ಯೋಗಿ ಮತ್ತು ವಿನಯ್ ರಾಜ್‌ಕುಮಾರ್ 
ಸಿನಿಮಾ ಸುದ್ದಿ

ವಿನಯ್ ರಾಜ್‌ಕುಮಾರ್ ನಟನೆಯ 'ಗ್ರಾಮಾಯಣ' ಚಿತ್ರದ ಪ್ರಮುಖ ಪಾತ್ರದಲ್ಲಿ ಲೂಸ್ ಮಾದ ಯೋಗಿ: ದೇವನೂರು ಚಂದ್ರು

ವಿನಯ್ ರಾಜ್‌ಕುಮಾರ್ ನಟನೆಯ ಗ್ರಾಮಾಯಣ ಚಿತ್ರಕ್ಕೆ ನಾಯಕಿಯಾಗಿ ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ ಆಯ್ಕೆಯಾಗಿದ್ದರೆ, ಚಿತ್ರದಲ್ಲಿ ಲೂಸ್ ಮಾದ ಯೋಗಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ದೇವನೂರು ಚಂದ್ರು ಅವರ ಚೊಚ್ಚಲ ನಿರ್ದೇಶನದ ಗ್ರಾಮಾಯಣ ಸಿನಿಮಾ ಅಕ್ಟೋಬರ್ 6 ರಂದು ದೇವನೂರಿನಲ್ಲಿ ಚಿತ್ರೀಕರಣ ಪ್ರಾರಂಭಿಸಲಿದೆ.

ವಿನಯ್ ರಾಜ್‌ಕುಮಾರ್ ನಟನೆಯ ಗ್ರಾಮಾಯಣ ಚಿತ್ರಕ್ಕೆ ನಾಯಕಿಯಾಗಿ ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ ಆಯ್ಕೆಯಾಗಿದ್ದರೆ, ಚಿತ್ರದಲ್ಲಿ ಲೂಸ್ ಮಾದ ಯೋಗಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ದೇವನೂರು ಚಂದ್ರು ಅವರ ಚೊಚ್ಚಲ ನಿರ್ದೇಶನದ ಗ್ರಾಮಾಯಣ ಸಿನಿಮಾ ಅಕ್ಟೋಬರ್ 6 ರಂದು ದೇವನೂರಿನಲ್ಲಿ ಚಿತ್ರೀಕರಣ ಪ್ರಾರಂಭಿಸಲಿದೆ.

'ನಾನು ಯೋಗಿಯನ್ನು ಕಳೆದ 15 ವರ್ಷಗಳಿಂದ ತಿಳಿದಿದ್ದೇನೆ ಮತ್ತು ನಾನು ಗ್ರಾಮಾಯಣ ಸಿನಿಮಾಗಾಗಿ ಅವರನ್ನು ಸಂಪರ್ಕಿಸಿದಾಗ, ಅವರು ಈ ಸಿನಿಮಾದ ಭಾಗವಾಗುವ ಅವಕಾಶವನ್ನು ಪ್ರೀತಿಯಿಂದ ಸ್ವೀಕರಿಸಿದರು. ತಮ್ಮ ವೃತ್ತಿಜೀವನದುದ್ದಕ್ಕೂ, ಯೋಗಿ ಅವರು ಬಹುಮುಖಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ದುನಿಯಾದಿಂದ ಪ್ರಾರಂಭಿಸಿ ಮತ್ತು ಅಂಬಾರಿ, ಸಿದ್ಲಿಂಗು, ನಾನು ಅದು, ಮತ್ತು ಸರೋಜ ಮತ್ತು ಅವರ ಇತ್ತೀಚಿನ, ಹೆಡ್ ಬುಷ್‌ನಂತಹ ಸಿನಿಮಾಗಳಲ್ಲಿ ವೈವಿಧ್ಯಮಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಅವರು ತಮ್ಮ ಬಹುಮುಖಿ ಪ್ರತಿಭೆಯಿಂದ ಆನ್-ಸ್ಕ್ರೀನ್ ಪಾತ್ರಗಳೊಂದಿಗೆ ಪ್ರೇಕ್ಷಕರನ್ನು ಅಚ್ಚರಿಗೊಳಿಸುವ ಸಾಮರ್ಥ್ಯ ಹೊಂದಿದ್ದಾರೆ' ಎಂದರು.

'ಗ್ರಾಮಾಯಣದ ವಿಷಯಕ್ಕೆ ಬಂದರೆ, ನಾನು ಅವರನ್ನು ಖಳನಾಯಕ ಅಥವಾ ಪೋಷಕ ಪಾತ್ರದಲ್ಲಿ ನಿರ್ದಿಷ್ಟ ಪಾತ್ರಕ್ಕೆ ಸೀಮಿತಗೊಳಿಸಲು ಸಾಧ್ಯವಿಲ್ಲ. ಆದರೆ, ಅವರು ವಿಶಿಷ್ಟ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ. ಯೋಗಿ ಅವರು ಗ್ರಾಮಾಯಣದ ಸಂಪೂರ್ಣ ಸ್ಕ್ರಿಪ್ಟ್ ಅನ್ನು ತಿಳಿದಿದ್ದಾರೆ ಮತ್ತು ಅವರ ಪಾತ್ರದ ಬಗ್ಗೆ ಅವರಿಗೆ ಮೆಚ್ಚುಗೆ ಇದೆ. ನಮ್ಮ ಸಿನಿಮಾದಲ್ಲಿ ಅವರ ಉಪಸ್ಥಿತಿ ನಿಜಕ್ಕೂ ಅಪೂರ್ವವಾಗಿರುತ್ತದೆ ಎಂದು ಆತ್ಮವಿಶ್ವಾಸದಿಂದ ಹೇಳಬಲ್ಲೆ’ ಎನ್ನುತ್ತಾರೆ ದೇವನೂರು ಚಂದ್ರು.

ಚಿತ್ರಕ್ಕೆ ಲಹರಿ ಫಿಲಂಸ್‌ನ ಜಿ ಮನೋಹರನ್ ಮತ್ತು ವೀನಸ್ ಎಂಟರ್‌ಟೈನರ್ಸ್‌ನ ಕೆಪಿ ಶ್ರೀಕಾಂತ್ ಬೆಂಬಲ ನೀಡಿದ್ದು, ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜನೆಯನ್ನು ನಿರ್ವಹಿಸುತ್ತಿದ್ದಾರೆ. ಯಶ್ವಿನಿ ಅಂಚನ್ ಛಾಯಾಗ್ರಹಣ ಮಾಡಲಿದ್ದು, ಶಿವಕುಮಾರ್ ಕಲಾ ನಿರ್ದೇಶನ ಮಾಡಲಿದ್ದಾರೆ.

ಗ್ರಾಮೀಣ ಭಾಗದ ಹಿನ್ನೆಲೆಯಲ್ಲಿ ನಡೆಯುವ ಕಥೆಯಲ್ಲಿ ವಿನಯ್ ಹಳ್ಳಿ ಯುವಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಗ್ರಾಮಾಯಣದಲ್ಲಿ ಖ್ಯಾತ ನಟರಾದ ಅಪರ್ಣಾ ಮತ್ತು ಗೋಪಾಲಕೃಷ್ಣ ದೇಶಪಾಂಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT