಬಳಿಕ ಒಂದಷ್ಟು ಹೊತ್ತು ಅವರ ಜತೆಗೆ ಮಾತನಾಡಿದ್ದಾರೆ.

ದರ್ಶನ್‌ ಬರುತ್ತಿದ್ದಂತೆ, ವಿನೋದ್‌ ರಾಜ್‌ ಅಮ್ಮನನ್ನು ಎಬ್ಬಿಸಿ, "ಅಮ್ಮ ನೋಡಿಲ್ಲಿ ನಿನ್ನನ್ನು ನೋಡಲು ಯಾರು ಬಂದಿದ್ದಾರೆ.. ದರ್ಶನ್‌ ಬಂದಿದಾನಮ್ಮ ದರ್ಶನು. ಎದ್ದೇಳು.. ಇಲ್ನೋಡಮ್ಮ ಎಂದಿದ್ದಾರೆ ವಿನೋದ್‌. ಇಲ್ಲ ನಿಮ್ಮನ್ನು ಅಮ್ಮ ಗುರುತಿಸುತ್ತಾರೆ ಎಂದೂ ದರ್ಶನ್‌ ನೋಡಿ ಹೇಳಿದ್ದಾರೆ ವಿನೋದ್.‌ ಕೆಲ ಹೊತ್ತು ಲೀಲಾವತಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದ ದರ್ಶನ್‌, ತೋಟದ ಮನೆಯನ್ನು ವೀಕ್ಷಿಸಿ ಅಲ್ಲಿಂದ ತೆರಳಿದ್ದಾರೆ.

ಇತ್ತೀಚೆಗೆ ಬಹುಭಾಷಾ ನಟ ಅರ್ಜುನ್ ಸರ್ಜಾ ಹಿರಿಯ ನಟಿ ಲೀಲಾವತಿ ಅವರ ಮನೆಗೆ ಭೇಟಿ ನೀಡಿದ ಅವರ ಯೋಗ ಕ್ಷೇಮ ವಿಚಾರಿಸಿದ್ದರು. ಈ ವೇ ತಾಯಿಯ ಸ್ಥಿತಿ ಕಂಡು ಕಣ್ಣೀರು ಹಾಕಿದ ನಟ ವಿನೋದ್ ರಾಜ್ ಅವರಿಗೆ ಅರ್ಜುನ್ ಸರ್ಜಾ ಧೈರ್ಯ ತುಂಬಿದ್ದರು, ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದರು.

ಲೀಲಾವತಿ ಒಂದಲ್ಲ ಎರಡಲ್ಲ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಮಾತ್ರವಲ್ಲದೆ ಹಲವು ಭಾಷೆಯ ಸಿನಿಮಾಗಳಲ್ಲೂ ತಮ್ಮ ನಟನೆ ಪ್ರದರ್ಶಿಸಿದ್ದಾರೆ. ಕನ್ನಡದಲ್ಲಂತೂ ಬಹುತೇಕ ಎಲ್ಲ ಸ್ಟಾರ್‌ ನಟರ ಜತೆಗೆ ಸಿನಿಮಾ ಮಾಡಿದ್ದಾರೆ. ಹೀಗಿರುವ ಲೀಲಾವತಿಗೀಗ ಬರೋಬ್ಬರಿ 87 ವರ್ಷ ವಯಸ್ಸು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT