ವರ್ತೂರು ಸಂತೋಷ್ 
ಸಿನಿಮಾ ಸುದ್ದಿ

ರಾಮೋಹಳ್ಳಿ ಪೊಲೀಸರಿಂದ ವರ್ತೂರು ಸಂತೋಷ್ ಅರೆಸ್ಟ್: ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಇದೇ ಮೊದಲು!

ಕನ್ನಡ ಕಿರುತೆರೆಯ ಜನಪ್ರಿಯ  ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿಯೊಬ್ಬರನ್ನ ಬಂಧಿಸಲಾಗಿದೆ.

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ  ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿಯೊಬ್ಬರನ್ನ ಬಂಧಿಸಲಾಗಿದೆ.

ಹುಲಿ ಉಗುರು ಇರುವ ಪೆಂಡೆಂಟ್‌ ಧರಿಸಿದ್ದರು ಎಂಬ ಆರೋಪ ಮೇಲೆ ವರ್ತೂರು ಸಂತೋಷ್ ಬಂಧನವಾಗಿದೆ. ಬಿಗ್ ಬಾಸ್ ಮನೆಯಿಂದ ಹೊರ ಕರೆತಂದು ಅರೆಸ್ಟ್ ಮಾಡಲಾಗಿದೆ. ರಾಮೋಹಳ್ಳಿ ಅರಣ್ಯಾಧಿಕಾರಿಗಳಿಂದ ವರ್ತೂರು ಸಂತೋಷ್ ಬಂಧನವಾಗಿದ್ದು, ಸದ್ಯ ರಾಮೋಹಳ್ಳಿ ಅರಣ್ಯಾಧಿಕಾರಿಗಳ ಕಸ್ಟಡಿಯಲ್ಲಿದ್ದಾರೆ.

ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಹಾಕಿಕೊಂಡಿದ್ದರು. ಈ ಕುರಿತು ಎಫ್​ಐಆರ್ ದಾಖಲಾಗಿತ್ತು. ವೈಲ್ಡ್​ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಬಂಧನವಾಗಿದೆ ಈ ಹಿನ್ನೆಲೆ ವರ್ತೂರು ಸಂತೋಷ್ ನನ್ನ ಬಂಧಿಸಿರುವ ಅರಣ್ಯಾಧಿಕಾರಿಗಳು  ವಿಚಾರಣೆ ನಡೆಸುತ್ತಿದ್ದಾರೆ.

ವರ್ತೂರು ಸಂತೋಷ್ ಅವರು ಹಲವು ಪ್ರಾಣಿಗಳನ್ನು ಸಾಕಿದ್ದಾರೆ. ಹಳ್ಳಿಕಾರ್ ಕ್ಯಾಟಲ್ ಬ್ರೀಡ್​ನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಇದಲ್ಲದೆ ಅಖಿಲ ಭಾರತ ಹಳ್ಳಿಕಾರ್‌ ತಳಿ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಸಂತೋಷ್ ಅವರು ಕತ್ತಿಗೆ ಒಂದು ಚೈನ್ ಹಾಕಿದ್ದರು. ಇದರಲ್ಲಿ ಹುಲಿಯ ಉಗುರು ಕಾಣಿಸಿದೆ. ಈ ಕಾರಣದಿಂದಲೇ ಅವರನ್ನು ಅರೆಸ್ಟ್ ಮಾಡಲಾಗಿದೆ.

ಟಿವಿಯಲ್ಲಿ ಹುಲಿ ಉಗುರು ಪೆಂಡೆಂಟ್ ಹಾಕಿಕೊಂಡ ದೃಶ್ಯವನ್ನು ಗಮನಿಸಿ ಕ್ರಮ ಕೈಗೊಳ್ಳಲಾಗಿದೆ. ಸಂತೋಷ್ ಅವರನ್ನು ಕಗ್ಗಲಿಪುರ ಅರಣ್ಯ ಇಲಾಖೆ ಕಚೇರಿಯಲ್ಲಿಟ್ಟು ವಿಚಾರಿಸಲಾಗುತ್ತಿದೆ. ಬಳಿಕ ಮ್ಯಾಜಿಸ್ಟ್ರೇಟ್ ಮುಂದೆ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ ಎಂದು ಬೆಂಗಳೂರು ಅರಣ್ಯ ಸಂರಕ್ಷಣಾ ಅಧಿಕಾರಿ ರವೀಂದ್ರ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT