ವಸಿಷ್ಠ ಸಿಂಹ 
ಸಿನಿಮಾ ಸುದ್ದಿ

ಇನ್ನೂ ಹೆಸರಿಡದ ಬ್ರಹ್ಮ ನಿರ್ದೇಶನದ ಕ್ರೈಮ್ ಥ್ರಿಲ್ಲರ್ ಸಿನಿಮಾದಲ್ಲಿ ನಟ ವಸಿಷ್ಠ ಸಿಂಹ ಪಾತ್ರ!

ಸಿದ್ಧಿ ಸೀರೆ ಮತ್ತು ರಾಗಿಣಿ ದ್ವಿವೇದಿ ಅಭಿನಯದ ಸಾರಿ ಕರ್ಮ ರಿಟರ್ನ್ಸ್ ಸಿನಿಮಾ ನಿರ್ದೇಶಿಸಿದ್ದ ಬ್ರಹ್ಮಾನಂದ ರೆಡ್ಡಿ (ಬ್ರಹ್ಮ) ಅವರು ಇದೀಗ ಹೊಸ ಚಿತ್ರದ ನಿರ್ದೇಶನಕ್ಕಿಳಿದಿದ್ದಾರೆ. ಈ ಮಧ್ಯೆ, ಬ್ರಹ್ಮಾ ಅವರು ನಟ ವಸಿಷ್ಠ ಸಿಂಹ ಅವರೊಂದಿಗೆ ಕೆಲಸ ಮಾಡಲು ಮುಂದಾಗಿದ್ದಾರೆ.  

'ಸಿದ್ಧಿ ಸೀರೆ' ಸಿನಿಮಾ ನಿರ್ದೇಶಿಸಿದ್ದ ಬ್ರಹ್ಮಾನಂದ ರೆಡ್ಡಿ (ಬ್ರಹ್ಮ) ಅವರು ಇದೀಗ ಹೊಸ ಚಿತ್ರದ ನಿರ್ದೇಶನಕ್ಕಿಳಿದಿದ್ದಾರೆ. ಅವರ ಸಿದ್ದಿ ಸೀರೆ ಸಿನಿಮಾ ನ್ಯೂಯಾರ್ಕ್ ಮತ್ತು ಟೋಕಿಯೊ ಚಲನಚಿತ್ರೋತ್ಸವಗಳಲ್ಲಿ ಮನ್ನಣೆ ಗಳಿಸಿತ್ತು. ರಾಗಿಣಿ ದ್ವಿವೇದಿ ಅಭಿನಯದ ಅವರ 'ಸಾರಿ ಕರ್ಮ ರಿಟರ್ನ್ಸ್' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. 

ಈ ಮಧ್ಯೆ, ಬ್ರಹ್ಮಾ ಅವರು ನಟ ವಸಿಷ್ಠ ಸಿಂಹ ಅವರೊಂದಿಗೆ ಕೆಲಸ ಮಾಡಲು ಮುಂದಾಗಿದ್ದಾರೆ.  ವಸಿಷ್ಠ ಸಿಂಹ ಅವರ ಜನ್ಮದಿನದಂದೇ ಸಿನಿಮಾದ ಘೋಷಣೆ ಮಾಡಲಾಗಿದೆ.

ನಿರ್ದೇಶಕ ಬ್ರಹ್ಮ ತಮ್ಮ ಮುಂಬರುವ ಯೋಜನೆ ಕುರಿತು ಕೆಲ ವಿವರಗಳನ್ನು ಹಂಚಿಕೊಂಡಿದ್ದು, ಇದು ಕ್ರೈಮ್ ಥ್ರಿಲ್ಲರ್ ಎಂದು ವಿವರಿಸುತ್ತಾರೆ. 'ಇನ್ನೂ ಹೆಸರಿಡದ ಈ ಚಿತ್ರವನ್ನು ಅನನ್ಯವಾಗಿಸುವುದು ಅದರ ಕಥೆ ಹೇಳುವ ವಿಭಿನ್ನ ಶೈಲಿ. ಈ ರೀತಿಯ ಚಿತ್ರಗಳು ಭಾರತೀಯ ಚಿತ್ರರಂಗದಲ್ಲಿ ಕಡಿಮೆ ಬಂದಿವೆ' ಎಂದು ನಾಯಕನನ್ನು ಎರಡು ಶೇಡ್‌ಗಳಲ್ಲಿ ಚಿತ್ರಿಸಲು ಉದ್ದೇಶಿಸಿರುವ ಬ್ರಹ್ಮ ಹೇಳುತ್ತಾರೆ.

ಈ ಚಿತ್ರಕ್ಕೆ ಕಲಾಸೃಷ್ಟಿ ಪ್ರೊಡಕ್ಷನ್ಸ್ ಬಂಡವಾಳ ಹೂಡಲಿದ್ದು, ಬೆಂಗಳೂರು, ಕೊಡಗು ಮುಂತಾದ ಕಡೆಗಳಲ್ಲಿ ಚಿತ್ರೀಕರಣ ನಡೆಯಲಿದೆ. ಚಿತ್ರದ ಪಾತ್ರವೊಂದರಲ್ಲಿ ನಟಿಸುತ್ತಿರುವ ಅಫ್ಜಲ್, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆಗಿಯೂ ಬಡ್ತಿ ಪಡೆಯಲಿದ್ದಾರೆ. ಚಿತ್ರಕ್ಕೆ ರಾಜೀವ್ ಗಣೇಶನ್ ಅವರ ಛಾಯಾಗ್ರಹಣ ಮತ್ತು ರಾಘವನ್ ಕಾರ್ತಿಕ್ ಅವರ ಸಂಗೀತ ಸಂಯೋಜನೆ ಇರಲಿದೆ.

ನವೆಂಬರ್‌ನಲ್ಲಿ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ. ನಟ ವಸಿಷ್ಠ ಸಿಂಹ ಅವರು 'Love... ಲಿ' ಮತ್ತು ತೆಲುಗು ಸಿನಿಮಾವೊಂದರಲ್ಲಿ ಬ್ಯುಸಿಯಾಗಿದ್ದಾರೆ. ಈ ಎರಡೂ ಸಿನಿಮಾಗಳು ನಿರ್ಮಾಣದ ವಿವಿಧ ಹಂತಗಳಲ್ಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT