ಮಂಡ್ಯ ರಮೇಶ್ 
ಸಿನಿಮಾ ಸುದ್ದಿ

ಶೂಟಿಂಗ್ ವೇಳೆ ಕ್ವಾರಿಗೆ ಬಿದ್ದ ನಟ ಮಂಡ್ಯ ರಮೇಶ್: ಕೈ-ಕಾಲು ಮೂಳೆ ಮುರಿತ!

ಹಿರಿಯ ನಟ, ರಂಗಕರ್ಮಿ ಮಂಡ್ಯ ರಮೇಶ್ ಅವರು ಧಾರಾವಾಹಿ ಚಿತ್ರೀಕರಣದ ವೇಳೆ ಕಾಲು ಜಾರಿ ಬಿದ್ದಿದ್ದು, ತೀವ್ರಗಾಯದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಧಾರಾವಾಹಿ ಶೂಟಿಂಗ್ ವೇಳೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರು: ಹಿರಿಯ ನಟ, ರಂಗಕರ್ಮಿ ಮಂಡ್ಯ ರಮೇಶ್ ಅವರು ಧಾರಾವಾಹಿ ಚಿತ್ರೀಕರಣದ ವೇಳೆ ಕಾಲು ಜಾರಿ ಬಿದ್ದಿದ್ದು, ತೀವ್ರಗಾಯದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಧಾರಾವಾಹಿ ಶೂಟಿಂಗ್ ವೇಳೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ನಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಟಾರ್ ಸುವರ್ಣದಲ್ಲಿ ಪ್ರಸಾರ ಕಾಣಲಿರುವ ಹೊಸ ಧಾರಾವಾಹಿ 'ಆಸೆ' ಶೂಟಿಂಗ್ ವೇಳೆ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಲ್ಲು ಕ್ವಾರಿಯಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರಮೇಶ್ ಕಾಲು ಜಾರಿ ಬಿದ್ದಿದ್ದಾರೆ. ಘಟನೆಯಲ್ಲಿ ನಟ ಮಂಡ್ಯ ರಮೇಶ್​ ಅವರ ಕಾಲು ಮತ್ತು ಮುಂಗೈ ಮುರಿತವಾಗಿದೆ ಎಂದು ವರದಿಯಾಗಿದೆ.

ನಟ ಮಂಡ್ಯ ರಮೇಶ್ ಅವರು ರಮೇಶ್ ಅರವಿಂದ್ ನಿರ್ಮಾಣ ಮಾಡುತ್ತಿರುವ 'ಆಸೆ' ಸೀರಿಯಲ್‌ನಲ್ಲಿ ಪ್ರಮುಖ ಪೋಷಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿ ಶೂಟಿಂಗ್ ಬೆಂಗಳೂರಿನ ರಾಜರಾಜೇಶ್ವರಿ ನಗರದ ಹೊರಭಾಗದಲ್ಲಿರುವ ಕಲ್ಲು ಕ್ವಾರಿಯ ಬಳಿ ನಡೆಯುತ್ತಿತ್ತು, ಈ ವೇಳೆ ದುರ್ಘಟನೆ ನಡೆದಿದೆ.

ಕಲ್ಲು ಕ್ವಾರಿಯಲ್ಲಿ ಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು ವೈದ್ಯರು ಕಾಲಿಗೆ ಎರಡು ಆಪರೇಷನ್ ಮಾಡಿದ್ದಾರೆ ಎಂದು ವರದಿಯಾಗಿದೆ. ಶೂಟಿಂಗ್​ ಸ್ಥಳದಲ್ಲಿ ಮೇಲಿಂದ ಬಿದ್ದ ಕಾರಣ ಮುಂಗೈ ಮತ್ತು ಬಲಗಾಲಿಗೆ ತೀವ್ರಗಾಯವಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗುವ ಸಾಧ್ಯತೆ ಇದೆ. ರಮೇಶ್ ಅರವಿಂದ್ ನಿರ್ಮಾಣದ 'ಆಸೆ' ಕನ್ನಡದ ಸ್ಟಾರ್ ಸುವರ್ಣದಲ್ಲಿ 'ಆಸೆ' ಧಾರಾವಾಹಿ ಪ್ರಸಾರವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT