ದ ಸೂಟ್ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ಸೂಟಿನ ಕಥೆ ಹೇಳಲು ಬರುತ್ತಿದೆ 'ದ ಸೂಟ್'; ಇದು ಕೇವಲ ಉಡುಪಲ್ಲ, ಅದಕ್ಕಿಂತ ಹೆಚ್ಚಿನದು; ನಿರ್ದೇಶಕ ಭಗತ್ ರಾಜ್

ವಿಶೇಷ ಸಂದರ್ಭಗಳಲ್ಲಿ ಸೂಟ ಧರಿಸುವುದು ಸಾಮಾನ್ಯವಾಗಿ ವಾಡಿಕೆಯಲ್ಲಿದೆ. ಇದೀಗ ಈ ಉಡುಪಿನ ಹಿಂದಿನ ಭಾವನೆಯನ್ನು ಅನ್ವೇಷಿಸಲು ಬರುತ್ತಿದೆ 'ದ ಸೂಟ್' ಸಿನಿಮಾ. ಇತ್ತೀಚೆಗಷ್ಟೇ ಚಿತ್ರೀಕರಣವನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಹಾಡುಗಳನ್ನು ಬಿಡುಗಡೆ ಮಾಡಿದೆ.

ವಿಶೇಷ ಸಂದರ್ಭಗಳಲ್ಲಿ ಸೂಟ ಧರಿಸುವುದು ಸಾಮಾನ್ಯವಾಗಿ ವಾಡಿಕೆಯಲ್ಲಿದೆ. ಇದೀಗ ಈ ಉಡುಪಿನ ಹಿಂದಿನ ಭಾವನೆಯನ್ನು ಅನ್ವೇಷಿಸಲು ಬರುತ್ತಿದೆ 'ದ ಸೂಟ್' ಸಿನಿಮಾ. ಇತ್ತೀಚೆಗಷ್ಟೇ ಚಿತ್ರೀಕರಣವನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಹಾಡುಗಳನ್ನು ಬಿಡುಗಡೆ ಮಾಡಿದೆ.

ದ ಸೂಟ್‌ ಚಿತ್ರದ ನಿರ್ದೇಶಕ ಭಗತ್ ರಾಜ್ ಈ ಉಡುಪಿನ ವಿಶಿಷ್ಟ ಮಹತ್ವವನ್ನು ಹೇಳಿದರು. 'ಅತಿಥಿ ದೇವೋಭವ' ಎಂಬ ಅಡಿಬರಹ ಹೊಂದಿರುವ ಈ ಸಿನಿಮಾ, ಕೇವಲ ಉಡುಪಷ್ಟೇ ಅಲ್ಲ, ಅದಕ್ಕಿಂತ ಹೆಚ್ಚಿನದನ್ನು ಪ್ರತಿನಿಧಿಸುತ್ತದೆ. ಅದು ಬದ್ಧತೆ ಮತ್ತು ಮದುವೆಯಲ್ಲಿ ರಕ್ಷಣೆಯನ್ನು ಸಂಕೇತಿಸುತ್ತದೆ. ನಮ್ಮ ಚಿತ್ರದಲ್ಲಿ ಸೂಟ್ ಎಂಬುದು ಬಾಹ್ಯ ಲುಕ್‌ಗಳು ಕೆಲವೊಮ್ಮೆ ಆಂತರಿಕ ಆಲೋಚನೆಗಳನ್ನು ಹೇಗೆ ಪ್ರತಿಬಿಂಬಿಸುತ್ತವೆ ಎಂಬುದನ್ನು ಸಂಕೇತಿಸುತ್ತದೆ' ಎಂದು ಭಗತ್ ರಾಜ್ ಹೇಳಿದರು.

ಹೆಸರಾಂತ ವ್ಯಕ್ತಿಗಳು ಈ ಸೂಟ್ ಬಗ್ಗೆ ಕವನಗಳನ್ನು ಬರೆದಿದ್ದಾರೆ. ಅವುಗಳನ್ನು ಸಿನಿಮಾಗಾಗಿ ಹಾಡುಗಳಾಗಿ ಬಳಸಿಕೊಳ್ಳಲಾಗಿದೆ ಎಂದು ತಿಳಿಸಿದರು. 

ದ ಸೂಟ್ ಅನ್ನು ರಾಮಸ್ವಾಮಿ ನಿರ್ಮಿಸಿದ್ದು, ಕಿರಣ್ ಶಂಕರ್ ಅವರ ಸಂಗೀತ ಸಂಯೋಜನೆ ಮತ್ತು ಕಿರಣ್ ಹಂಪಾಪುರ ಅವರ ಛಾಯಾಗ್ರಹಣವಿದೆ. ಈ ಚಿತ್ರಕ್ಕೆ ಐವತ್ತಕ್ಕೂ ಹೆಚ್ಚು ಕಲಾವಿದರು ತಮ್ಮ ಕೊಡುಗೆ ನೀಡಿದ್ದು, ಶೀಘ್ರದಲ್ಲೇ ಚಿತ್ರ ಬಿಡುಗಡೆ ಮಾಡುವ ಯೋಜನೆ ಇದೆ ಎಂದರು ನಿರ್ದೇಶಕರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!