ರಜನಿಕಾಂತ್ 
ಸಿನಿಮಾ ಸುದ್ದಿ

ನನ್ನ 170ನೇ ಚಿತ್ರವು ಸಾಮಾಜಿಕ ಸಂದೇಶ ಹೊಂದಿರುವ ದೊಡ್ಡ ಎಂಟರ್‌ಟೈನರ್ ಆಗಿರುತ್ತದೆ: ರಜನಿಕಾಂತ್

ಸಿನಿಮಾ ಐಕಾನ್ ರಜನಿಕಾಂತ್ ಅವರು ತಮ್ಮ 170ನೇ ಚಿತ್ರದ ಚಿತ್ರೀಕರಣವನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುತ್ತದೆ. ಇದು ಸಾಮಾಜಿಕ ಸಂದೇಶದೊಂದಿಗೆ ದೊಡ್ಡ ಎಂಟರ್‌ಟೈನರ್ ಆಗಿದೆ ಎಂದು ಮಂಗಳವಾರ ಹೇಳಿದ್ದಾರೆ.

ಚೆನ್ನೈ: ಸಿನಿಮಾ ಐಕಾನ್ ರಜನಿಕಾಂತ್ ಅವರು ತಮ್ಮ 170ನೇ ಚಿತ್ರದ ಚಿತ್ರೀಕರಣವನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುತ್ತದೆ. ಇದು ಸಾಮಾಜಿಕ ಸಂದೇಶದೊಂದಿಗೆ ದೊಡ್ಡ ಎಂಟರ್‌ಟೈನರ್ ಆಗಿದೆ ಎಂದು ಮಂಗಳವಾರ ಹೇಳಿದ್ದಾರೆ.

ಸದ್ಯ ಇನ್ನೂ ಹೆಸರಿಡದ ಈ ಸಿನಿಮಾವನ್ನು ಲೈಕಾ ಪ್ರೊಡಕ್ಷನ್ಸ್ ನಿರ್ಮಿಸಲಿದೆ. ಮಾರ್ಚ್‌ನಲ್ಲಿ ಈ ಸಿನಿಮಾವನ್ನು ಘೋಷಿಸಲಾಗಿದ್ದು, ಇದನ್ನು 'ಜೈ ಭೀಮ್' ಖ್ಯಾತಿಯ ಟಿಜೆ ಜ್ಞಾನವೇಲ್ ನಿರ್ದೇಶಿಸಲಿದ್ದಾರೆ.

'ನಾನು ನನ್ನ 170ನೇ ಚಿತ್ರವನ್ನು ನಿರ್ದೇಶಕ ಜ್ಞಾನವೇಲ್ ಮತ್ತು ಲೈಕಾ ಪ್ರೊಡಕ್ಷನ್ಸ್ ಜೊತೆಗೆ ಮಾಡುತ್ತಿದ್ದೇನೆ. ಈ ಸಿನಿಮಾ ಸಾಮಾಜಿಕ ಸಂದೇಶದೊಂದಿಗೆ ದೊಡ್ಡ ಎಂಟರ್‌ಟೈನರ್ ಆಗಿರುತ್ತದೆ' ಎಂದು 72 ವರ್ಷದ ನಟ ತಿರುವನಂತಪುರಕ್ಕೆ ಹೊರಡುವ ಮೊದಲು ಚೆನ್ನೈ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

'ನಾನು ಈಗ ನನ್ನ 170ನೇ ಚಿತ್ರದ ಚಿತ್ರೀಕರಣಕ್ಕೆ ಹೋಗುತ್ತಿದ್ದೇನೆ. ಚಿತ್ರದ ಶೀರ್ಷಿಕೆಯನ್ನು ಇನ್ನೂ ನಿರ್ಧರಿಸಿಲ್ಲ' ಎಂದು ರಜನಿಕಾಂತ್ ಹೇಳಿದ್ದಾರೆ.

ಲೈಕಾ ಪ್ರೊಡಕ್ಷನ್ಸ್‌ನ ಸುಭಾಸ್ಕರನ್ ನಿರ್ಮಿಸಲಿರುವ ಈ ತಮಿಳು ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಲಿದ್ದಾರೆ.

ನೆಲ್ಸನ್ ನಿರ್ದೇಶನದ 'ಜೈಲರ್' ಸಿನಿಮಾದಲ್ಲಿ ರಜನಿಕಾಂತ್ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಆಗಸ್ಟ್‌ನಲ್ಲಿ ಬಿಡುಗಡೆಯಾದ ಈ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಯಶಸ್ಸನ್ನು ಕಂಡಿದೆ.

ಈ ಚಿತ್ರಕ್ಕೆ ಸಿಕ್ಕಿರುವ ವಿಜಯವು ನಿರೀಕ್ಷೆಗೂ ಮೀರಿದ್ದಾಗಿದೆ ಎಂದು ಹಿರಿಯ ನಟ ಹೇಳಿದ್ದರು.

ರಜನಿಕಾಂತ್ ಅವರು ಲೋಕೇಶ್ ಕನಕರಾಜ್ ಅವರ ಇನ್ನೂ ಹೆಸರಿಡದ ಮತ್ತು ಮಗಳು ಐಶ್ವರ್ಯಾ ರಜನಿಕಾಂತ್ ಅವರ 'ಲಾಲ್ ಸಲಾಮ್' ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT