ನಟ ಶಿವರಾಜ್ ಕುಮಾರ್. 
ಸಿನಿಮಾ ಸುದ್ದಿ

ಘೋಸ್ಟ್‌ ಚಿತ್ರತಂಡಕ್ಕೆ ಶಿವಣ್ಣ ಅಭಿಮಾನಿಗಳಿಂದ ಬಿಗ್‌ ಸರ್ಪ್ರೈಸ್‌!

ತಮಗಾಗಿ ವಿಶೇಷ ಶೋವನ್ನೂ ಆಯೋಜಿಸಿರುವ ಘೋಸ್ಟ್ ಚಿತ್ರತಂಡಕ್ಕೆ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಬಿಗ್ ಸರ್ಪೈಸ್ ನೀಡಲು ಅಭಿಮಾನಿಗಳು ಸಿದ್ಧತೆ ನಡೆಸುತ್ತಿದ್ದಾರೆ.

ತಮಗಾಗಿ ವಿಶೇಷ ಶೋವನ್ನೂ ಆಯೋಜಿಸಿರುವ ಘೋಸ್ಟ್ ಚಿತ್ರತಂಡಕ್ಕೆ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಬಿಗ್ ಸರ್ಪೈಸ್ ನೀಡಲು ಅಭಿಮಾನಿಗಳು ಸಿದ್ಧತೆ ನಡೆಸುತ್ತಿದ್ದಾರೆ.

ಸ್ಯಾಂಡಲ್‌ವುಡ್‌ನ ಸೆಂಚುರಿ ಸ್ಟಾರ್‌ ಶಿವರಾಜ್‌ಕುಮಾರ್‌ ಅವರ ಈ ವರ್ಷದ ಮೊದಲ ಸಿನಿಮಾ ‘ಘೋಸ್ಟ್‌’ ಚಿತ್ರ ಅ.19ಕ್ಕೆ ಬಿಡುಗಡೆಯಾಗುತ್ತಿದ್ದು, ಇದಕ್ಕೂ ಮೊದಲು ಅ.18ರ ಮಧ್ಯರಾತ್ರಿ ಅಭಿಮಾನಿಗಳಿಗಾಗಿ ಘೋಸ್ಟ್ ಚಿತ್ರತಂಡ ವಿಶೇಷ ಶೋವನ್ನು ಆಯೋಜಿಸಿದೆ.

ಇದಕ್ಕೆ ಸಾಕಷ್ಟು ಥ್ರಿಲ್ ಆಗಿರುವ ಅಭಿಮಾನಿಗಳು ಚಿತ್ರತಂಡಕ್ಕೆ ಬಿಗ್ ಸರ್ಪೈಸ್ ಕೊಡಲು ಮುಂದಾಗಿದ್ದಾರೆ. ಚಿತ್ರತಂಡಕ್ಕೆ ವಿಶೇಷ ಹಾಡಿನ ಮೂಲಕ ಸರ್ಪೈಸ್ ನೀಡಲು ಸಿದ್ಧತೆ ನಡೆಸುತ್ತಿದ್ದಾರೆ.

ಈ ಹಾಡಿಕೆ ಪ್ರಸನ್ನ ಅವರು ಸಾಹಿತ್ಯ ಬರೆದಿದ್ದರೆ, ಅಗಸ್ತ್ಯ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಹಾಡನ್ನು ರಾಜ್ಯದಾದ್ಯಂತ ಇರುವ ಶಿವಣ್ಣ ಅವರ ಅಭಿಮಾನಿಗಳು ಪ್ರಾಯೋಜಿಸಿದ್ದಾರೆ. ಹೊಸಪೇಟೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಹಾಡವನ್ನು ಅಭಿಮಾನಿಗಳು ಚಿತ್ರ ತಂಡಕ್ಕೆ ಪ್ರಸ್ತುತಪಡಿಸಲಿದ್ದಾರೆ.

ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅವರು ಅರ್ಪಿಸಿರುವ, ಸಂದೇಶ್ ಎನ್. ನಿರ್ಮಾಣದ ಘೋಸ್ಟ್ ಚಿತ್ರವನ್ನು ಶ್ರೀನಿ ನಿರ್ದೇಶಿಸಿದ್ದಾರೆ. ಶಿವರಾಜ್‌ಕುಮಾರ್‌ ಅಭಿನಯದ ‘ಭಜರಂಗಿ’ ಚಿತ್ರದ ಪ್ರದರ್ಶನ ಬೆಳಗ್ಗೆ 6ರಿಂದ ಆರಂಭವಾಗಿತ್ತು. ಆದರೆ. ಮಧ್ಯರಾತ್ರಿಯಿಂದಲೇ ಪ್ರದರ್ಶನ ಕಾಣುತ್ತಿರುವ ಮೊದಲ ಚಿತ್ರ ‘ಘೋಸ್ಟ್’ ಚಿತ್ರವಾಗಿದೆ.

ಚಿತ್ರವು ಕನ್ನಡದ ಜೊತೆಗೆ ತಮಿಳು, ತೆಲುಗು, ಹಿಂದಿ, ಮಲಯಾಳಂನಲ್ಲಿ ಘೋಸ್ಟ್‌ ಸಿನಿಮಾ ರಿಲೀಸ್‌ ಆಗಲಿದೆ. ಚಿತ್ರವು ದೇಶದಾದ್ಯಂತ 600 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ.

ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದರೆ, ಮಹೇಂದ್ರ ಸಿಂಹ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಅನುಪಮ್ ಖೇರ್, ಜಯರಾಮ್ ಮತ್ತು ಅರ್ಚನಾ ಜೋಯಿಸ್ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT