ಪ್ರಭಾಸ್, ಶಿವಣ್ಣ, ಮೋಹನ್ ಲಾಲ್ 
ಸಿನಿಮಾ ಸುದ್ದಿ

'ಕಣ್ಣಪ್ಪ' ತೆಲುಗು ಚಿತ್ರದಲ್ಲಿ ಮೋಹನ್ ಲಾಲ್, ಪ್ರಭಾಸ್ ಜೊತೆಗೆ ಶಿವಣ್ಣ! ಖಚಿತಪಡಿಸಿದ ವಿಷ್ಣು ಮಂಚು

'ಜೈಲರ್' ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿಯಾದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಗೆ ಬೇರೆ ಬೇರೆ ಇಂಡಸ್ಟ್ರಿಯಿಂದ ಅವಕಾಶಗಳು ಹುಡುಕಿ ಬರುತ್ತಿವೆ. ಇದೀಗ ಮುಕೇಶ್ ಕುಮಾರ್ ಸಿಂಗ್ ನಿರ್ದೇಶನದ ತೆಲುಗಿನ ಫ್ಯಾಂಟಸಿ-ಆಕ್ಷನ್ 'ಕಣ್ಣಪ್ಪ' ಚಿತ್ರದಲ್ಲಿ ಪ್ರಭಾಸ್, ಮೋಹನ್ ಲಾಲ್ ಜೊತೆಗೆ ನಟಿಸುತ್ತಿದ್ದಾರೆ.

ಹೈದ್ರಾಬಾದ್: 'ಜೈಲರ್' ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿಯಾದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಗೆ ಬೇರೆ ಬೇರೆ ಇಂಡಸ್ಟ್ರಿಯಿಂದ ಅವಕಾಶಗಳು ಹುಡುಕಿ ಬರುತ್ತಿವೆ. ಇದೀಗ ಮುಕೇಶ್ ಕುಮಾರ್ ಸಿಂಗ್ ನಿರ್ದೇಶನದ ತೆಲುಗಿನ ಫ್ಯಾಂಟಸಿ-ಆಕ್ಷನ್ 'ಕಣ್ಣಪ್ಪ' ಚಿತ್ರದಲ್ಲಿ ಪ್ರಭಾಸ್, ಮೋಹನ್ ಲಾಲ್ ಜೊತೆಗೆ ನಟಿಸುತ್ತಿದ್ದಾರೆ.

ಈ ಸುದ್ದಿ ಶಿವನ ಪರಮ ಭಕ್ತರಾದ ತಮಿಳಿನ 'ಭಕ್ತ ಕಣ್ಣಪ್ಪ' ಸಿನಿಮಾದ ಆಫ್ ಡೇಟ್ ಗಾಗಿ ಕಾಯುತ್ತಿದ್ದ, ಶಿವಣ್ಣನ ಅಭಿಮಾನಿಗಳಿಗೆ ಆಹ್ಲಾದಕರ ಅಚ್ಚರಿಯನ್ನುಂಟು ಮಾಡಿದೆ. ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಅಭಿನಯಿಸುತ್ತಾರೆ ಎಂಬ ಊಹಾಪೋಹಗಳು ಸಾಕಷ್ಟು ದಿನದಿಂದ ಹರಿದಾಡುತಿತ್ತು. ಆದಾಗ್ಯೂ, ಈಗ ಸಿನಿಮಾದ ಸಹ ನಿರ್ಮಾಪಕ- ಕಥೆಗಾರ- ನಾಯಕ ನಟ ವಿಷ್ಣು ಮಂಚು ಈ ವಿಷಯವನ್ನು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಖಚಿತಪಡಿಸುವುದರೊಂದಿಗೆ ಅಂದುಕೊಂಡಿದ್ದ ನಿರೀಕ್ಷೆ ಈಗ ನಿಜವಾಗಿದೆ. ಹರ್ ಹರ್ ಮಹಾದೇವ್, ಶಿವ ರಾಜ್‌ಕುಮಾರ್ ಚಿತ್ರತಂಡಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಶಿವ ರಾಜ್‌ಕುಮಾರ್ ಕನ್ನಡ ಚಿತ್ರರಂಗದ ವರನಟ ಡಾ. ರಾಜ್‌ಕುಮಾರ್ ಅವರ ಹಿರಿಯ ಪುತ್ರ. ಈಗ ಸೂಪರ್‌ಸ್ಟಾರ್ ಆಗಿರುವ ನಟ ಮೂರು ದಶಕಗಳ ಸುದೀರ್ಘ ವೃತ್ತಿಜೀವನವನ್ನು ಹೊಂದಿದ್ದು, ಕನ್ನಡದಲ್ಲಿ 125 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರರಂಗಕ್ಕೆ ನೀಡಿದ ಕೊಡುಗೆಗಳಿಗಾಗಿ, ಶಿವ ರಾಜ್‌ಕುಮಾರ್ ಅವರಿಗೆ ನಾಲ್ಕು ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು, ನಾಲ್ಕು ದಕ್ಷಿಣ ಫಿಲ್ಮ್‌ಫೇರ್ ಪ್ರಶಸ್ತಿಗಳು ಮತ್ತು ಆರು ದಕ್ಷಿಣ ಭಾರತೀಯ ಅಂತರರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಸೇರಿದಂತೆ ಹಲವಾರು ಪ್ರಶಸ್ತಿಗಳು ಸಂದಿವೆ.

ವಿಷ್ಣು ಮಂಚು ಬಗ್ಗೆ ಹೇಳುವುದಾದರೆ, ಕಣ್ಣಪ್ಪ' ಕೇವಲ ಚಲನಚಿತ್ರವಲ್ಲ. ಬದಲಿಗೆ ಪ್ಯಾಶನ್ ಪ್ರಾಜೆಕ್ಟ್ ಆಗಿದೆ. ಏಕೆಂದರೆ ಕಳೆದ ಏಳು ವರ್ಷಗಳಿಂದ ಕಥೆ ರಚಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ದಕ್ಷಿಣ ಭಾರತದ ಚಲನಚಿತ್ರೋದ್ಯಮದ ಮೂವರು ಸೂಪರ್‌ಸ್ಟಾರ್‌ಗಳನ್ನು ಹೊಂದಿರುವ ಈ ಚಿತ್ರ, ಭಾರತದಾದ್ಯಂತ ಪ್ರೇಕ್ಷಕರ ಗಮನವನ್ನು ಸೆಳೆಯುವ ನಿಟ್ಟಿನಲ್ಲಿ ತಯಾರಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ