ವರ್ತೂರು ಸಂತೋಷ್ 
ಸಿನಿಮಾ ಸುದ್ದಿ

ಹುಲಿ ಉಗುರು ಪ್ರಕರಣ: ಜಾಮೀನು ದೊರೆತ ಮೇಲೆ ಬಿಗ್ ಬಾಸ್ ಮನೆಗೆ ವರ್ತೂರು ಸಂತೋಷ್ ಮತ್ತೆ ಎಂಟ್ರಿ!?

ಜಾಮೀನು ದೊರೆತ ಹಿನ್ನೆಲೆಯಲ್ಲಿ ಜೈಲಿನಿಂದ  ಶುಕ್ರವಾರವೇ ಹೊರಬಂದಿರುವ ವರ್ತೂರ್ ಸಂತೋಷ್ ಮತ್ತೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ದೊಡ್ಮನೆ ಪ್ರವೇಶದ ಹಿನ್ನೆಲೆಯಲ್ಲೇ ನಿನ್ನೆ ಅವರನ್ನು ಮಾಧ್ಯಮಗಳ ಮುಂದೆ ಹೋಗದಂತೆ ತಡೆಯಲಾಯಿತು. ಕನಿಷ್ಠ ಅವರ ಕುಟುಂಬದ ಜೊತೆಯೂ ಮಾತನಾಡಲಿಕ್ಕೆ ಅವಕಾಶ ಕಲ್ಪಿಸಿಲ್ಲ.

ಬೆಂಗಳೂರು: ಜಾಮೀನು ದೊರೆತ ಹಿನ್ನೆಲೆಯಲ್ಲಿ ಜೈಲಿನಿಂದ  ಶುಕ್ರವಾರವೇ ಹೊರಬಂದಿರುವ ವರ್ತೂರ್ ಸಂತೋಷ್ ಮತ್ತೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ದೊಡ್ಮನೆ ಪ್ರವೇಶದ ಹಿನ್ನೆಲೆಯಲ್ಲೇ ನಿನ್ನೆ ಅವರನ್ನು ಮಾಧ್ಯಮಗಳ ಮುಂದೆ ಹೋಗದಂತೆ ತಡೆಯಲಾಯಿತು. ಕನಿಷ್ಠ ಅವರ ಕುಟುಂಬದ ಜೊತೆಯೂ ಮಾತನಾಡಲಿಕ್ಕೆ ಅವಕಾಶ ಕಲ್ಪಿಸಿಲ್ಲ.

ಬಿಗ್ ಬಾಸ್ ನಿಯಮದ ಪ್ರಕಾರ, ಒಂದು ಸಲ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆದ ನಂತರ ಮತ್ತೆ ಅವರು ಕುಟುಂಬದೊಂದಿಗೆ ಸಂಪರ್ಕ ಮಾಡುವುದಾಗಲಿ ಮತ್ತು ಕುಟುಂಬದ ಸದಸ್ಯರ ಜೊತೆ ಬೆರೆಯುವುದಾಗಲಿ ಮಾಡುವಂತಿಲ್ಲ. ಆ ನಿಯಮವನ್ನು ವರ್ತೂರ್ ಕೂಡ ಮಾಡಿದ್ದಾರೆ. ಹಾಗಾಗಿ ಜೈಲಿನಿಂದ ಸೀದಾ ಅವರು ಬಿಗ್ ಬಾಸ್ ಮನೆಗೆ ಹೋಗಿದ್ದಾರೆ.

ಜಾಮೀನು ದೊರೆತ ಹಿನ್ನೆಲೆಯಲ್ಲಿ ಜೈಲಿನಿಂದ ಶುಕ್ರವಾರವೇ ಹೊರಬಂದಿರುವ ವರ್ತೂರ್ ಸಂತೋಷ್ ಮತ್ತೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿದ್ದಾರೆ. ದೊಡ್ಮನೆ ಪ್ರವೇಶದ ಹಿನ್ನೆಲೆಯಲ್ಲೇ ನಿನ್ನೆ ಅವರನ್ನು ಮಾಧ್ಯಮಗಳ ಮುಂದೆ ಹೋಗದಂತೆ ತಡೆಯಲಾಯಿತು. ಕನಿಷ್ಠ ಅವರ ಕುಟುಂಬದ ಜೊತೆಯೂ ಮಾತನಾಡಲಿಕ್ಕೆ ಅವಕಾಶ ಕಲ್ಪಿಸಿಲ್ಲ.

ಬಿಗ್ ಬಾಸ್ ನಿಯಮದ ಪ್ರಕಾರ, ಒಂದು ಸಲ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆದ ನಂತರ ಮತ್ತೆ ಅವರು ಕುಟುಂಬದೊಂದಿಗೆ ಸಂಪರ್ಕ ಮಾಡುವುದಾಗಲಿ ಮತ್ತು ಕುಟುಂಬದ ಸದಸ್ಯರ ಜೊತೆ ಬೆರೆಯುವುದಾಗಲಿ ಮಾಡುವಂತಿಲ್ಲ. ಆ ನಿಯಮವನ್ನು ವರ್ತೂರ್ ಕೂಡ ಮಾಡಿದ್ದಾರೆ. ಹಾಗಾಗಿ ಜೈಲಿನಿಂದ ಸೀದಾ ಅವರು ಬಿಗ್ ಬಾಸ್ ಮನೆಗೆ ಹೋಗಿದ್ದಾರೆ.

ನಿನ್ನೆ ರಾತ್ರಿಯೇ ಬೆಂಗಳೂರಿನ ದೊಡ್ಡ ಆಲದ ಮರ ಬಳಿ ನಿರ್ಮಿಸಲಾದ ಬಿಗ್ ಬಾಸ್ ಮನೆಗೆ ಸಂತೋಷ್ ಅವರನ್ನು ಕರೆದುಕೊಂಡು ಹೋಗಲಾಗಿದೆ. ನಂತರ ಅವರಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯದ ತಪಾಸಣೆ ನಂತರವೇ ಅವರನ್ನು ಬಿಗ್ ಬಾಸ್ ಮನೆ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.

ನಿನ್ನೆಯೇ ಬಿಗ್ ಬಾಸ್ ತಂಡವನ್ನು ಸೇರಿರುವ ಸಂತೋಷ್, ಇಂದು ಬಿಗ್ ಬಾಸ್ ಮನೆ ಪ್ರವೇಶ ಮಾಡಲಿದ್ದಾರೆ. ಅದು ಹೇಗೆ ಎನ್ನುವ ಗೌಪ್ಯತೆಯನ್ನು ಕಾಪಾಡಿಕೊಳ್ಳಲಾಗಿದೆ. ಬಿಗ್ ಬಾಸ್ ಮನೆಗೆ ಹೋಗುವ ಕುರಿತು ಸಂತೋಷ್ ತಾಯಿಯೂ ಖಚಿತ ಪಡಿಸಿದ್ದಾರೆ. ಅವರ ಎಂಟ್ರಿ ಹೇಗಿರಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT