ರಿಷಬ್ ಶೆಟ್ಟಿ 
ಸಿನಿಮಾ ಸುದ್ದಿ

ಗೋವಾ ಸಿನಿಮೋತ್ಸವದಲ್ಲಿ ಕಾಂತಾರಕ್ಕೆ ಮತ್ತೊಂದು ಗರಿ: ವಿಶೇಷ ತೀರ್ಪುಗಾರರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಗಲ್ಲಾಪಟ್ಟಿಯಲ್ಲಿ ದೊಡ್ಡ ಸದ್ದು ಮಾಡಿದ್ದ ಕಾಂತಾರ ಚಿತ್ರಕ್ಕೆ ಇದೀಗ ಮತ್ತೊಂದು ಪ್ರಶಸ್ತಿ ಗರಿ ಸಿಕ್ಕಿದೆ. ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಭಾರತೀಯ ಚಿತ್ರ ನಿರ್ದೇಶಕ ರಿಷಬ್ ಶೆಟ್ಟಿ ಅವರು ಕಾಂತಾರ ಚಿತ್ರಕ್ಕಾಗಿ ವಿಶೇಷ ತೀರ್ಪುಗಾರರ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. 

ಗಲ್ಲಾಪಟ್ಟಿಯಲ್ಲಿ ದೊಡ್ಡ ಸದ್ದು ಮಾಡಿದ್ದ ಕಾಂತಾರ ಚಿತ್ರಕ್ಕೆ ಇದೀಗ ಮತ್ತೊಂದು ಪ್ರಶಸ್ತಿ ಗರಿ ಸಿಕ್ಕಿದೆ. ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಭಾರತೀಯ ಚಿತ್ರ ನಿರ್ದೇಶಕ ರಿಷಬ್ ಶೆಟ್ಟಿ ಅವರು ಕಾಂತಾರ ಚಿತ್ರಕ್ಕಾಗಿ ವಿಶೇಷ ತೀರ್ಪುಗಾರರ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. 

ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತೀರ್ಪುಗಾರರ ವಿಶೇಷ ಪ್ರಶಸ್ತಿ ಅಥವಾ 'ಸಿಲ್ವರ್ ಪೀಕಾಕ್' ಪ್ರಶಸ್ತಿ ಪಡೆದ ಮೊದಲ ಕನ್ನಡ ಸಿನಿಮಾ ಎಂಬ ಖ್ಯಾತಿಗೆ 'ಕಾಂತಾರ' ಪಾತ್ರವಾಗಿದೆ.

ತೀರ್ಪುಗಾರರ ಗಮನ ಸೆಳೆಯುವುದು ಪ್ರತಿ ವರ್ಷವೂ ವಿಶೇಷ. ಈ ಬಾರಿ ಆ ಗೌರವ ನಿರ್ದೇಶಕ ರಿಷಬ್ ಶೆಟ್ಟಿ ಪಾಲಾಗಿದೆ. 'ಕಾಂತಾರ' ಸಿನಿಮಾದಲ್ಲಿ ಅದ್ಭುತ ನಟನೆಗೆ ಹಾಗೂ ಅದ್ಭುತವಾಗಿ ಕತೆ ಹೇಳಿರುವ ರೀತಿಗೆ ರಿಷಬ್ ಶೆಟ್ಟಿ ಅವರಿಗೆ ತೀರ್ಪುಗಾರರ ವಿಶೇಷ ಪ್ರಶಸ್ತಿ ನೀಡಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಟ್ವೀಟ್ ಮಾಡಿದೆ.

ಈ ಪ್ರಶಸ್ತಿಯನ್ನು ಚಲನಚಿತ್ರದ ಕೆಲವು ಅಂಶಗಳಿಗಾಗಿ ನೀಡಲಾಗುತ್ತದೆ. ಒಬ್ಬ ವ್ಯಕ್ತಿಗೆ ಅವನ ಅಥವಾ ಅವಳ ಕಲಾತ್ಮಕ ಕೊಡುಗೆಗಾಗಿ ನೀಡಲಾಗುತ್ತದೆ. ಪ್ರಶಸ್ತಿಯು ಬೆಳ್ಳಿ ನವಿಲು ಪದಕ, 15 ಲಕ್ಷ ರೂ ಮತ್ತು ಪ್ರಮಾಣಪತ್ರವನ್ನು ಒಳಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ