ಜಯಪ್ರದಾ 
ಸಿನಿಮಾ ಸುದ್ದಿ

ನಟಿ ಜಯಪ್ರದಾ ಜೈಲು ಶಿಕ್ಷೆ ರದ್ದತಿಗೆ ಮದ್ರಾಸ್ ಹೈಕೋರ್ಟ್ ನಕಾರ: 15 ದಿನದೊಳಗೆ ಖುದ್ದು ಹಾಜರಾಗಲು ಸೂಚನೆ

ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಿಧಿಸಿದ್ದ ಜೈಲು ಶಿಕ್ಷೆಯನ್ನು ಪ್ರಶ್ನಿಸಿ ಮಾಜಿ ಸಂಸದೆ ಮದ್ರಾಸ್ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ನಟಿಯ ಅರ್ಜಿಯನ್ನು ಅಂತಿಮವಾಗಿ ಹೈಕೋರ್ಟ್ ವಜಾಗೊಳಿಸಿದ್ದು, ಆರು ತಿಂಗಳ ಜೈಲು ಶಿಕ್ಷೆ ಮತ್ತು ಜಾಮೀನು ರಹಿತ ವಾರಂಟ್ ಎತ್ತಿಹಿಡಿದಿದೆ.

ಚೆನ್ನೈ: ಖ್ಯಾತ ನಟಿ ಜಯಪ್ರದಾ ಅವರಿಗೆ ಕೆಳ ಹಂತದ ನ್ಯಾಯಾಲಯ ವಿಧಿಸಿದ್ದ 6 ತಿಂಗಳ ಜೈಲು ಶಿಕ್ಷೆಯನ್ನು ಮದ್ರಾಸ್​ ಹೈಕೋರ್ಟ್ ​ಖಚಿತ ಪಡಿಸಿದೆ.

ನೌಕರರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ಮತ್ತು ಚೆನ್ನೈನ ಜನರಲ್ ಪ್ಯಾಟರ್ಸ್ ರಸ್ತೆಯಲ್ಲಿರುವ ಜಯಪ್ರದಾ ಥಿಯೇಟರ್‌ಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಈ ತೀರ್ಪು ನೀಡಿತ್ತು. ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಿಧಿಸಿದ್ದ ಜೈಲು ಶಿಕ್ಷೆಯನ್ನು ಪ್ರಶ್ನಿಸಿ ಮಾಜಿ ಸಂಸದೆ ಮದ್ರಾಸ್ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ನಟಿಯ ಅರ್ಜಿಯನ್ನು ಅಂತಿಮವಾಗಿ ಹೈಕೋರ್ಟ್ ವಜಾಗೊಳಿಸಿದ್ದು, ಆರು ತಿಂಗಳ ಜೈಲು ಶಿಕ್ಷೆ ಮತ್ತು ಜಾಮೀನು ರಹಿತ ವಾರಂಟ್ ಎತ್ತಿಹಿಡಿದಿದೆ.

ರಂಗಭೂಮಿ ನೌಕರರ ವೇತನದಿಂದ ಕಡಿತಗೊಳಿಸಿದ ಇಎಸ್‌ಐ ದೇಣಿಗೆಯನ್ನು ಸಲ್ಲಿಸಲು ವಿಫಲರಾದ ಜಯಪ್ರದಾ ಮತ್ತು ರಂಗಭೂಮಿಯ ಇತರ ಪಾಲುದಾರರ ವಿರುದ್ಧ ಇಎಸ್‌ಐಸಿ ದೂರು ದಾಖಲಿಸಿತ್ತು. ಆಗಸ್ಟ್ 10 ರಂದು, ಎಗ್ಮೋರ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ನಟಿ ಮತ್ತು ಅವರ ಸಂಸ್ಥೆಯ ಪಾಲುದಾರರನ್ನು ಇಎಸ್‌ಐಸಿ ಕಾಯ್ದೆಯ ಅಡಿಯಲ್ಲಿ ಅಪರಾಧಿ ಎಂದು ತೀರ್ಪು ನೀಡಿತ್ತು. ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಜೊತೆಗೆ ಆರು ತಿಂಗಳ ಸರಳ ಜೈಲು ಶಿಕ್ಷೆಯನ್ನು ವಿಧಿಸಿತ್ತು.

ಹೈಕೋರ್ಟ್ ನ್ಯಾಯಮೂರ್ತಿ ಜಿ.ಜಯಚಂದ್ರನ್ ಅವರು 15 ದಿನಗಳೊಳಗೆ ಎಗ್ಮೋರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಶರಣಾಗುವಂತೆ ನಟಿಗೆ ಸೂಚಿಸಿದ್ದಾರೆ. ನ್ಯಾಯಾಲಯದ ಆದೇಶಗಳನ್ನು ಪಾಲಿಸಿದರೆ ಜಯಪ್ರದಾ ಅವರಿಗೆ ಜಾಮೀನು ನೀಡುವಂತೆ ನ್ಯಾಯಾಧೀಶರು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸೂಚನೆ ನೀಡಿದರು ಮತ್ತು ಅಲ್ಲದೆ ಮುಂದಿನ 15 ದಿನದ ಒಳಗೆ ಖುದ್ದಾಗಿ ನ್ಯಾಯಾಲಯದ ಮುಂದೆ ಹಾಜರಾಗಿ ಜಾಮೀನಿಗಾಗಿ 20 ಲಕ್ಷ ರೂಪಾಯಿ ಬಾಂಡ್‌ಅನ್ನು ಪಾವತಿಸುವಂತೆ ಸೂಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT