ಮಂಡ್ಯ ರಮೇಶ್ 
ಸಿನಿಮಾ ಸುದ್ದಿ

ಶೂಟಿಂಗ್ ವೇಳೆ ಕ್ವಾರಿಗೆ ಬಿದ್ದ ನಟ ಮಂಡ್ಯ ರಮೇಶ್: ಕೈ-ಕಾಲು ಮೂಳೆ ಮುರಿತ!

ಹಿರಿಯ ನಟ, ರಂಗಕರ್ಮಿ ಮಂಡ್ಯ ರಮೇಶ್ ಅವರು ಧಾರಾವಾಹಿ ಚಿತ್ರೀಕರಣದ ವೇಳೆ ಕಾಲು ಜಾರಿ ಬಿದ್ದಿದ್ದು, ತೀವ್ರಗಾಯದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಧಾರಾವಾಹಿ ಶೂಟಿಂಗ್ ವೇಳೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರು: ಹಿರಿಯ ನಟ, ರಂಗಕರ್ಮಿ ಮಂಡ್ಯ ರಮೇಶ್ ಅವರು ಧಾರಾವಾಹಿ ಚಿತ್ರೀಕರಣದ ವೇಳೆ ಕಾಲು ಜಾರಿ ಬಿದ್ದಿದ್ದು, ತೀವ್ರಗಾಯದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಧಾರಾವಾಹಿ ಶೂಟಿಂಗ್ ವೇಳೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ನಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಟಾರ್ ಸುವರ್ಣದಲ್ಲಿ ಪ್ರಸಾರ ಕಾಣಲಿರುವ ಹೊಸ ಧಾರಾವಾಹಿ 'ಆಸೆ' ಶೂಟಿಂಗ್ ವೇಳೆ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಲ್ಲು ಕ್ವಾರಿಯಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರಮೇಶ್ ಕಾಲು ಜಾರಿ ಬಿದ್ದಿದ್ದಾರೆ. ಘಟನೆಯಲ್ಲಿ ನಟ ಮಂಡ್ಯ ರಮೇಶ್​ ಅವರ ಕಾಲು ಮತ್ತು ಮುಂಗೈ ಮುರಿತವಾಗಿದೆ ಎಂದು ವರದಿಯಾಗಿದೆ.

ನಟ ಮಂಡ್ಯ ರಮೇಶ್ ಅವರು ರಮೇಶ್ ಅರವಿಂದ್ ನಿರ್ಮಾಣ ಮಾಡುತ್ತಿರುವ 'ಆಸೆ' ಸೀರಿಯಲ್‌ನಲ್ಲಿ ಪ್ರಮುಖ ಪೋಷಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿ ಶೂಟಿಂಗ್ ಬೆಂಗಳೂರಿನ ರಾಜರಾಜೇಶ್ವರಿ ನಗರದ ಹೊರಭಾಗದಲ್ಲಿರುವ ಕಲ್ಲು ಕ್ವಾರಿಯ ಬಳಿ ನಡೆಯುತ್ತಿತ್ತು, ಈ ವೇಳೆ ದುರ್ಘಟನೆ ನಡೆದಿದೆ.

ಕಲ್ಲು ಕ್ವಾರಿಯಲ್ಲಿ ಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು ವೈದ್ಯರು ಕಾಲಿಗೆ ಎರಡು ಆಪರೇಷನ್ ಮಾಡಿದ್ದಾರೆ ಎಂದು ವರದಿಯಾಗಿದೆ. ಶೂಟಿಂಗ್​ ಸ್ಥಳದಲ್ಲಿ ಮೇಲಿಂದ ಬಿದ್ದ ಕಾರಣ ಮುಂಗೈ ಮತ್ತು ಬಲಗಾಲಿಗೆ ತೀವ್ರಗಾಯವಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗುವ ಸಾಧ್ಯತೆ ಇದೆ. ರಮೇಶ್ ಅರವಿಂದ್ ನಿರ್ಮಾಣದ 'ಆಸೆ' ಕನ್ನಡದ ಸ್ಟಾರ್ ಸುವರ್ಣದಲ್ಲಿ 'ಆಸೆ' ಧಾರಾವಾಹಿ ಪ್ರಸಾರವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT