ದರ್ಶನ್ 
ಸಿನಿಮಾ ಸುದ್ದಿ

ಸದ್ದಿಲ್ಲದೇ ತೆರೆಕಾಣಲು ಕಾಟೇರ ರೆಡಿ; ಬಿಡುಗಡೆ ದಿನಾಂಕ ಇಲ್ಲಿದೆ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಕಾಟೇರ ಚಿತ್ರದ ಬಿಗ್ ಅಪ್ಡೇಡ್ ಹೊರಬಂದಿದ್ದು ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ.

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಕಾಟೇರ ಚಿತ್ರದ ಬಿಗ್ ಅಪ್ಡೇಡ್ ಹೊರಬಂದಿದ್ದು ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ.

ಹೌದು ದರ್ಶನ್ ಅಭಿನಯದ ಕಾಟೇರ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದು ಡಿಸೆಂಬರ್ 29ರಂದು ಚಿತ್ರ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ.

ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರು ತಮ್ಮ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದು ತರುಣ್ ಕಿಶೋರ್ ಸುಧೀರ್ ನಿರ್ದೇಶಿಸಿದ್ದಾರೆ. ಇದೊಂದು ನಿಜ ಘಟನೆ ಆಧಾರಿತ ಚಿತ್ರವಾಗಿದೆ.

ರಕ್ತದ ಕಲೆಯಿರುವ ಮಚ್ಚನ್ನು ಹಿಡಿದಿರುವ ದರ್ಶನ್ ಅವರನ್ನು ಶಕ್ತಿಶಾಲಿ ಪಂಚ್‌ಲೈನ್‌ನೊಂದಿಗೆ ತೋರಿಸುವ ಮೂಲಕ ಚಿತ್ರದ ಮೋಷನ್ ಪೋಸ್ಟರ್ ಕೂಡ ಸಾಕಷ್ಟು ಸುದ್ದಿಯಾಯಿತು. ಡಾರ್ಕ್ ಮರೂನ್ ಟಿ-ಶರ್ಟ್ ಮತ್ತು ಲುಂಗಿಯನ್ನು ಧರಿಸಿರುವ ದರ್ಶನ್ ರೈತರ ಹಿನ್ನೆಲೆಯ ನಡುವೆ ಮಚ್ಚನ್ನು ಹಿಡಿದಿದ್ದಾರೆ. ಕಾಟೇರ 1970 ರ ದಶಕದ ಕರ್ನಾಟಕದ ಹಳ್ಳಿಯೊಂದರಲ್ಲಿ ನಡೆದ ನೈಜ ಘಟನೆಯಿಂದ ಸ್ಫೂರ್ತಿ ಪಡೆದಿದೆ ಎಂದು ಹೇಳಲಾಗುತ್ತದೆ.

ಕಾಟೇರ ಸಿನಿಮಾದಲ್ಲಿ ಮಾಲಾಶ್ರೀ ಅವರ ಮಗಳು ರಾಧನಾ ರಾಮ್ ನಟಿಸಿದ್ದು, ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಚಿತ್ರದಲ್ಲಿ ಹಿರಿಯ ನಟರಾದ ಬಿರಾದಾರ್, ಮಾಸ್ಟರ್ ರೋಹಿತ್ ಮತ್ತು ಡ್ಯಾನಿಶ್ ಅಖ್ತರ್ ಸೈಫಿ ಸೇರಿದಂತೆ ಪ್ರಮುಖ ಪಾತ್ರಗಳಲ್ಲಿ ಜಗಪತಿ ಬಾಬು ಮತ್ತು ಕುಮಾರ್ ಗೋವಿಂದ್ ಕೂಡ ನಟಿಸಿದ್ದಾರೆ. ಮಾಸ್ತಿ ಸಂಭಾಷಣೆ ಬರೆದಿದ್ದು, ವಿ ಹರಿಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ ಸುಧಾಕರ್ ಎಸ್ ರಾಜ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ