ಘೋಸ್ಟ್ ಸಿನಿಮಾದಲ್ಲಿ ನಟ ಶಿವರಾಜ್‌ಕುಮಾರ್ 
ಸಿನಿಮಾ ಸುದ್ದಿ

ಶಿವರಾಜಕುಮಾರ್ ಅಭಿನಯದ ಬಹುನಿರೀಕ್ಷಿತ 'ಘೋಸ್ಟ್' ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ; ಅ. 19ರಂದು ತೆರೆಗೆ!

ಶಿವರಾಜಕುಮಾರ್ ಅಭಿನಯದ ಬಹು ನಿರೀಕ್ಷಿತ ಘೋಸ್ಟ್ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಗ್ರೀನ್ ಸಿಗ್ನಲ್ ನೀಡಿದ್ದು, ಯು/ಎ ಪ್ರಮಾಣ ಪತ್ರವನ್ನು ಪಡೆದುಕೊಂಡಿದೆ. ಈ ಸಿನಿಮಾ ಅಕ್ಟೋಬರ್ 19 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. 

ಶಿವರಾಜಕುಮಾರ್ ಅಭಿನಯದ ಬಹು ನಿರೀಕ್ಷಿತ ಘೋಸ್ಟ್ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಗ್ರೀನ್ ಸಿಗ್ನಲ್ ನೀಡಿದ್ದು, ಯು/ಎ ಪ್ರಮಾಣ ಪತ್ರವನ್ನು ಪಡೆದುಕೊಂಡಿದೆ. ಈ ಸಿನಿಮಾ ಅಕ್ಟೋಬರ್ 19 ರಂದು ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. 
ಶ್ರೀನಿ ನಿರ್ದೇಶನದ ಮತ್ತು ಸಂದೇಶ್ ಪ್ರೊಡಕ್ಷನ್ ನಿರ್ಮಿಸಿರುವ ಘೋಸ್ಟ್ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

ರಜನಿಕಾಂತ್ ಅಭಿನಯದ ಜೈಲರ್‌ನಲ್ಲಿ ನಟ ಶಿವರಾಜಕುಮಾರ್ ಅವರ ಅತಿಥಿ ಪಾತ್ರವು ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿತ್ತು ಮತ್ತು ಹೊಸ ಅಭಿಮಾನಿ ಬಳಗದ ಉದಯಕ್ಕೆ ಕಾರಣವಾಗಿತ್ತು. ಇದೇ ಕಾರಣಕ್ಕೆ ಚಿತ್ರತಂಡ ಘೋಸ್ಟ್ ಸಿನಿಮಾವನ್ನು ಬಹು ಭಾಷೆಗಳಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ. 

ಆರಂಭದಲ್ಲಿ, ಘೋಸ್ಟ್ ಕನ್ನಡದಲ್ಲಿ ಮಾತ್ರ ಪ್ರೀಮಿಯರ್ ಆಗಲಿದೆ ಮತ್ತು ಸಂದೇಶ್ ಪ್ರೊಡಕ್ಷನ್ ಮೂಲಕ ವಿತರಿಸಲಾಗುವುದು ಎನ್ನಲಾಗಿತ್ತು. ಹಿಂದಿ ವಿತರಣಾ ಹಕ್ಕುಗಳನ್ನು ಪಡೆದಿರುವ ಪೆನ್ ಸ್ಟುಡಿಯೋಸ್, ಉತ್ತರ ಭಾರತದಲ್ಲಿ ಸುಮಾರು 600 ಸ್ಕ್ರೀನ್‌ಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ಯೋಜಿಸಿದೆ. ತಮಿಳು ಮತ್ತು ಮಲಯಾಳಂನಲ್ಲಿ ವಿತರಣೆಯ ಒಪ್ಪಂದ ಇನ್ನೂ ಅಂತಿಮವಾಗದಿದ್ದರೂ, ದಿಲ್ ರಾಜು ಒಂದು ವಾರದ ನಂತರ ತೆಲುಗು ಆವೃತ್ತಿಯನ್ನು ವಿತರಿಸಲಿದ್ದಾರೆ.

ಶಿವರಾಜಕುಮಾರ್ ಅವರಲ್ಲದೆ ಘೋಸ್ಟ್ ಸಿನಿಮಾದಲ್ಲಿ ಅನುಪಮ್ ಖೇರ್ ಮತ್ತು ಜಯರಾಮ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅರ್ಚನಾ ಜೋಯಿಸ್ ಪತ್ರಕರ್ತೆಯಾಗಿ ಪ್ರಮುಖ ಪಾತ್ರವನ್ನು ನಿಭಾಯಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಇದ್ದು, ಮಹೇಂದ್ರ ಸಿಂಹ ಛಾಯಾಗ್ರಹಣವನ್ನು ನಿರ್ವಹಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT