ಮಾನ್ವಿತಾ ಕಾಮತ್ 
ಸಿನಿಮಾ ಸುದ್ದಿ

ಲೋಹಿತ್ ಹೆಚ್ ನಿರ್ದೇಶನದ 'ಕ್ಯಾಪ್ಚರ್' ಚಿತ್ರತಂಡ ಸೇರಿಕೊಂಡ ಟಗರು ಪುಟ್ಟಿ ಮಾನ್ವಿತಾ ಕಾಮತ್!

ಟಗರು ಚಿತ್ರದಲ್ಲಿನ ಪಾತ್ರಕ್ಕೆ ಹೆಸರುವಾಸಿಯಾಗಿರುವ ನಟಿ ಮಾನ್ವಿತಾ ಕಾಮತ್ ಕೊನೆಯ ಬಾರಿ ಶಿವ 143 ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಲೋಹಿತ್ ಹೆಚ್ ನಿರ್ದೇಶನದ 'ಕ್ಯಾಪ್ಚರ್' ಸಿನಿಮಾದಲ್ಲಿ ನಟಿ ಪ್ರಿಯಾಂಕಾ ಉಪೇಂದ್ರ ಅವರೊಂದಿಗೆ ತೆರೆಹಂಚಿಕೊಳ್ಳಲಿದ್ದಾರೆ. 

ಟಗರು ಚಿತ್ರದಲ್ಲಿನ ಪಾತ್ರಕ್ಕೆ ಹೆಸರುವಾಸಿಯಾಗಿರುವ ನಟಿ ಮಾನ್ವಿತಾ ಕಾಮತ್ ಕೊನೆಯ ಬಾರಿ ಶಿವ 143 ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಲೋಹಿತ್ ಹೆಚ್ ನಿರ್ದೇಶನದ 'ಕ್ಯಾಪ್ಚರ್' ಸಿನಿಮಾದಲ್ಲಿ ನಟಿ ಪ್ರಿಯಾಂಕಾ ಉಪೇಂದ್ರ ಅವರೊಂದಿಗೆ ತೆರೆಹಂಚಿಕೊಳ್ಳಲಿದ್ದಾರೆ. 

ನಟಿ ಪ್ರಿಯಾಂಕಾ ಅವರ ಮಗಳಾಗಿ ಮಹತ್ವದ ಪಾತ್ರದಲ್ಲಿ ಮಾನ್ವಿತಾ ನಟಿಸಲಿದ್ದಾರೆ. ಈ ಚಿತ್ರದ ಮೂಲಕ ಇದೇ ಮೊದಲ ಬಾರಿಗೆ ಮಾನ್ವಿತ ಹಾರರ್ ಸಿನಿಮಾದ ಭಾಗವಾಗಿದ್ದಾರೆ. 

ಈಗಾಗಲೇ ಗೋವಾದಲ್ಲಿ ಪ್ರಿಯಾಂಕಾ ಅವರ ಜೊತೆಗಿನ ತಮ್ಮ ಭಾಗಗಳನ್ನು ಚಿತ್ರೀಕರಿಸಿರುವ ಮಾನ್ವಿತಾ, 'ಇದು ನನ್ನ ಮೊದಲ ಹಾರರ್ ಚಿತ್ರ. ಆರಂಭದಲ್ಲಿ ಈ ಪ್ರಕಾರದಲ್ಲಿ ಕೆಲಸ ಮಾಡಲು ನಾನು ಹೆದರುತ್ತಿದ್ದೆ. ಆದರೆ, ಚಿತ್ರದಲ್ಲಿನ ಪಾತ್ರ ಆಕರ್ಷಕವಾಗಿರುವುದರಿಂದ ಈ ಪಾತ್ರವನ್ನು ನಾನು ಒಪ್ಪಿಕೊಂಡೆ. ನಾವು ಗೋವಾದಲ್ಲಿ 15 ದಿನಗಳ ಚಿತ್ರೀಕರಣ ಮುಗಿಸಿದ್ದೇವೆ ಮತ್ತು ಪ್ರಿಯಾಂಕಾ ಉಪೇಂದ್ರ ಅವರೊಂದಿಗೆ ನಟಿಸಿದ್ದು ತುಂಬಾ ಚೆನ್ನಾಗಿತ್ತು' ಎಂದಿದ್ದಾರೆ.

ಕ್ಯಾಪ್ಟರ್ ಸಿನಿಮಾದ ಪೋಸ್ಟರ್

'ಶೂಟಿಂಗ್ ಮಾಡುವಾಗ ಎಲ್ಲವೂ ಚೆನ್ನಾಗಿತ್ತು. ಆದರೆ, ನಾನು ಮನೆಗೆ ಹಿಂದಿರುಗಿದಾಗ ಸ್ವಲ್ಪ ಮಟ್ಟಿಗೆ ಭಯವಾಯಿತು' ಎಂದು ಅವರು ಹೇಳುತ್ತಾರೆ.

ಮಮ್ಮಿ- ಸೇವ್ ಮಿ ಮತ್ತು ದೇವಕಿ ನಂತರ ಪ್ರಿಯಾಂಕಾ ಮತ್ತು ಲೋಹಿತ್ ಎಚ್ ನಡುವಿನ ಮೂರನೇ ಸಿನಿಮಾ ಕ್ಯಾಪ್ಚರ್ ಆಗಿದ್ದು, ನಿರ್ದೇಶಕರೊಂದಿಗೆ ಮಾನ್ವಿತಾ ಇದೇ ಮೊದಲ ಬಾರಿಗೆ ಕೆಲಸ ಮಾಡುತ್ತಿದ್ದಾರೆ.

ಇಡೀ ಸಿನಿಮಾವನ್ನು ಸಿಸಿಟಿವಿಯ ದೃಷ್ಟಿಕೋನದಿಂದ ಚಿತ್ರೀಕರಿಸಲಾಗಿದೆ ಎಂಬುದು ಚಿತ್ರದ ವಿಶೇಷವಾಗಿದ್ದು, ಇದು ಸಾಕಷ್ಟು ಕುತೂಹಲವನ್ನು ಉಂಟುಮಾಡುತ್ತದೆ. ಭಾರತೀಯ ಚಿತ್ರರಂಗದಲ್ಲಿ ಇದೇ ಮೊದಲನೆಯದು.

ಶ್ರೀ ದುರ್ಗಾಪರಮೇಶ್ವರಿ ಪ್ರೊಡಕ್ಷನ್ ಅಡಿಯಲ್ಲಿ ರವಿರಾಜ್ ಅವರು ಕ್ಯಾಪ್ಚರ್ ಅನ್ನು ನಿರ್ಮಿಸಿದ್ದಾರೆ. ಚಿತ್ರವು ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ನವೆಂಬರ್‌ನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್