ವರ್ತೂರು ಸಂತೋಷ್ 
ಸಿನಿಮಾ ಸುದ್ದಿ

ಹುಲಿ ಉಗುರು ಪ್ರಕರಣ: ಜಾಮೀನು ದೊರೆತ ಮೇಲೆ ಬಿಗ್ ಬಾಸ್ ಮನೆಗೆ ವರ್ತೂರು ಸಂತೋಷ್ ಮತ್ತೆ ಎಂಟ್ರಿ!?

ಜಾಮೀನು ದೊರೆತ ಹಿನ್ನೆಲೆಯಲ್ಲಿ ಜೈಲಿನಿಂದ  ಶುಕ್ರವಾರವೇ ಹೊರಬಂದಿರುವ ವರ್ತೂರ್ ಸಂತೋಷ್ ಮತ್ತೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ದೊಡ್ಮನೆ ಪ್ರವೇಶದ ಹಿನ್ನೆಲೆಯಲ್ಲೇ ನಿನ್ನೆ ಅವರನ್ನು ಮಾಧ್ಯಮಗಳ ಮುಂದೆ ಹೋಗದಂತೆ ತಡೆಯಲಾಯಿತು. ಕನಿಷ್ಠ ಅವರ ಕುಟುಂಬದ ಜೊತೆಯೂ ಮಾತನಾಡಲಿಕ್ಕೆ ಅವಕಾಶ ಕಲ್ಪಿಸಿಲ್ಲ.

ಬೆಂಗಳೂರು: ಜಾಮೀನು ದೊರೆತ ಹಿನ್ನೆಲೆಯಲ್ಲಿ ಜೈಲಿನಿಂದ  ಶುಕ್ರವಾರವೇ ಹೊರಬಂದಿರುವ ವರ್ತೂರ್ ಸಂತೋಷ್ ಮತ್ತೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ದೊಡ್ಮನೆ ಪ್ರವೇಶದ ಹಿನ್ನೆಲೆಯಲ್ಲೇ ನಿನ್ನೆ ಅವರನ್ನು ಮಾಧ್ಯಮಗಳ ಮುಂದೆ ಹೋಗದಂತೆ ತಡೆಯಲಾಯಿತು. ಕನಿಷ್ಠ ಅವರ ಕುಟುಂಬದ ಜೊತೆಯೂ ಮಾತನಾಡಲಿಕ್ಕೆ ಅವಕಾಶ ಕಲ್ಪಿಸಿಲ್ಲ.

ಬಿಗ್ ಬಾಸ್ ನಿಯಮದ ಪ್ರಕಾರ, ಒಂದು ಸಲ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆದ ನಂತರ ಮತ್ತೆ ಅವರು ಕುಟುಂಬದೊಂದಿಗೆ ಸಂಪರ್ಕ ಮಾಡುವುದಾಗಲಿ ಮತ್ತು ಕುಟುಂಬದ ಸದಸ್ಯರ ಜೊತೆ ಬೆರೆಯುವುದಾಗಲಿ ಮಾಡುವಂತಿಲ್ಲ. ಆ ನಿಯಮವನ್ನು ವರ್ತೂರ್ ಕೂಡ ಮಾಡಿದ್ದಾರೆ. ಹಾಗಾಗಿ ಜೈಲಿನಿಂದ ಸೀದಾ ಅವರು ಬಿಗ್ ಬಾಸ್ ಮನೆಗೆ ಹೋಗಿದ್ದಾರೆ.

ಜಾಮೀನು ದೊರೆತ ಹಿನ್ನೆಲೆಯಲ್ಲಿ ಜೈಲಿನಿಂದ ಶುಕ್ರವಾರವೇ ಹೊರಬಂದಿರುವ ವರ್ತೂರ್ ಸಂತೋಷ್ ಮತ್ತೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿದ್ದಾರೆ. ದೊಡ್ಮನೆ ಪ್ರವೇಶದ ಹಿನ್ನೆಲೆಯಲ್ಲೇ ನಿನ್ನೆ ಅವರನ್ನು ಮಾಧ್ಯಮಗಳ ಮುಂದೆ ಹೋಗದಂತೆ ತಡೆಯಲಾಯಿತು. ಕನಿಷ್ಠ ಅವರ ಕುಟುಂಬದ ಜೊತೆಯೂ ಮಾತನಾಡಲಿಕ್ಕೆ ಅವಕಾಶ ಕಲ್ಪಿಸಿಲ್ಲ.

ಬಿಗ್ ಬಾಸ್ ನಿಯಮದ ಪ್ರಕಾರ, ಒಂದು ಸಲ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆದ ನಂತರ ಮತ್ತೆ ಅವರು ಕುಟುಂಬದೊಂದಿಗೆ ಸಂಪರ್ಕ ಮಾಡುವುದಾಗಲಿ ಮತ್ತು ಕುಟುಂಬದ ಸದಸ್ಯರ ಜೊತೆ ಬೆರೆಯುವುದಾಗಲಿ ಮಾಡುವಂತಿಲ್ಲ. ಆ ನಿಯಮವನ್ನು ವರ್ತೂರ್ ಕೂಡ ಮಾಡಿದ್ದಾರೆ. ಹಾಗಾಗಿ ಜೈಲಿನಿಂದ ಸೀದಾ ಅವರು ಬಿಗ್ ಬಾಸ್ ಮನೆಗೆ ಹೋಗಿದ್ದಾರೆ.

ನಿನ್ನೆ ರಾತ್ರಿಯೇ ಬೆಂಗಳೂರಿನ ದೊಡ್ಡ ಆಲದ ಮರ ಬಳಿ ನಿರ್ಮಿಸಲಾದ ಬಿಗ್ ಬಾಸ್ ಮನೆಗೆ ಸಂತೋಷ್ ಅವರನ್ನು ಕರೆದುಕೊಂಡು ಹೋಗಲಾಗಿದೆ. ನಂತರ ಅವರಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯದ ತಪಾಸಣೆ ನಂತರವೇ ಅವರನ್ನು ಬಿಗ್ ಬಾಸ್ ಮನೆ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.

ನಿನ್ನೆಯೇ ಬಿಗ್ ಬಾಸ್ ತಂಡವನ್ನು ಸೇರಿರುವ ಸಂತೋಷ್, ಇಂದು ಬಿಗ್ ಬಾಸ್ ಮನೆ ಪ್ರವೇಶ ಮಾಡಲಿದ್ದಾರೆ. ಅದು ಹೇಗೆ ಎನ್ನುವ ಗೌಪ್ಯತೆಯನ್ನು ಕಾಪಾಡಿಕೊಳ್ಳಲಾಗಿದೆ. ಬಿಗ್ ಬಾಸ್ ಮನೆಗೆ ಹೋಗುವ ಕುರಿತು ಸಂತೋಷ್ ತಾಯಿಯೂ ಖಚಿತ ಪಡಿಸಿದ್ದಾರೆ. ಅವರ ಎಂಟ್ರಿ ಹೇಗಿರಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT